<p><strong>ಹುಬ್ಬಳ್ಳಿ: </strong>`ಬರ ಹಾಗೂ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾನುವಾರ ಇಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.<br /> <br /> ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸಿದ್ದು ಸವದಿ ಅವರ ಪುತ್ರಿಯ ಮದುವೆಗೆ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಗೆ ತೆರಳಲು ವಿಶೇಷ ವಿಮಾನದಲ್ಲಿ ಭಾನುವಾರ ಇಲ್ಲಿಗೆ ಆಗಮಿಸಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.<br /> <br /> `ಬರ ಅಧ್ಯಯನಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗಳು 3 ತಂಡಗಳನ್ನು ರಚಿಸಿದ್ದಾರೆ. ಜೊತೆಗೆ ನಾನು ಸಹ 7-8 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಸರ್ಕಾರಕ್ಕೆ ವರದಿ ಕೊಟ್ಟಿರುವೆ. ಬರಗಾಲವನ್ನು ಸೂಕ್ತವಾಗಿ ಸರ್ಕಾರ ನಿಭಾಯಿಸುತ್ತದೆ~ ಎಂದು ಹೇಳಿದರು.<br /> <br /> `ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸುಮಾರು ರೂ 2,600 ಕೋಟಿ ಬೇಡಿಕೆ ಇಡಲಾಗಿದೆ. ಕೂಡಲೇ ರೂ 1,000 ಕೋಟಿಗಳನ್ನು ಬಿಡುಗಡೆ ಮಾಡಬೇಕು~ ಎಂದು ಅವರು ಒತ್ತಾಯಿಸಿದರು.<br /> <br /> ಉಪನ್ಯಾಸಕರಿಗೆ ಸಲಹೆ: `ಪಿಯು ಕಾಲೇಜಿನ ಉಪನ್ಯಾಸಕರು ತಮ್ಮ ವೇತನ ಪರಿಷ್ಕರಣೆ ಮಾಡಬೇಕೆಂದು ಮುಷ್ಕರ ಕೈಗೊಂಡಿರುವುದು ಸರಿಯಲ್ಲ. ಸರ್ಕಾರದೊಂದಿಗೆ ಚರ್ಚಿಸಿ, ಮೌಲ್ಯಮಾಪನಕ್ಕೆ ಮುಂದಾಗಬೇಕು~ ಎಂದು ಅವರು ಸಲಹೆ ನೀಡಿದರು.<br /> <br /> ಕಾಂಗ್ರೆಸ್ ಸೇರುವ ಕುರಿತು ಕೇಳಿದ ಪ್ರಶ್ನೆಗೆ `ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕನಸಿನಲ್ಲಿಯೂ ಸೇರುವ ಯೋಚನೆಯಿಲ್ಲ. ಬೇರೆ ಪಕ್ಷದವರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>`ಬರ ಹಾಗೂ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾನುವಾರ ಇಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.<br /> <br /> ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸಿದ್ದು ಸವದಿ ಅವರ ಪುತ್ರಿಯ ಮದುವೆಗೆ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಗೆ ತೆರಳಲು ವಿಶೇಷ ವಿಮಾನದಲ್ಲಿ ಭಾನುವಾರ ಇಲ್ಲಿಗೆ ಆಗಮಿಸಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.<br /> <br /> `ಬರ ಅಧ್ಯಯನಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗಳು 3 ತಂಡಗಳನ್ನು ರಚಿಸಿದ್ದಾರೆ. ಜೊತೆಗೆ ನಾನು ಸಹ 7-8 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಸರ್ಕಾರಕ್ಕೆ ವರದಿ ಕೊಟ್ಟಿರುವೆ. ಬರಗಾಲವನ್ನು ಸೂಕ್ತವಾಗಿ ಸರ್ಕಾರ ನಿಭಾಯಿಸುತ್ತದೆ~ ಎಂದು ಹೇಳಿದರು.<br /> <br /> `ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸುಮಾರು ರೂ 2,600 ಕೋಟಿ ಬೇಡಿಕೆ ಇಡಲಾಗಿದೆ. ಕೂಡಲೇ ರೂ 1,000 ಕೋಟಿಗಳನ್ನು ಬಿಡುಗಡೆ ಮಾಡಬೇಕು~ ಎಂದು ಅವರು ಒತ್ತಾಯಿಸಿದರು.<br /> <br /> ಉಪನ್ಯಾಸಕರಿಗೆ ಸಲಹೆ: `ಪಿಯು ಕಾಲೇಜಿನ ಉಪನ್ಯಾಸಕರು ತಮ್ಮ ವೇತನ ಪರಿಷ್ಕರಣೆ ಮಾಡಬೇಕೆಂದು ಮುಷ್ಕರ ಕೈಗೊಂಡಿರುವುದು ಸರಿಯಲ್ಲ. ಸರ್ಕಾರದೊಂದಿಗೆ ಚರ್ಚಿಸಿ, ಮೌಲ್ಯಮಾಪನಕ್ಕೆ ಮುಂದಾಗಬೇಕು~ ಎಂದು ಅವರು ಸಲಹೆ ನೀಡಿದರು.<br /> <br /> ಕಾಂಗ್ರೆಸ್ ಸೇರುವ ಕುರಿತು ಕೇಳಿದ ಪ್ರಶ್ನೆಗೆ `ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕನಸಿನಲ್ಲಿಯೂ ಸೇರುವ ಯೋಚನೆಯಿಲ್ಲ. ಬೇರೆ ಪಕ್ಷದವರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>