<p>ಅರಕಲಗೂಡು: ರೈತರಿಗೆ ವೈಜ್ಞಾನಿಕ ರೀತಿಯಲ್ಲಿ ಕೂಲಿ ನೀಡುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.<br /> <br /> ತಾಲ್ಲೂಕು ಕಚೇರಿ ಆವರಣಕ್ಕೆ ಆಗಮಿಸಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಧರಣಿ ನಡೆಸಿದರು. <br /> ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಮುಖಂಡ ಹೊ.ತಿ. ಹುಚ್ಚಪ್ಪ, `ರಾಜ್ಯದ 123 ತಾಲ್ಲೂಕುಗಳಲ್ಲಿ ಬರಸ್ಥಿತಿ ಇದೆ ಎಂದು ಸರ್ಕಾರವೇ ಘೋಷಿಸಿದೆ. ಆದರೆ ಬರ ಪೀಡಿತ ಪ್ರದೇಶಗಳಿಗೆ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗಿದೆ. ಬರ ಇದ್ದರೂ ಮಂತ್ರಿಗಳು, ಶಾಸಕರು, ಅಧಿಕಾರಿಗಳು ತಮಗೆ ಬರಬೇಕಾದ ವೇತನ ಹಾಗೂ ಸವಲತ್ತು ಪಡೆಯತ್ತಿದ್ದಾರೆ~ ಎಂದು ಟೀಕಿಸಿದರು. <br /> <br /> `ಬಿತ್ತಿದ ಬೆಳೆಯನ್ನು ರೈತರು ಕಳೆದುಕೊಂಡಿದ್ದಾರೆ. ದನಕರುಗಳು ಕುಡಿಯುವ ನೀರು, ಮೇವು ಇಲ್ಲದೆ ಸಂಕಟ ಅನುಭವಿಸುತ್ತಿವೆ. ಸಮಾಜಕ್ಕೆ ಅನ್ನ ನೀಡುವ ರೈತರಿಗೆ ಕೂಲಿ ಕೊಡಲು ಸರ್ಕಾರ ನಿರಾಕರಿಸುತ್ತಿದೆ~ ಎಂದು ಆರೋಪಿಸಿದರು.<br /> <br /> ಕೃಷಿ ಚಟುವಟಿಕೆಯಿಂದ ರೈತರಿಗೆ ಸಿಗುತ್ತಿದ್ದ ಆದಾಯವನ್ನು ಸರ್ಕಾರ ಕೂಲಿ ರೂಪದಲ್ಲಿ ನೀಡಬೇಕು. ಈ ಸಂಬಂಧ ಮುಖ್ಯಮಂತ್ರಿಗಳು ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು~ ಎಂದು ಆಗ್ರಹಿಸಿದರು. <br /> <br /> ತಾಲ್ಲೂಕು ಕಚೇರಿ ಮುಂದೆ ಸ್ವಲ್ಪ ಹೊತ್ತು ಪ್ರತಿಭಟನೆ ನಡೆಸಿದ ರೈತರು, ಬಳಿಕ ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಕಲಗೂಡು: ರೈತರಿಗೆ ವೈಜ್ಞಾನಿಕ ರೀತಿಯಲ್ಲಿ ಕೂಲಿ ನೀಡುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.<br /> <br /> ತಾಲ್ಲೂಕು ಕಚೇರಿ ಆವರಣಕ್ಕೆ ಆಗಮಿಸಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಧರಣಿ ನಡೆಸಿದರು. <br /> ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಮುಖಂಡ ಹೊ.ತಿ. ಹುಚ್ಚಪ್ಪ, `ರಾಜ್ಯದ 123 ತಾಲ್ಲೂಕುಗಳಲ್ಲಿ ಬರಸ್ಥಿತಿ ಇದೆ ಎಂದು ಸರ್ಕಾರವೇ ಘೋಷಿಸಿದೆ. ಆದರೆ ಬರ ಪೀಡಿತ ಪ್ರದೇಶಗಳಿಗೆ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗಿದೆ. ಬರ ಇದ್ದರೂ ಮಂತ್ರಿಗಳು, ಶಾಸಕರು, ಅಧಿಕಾರಿಗಳು ತಮಗೆ ಬರಬೇಕಾದ ವೇತನ ಹಾಗೂ ಸವಲತ್ತು ಪಡೆಯತ್ತಿದ್ದಾರೆ~ ಎಂದು ಟೀಕಿಸಿದರು. <br /> <br /> `ಬಿತ್ತಿದ ಬೆಳೆಯನ್ನು ರೈತರು ಕಳೆದುಕೊಂಡಿದ್ದಾರೆ. ದನಕರುಗಳು ಕುಡಿಯುವ ನೀರು, ಮೇವು ಇಲ್ಲದೆ ಸಂಕಟ ಅನುಭವಿಸುತ್ತಿವೆ. ಸಮಾಜಕ್ಕೆ ಅನ್ನ ನೀಡುವ ರೈತರಿಗೆ ಕೂಲಿ ಕೊಡಲು ಸರ್ಕಾರ ನಿರಾಕರಿಸುತ್ತಿದೆ~ ಎಂದು ಆರೋಪಿಸಿದರು.<br /> <br /> ಕೃಷಿ ಚಟುವಟಿಕೆಯಿಂದ ರೈತರಿಗೆ ಸಿಗುತ್ತಿದ್ದ ಆದಾಯವನ್ನು ಸರ್ಕಾರ ಕೂಲಿ ರೂಪದಲ್ಲಿ ನೀಡಬೇಕು. ಈ ಸಂಬಂಧ ಮುಖ್ಯಮಂತ್ರಿಗಳು ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು~ ಎಂದು ಆಗ್ರಹಿಸಿದರು. <br /> <br /> ತಾಲ್ಲೂಕು ಕಚೇರಿ ಮುಂದೆ ಸ್ವಲ್ಪ ಹೊತ್ತು ಪ್ರತಿಭಟನೆ ನಡೆಸಿದ ರೈತರು, ಬಳಿಕ ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>