<p><strong>ಬೆಂಗಳೂರು: </strong>`ಬಹುತೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಸರ್ಕಾರ ಶೀಘ್ರದಲ್ಲೇ ಬರ ಪರಿಹಾರ ಕಾರ್ಯಗಳನ್ನು ಕೈ ಗೊಳ್ಳಬೇಕು~ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಒತ್ತಾಯಿಸಿದರು.<br /> <br /> ನಗರದಲ್ಲಿ ಸೋಮವಾರ ವಿಧಾನಸೌಧ ಆವರಣದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ ಅವರು, `ಬೇಸಿಗೆ ದಿನಗಳ ನೀರಿನ ಬವಣೆಯನ್ನು ನಿರ್ವಹಿಸಲು ರಾಜ್ಯ ಸರ್ಕಾರ ಅಸಮರ್ಥವಾಗಿದೆ. ಜನ ಹಾಗೂ ಜಾನುವಾರುಗಳಿಗೆ ನೀರು, ಆಹಾರವನ್ನು ಒದಗಿಸುವ ಕೆಲಸಕ್ಕೆ ಈ ವರೆಗೂ ಮುಂದಾಗದ ಮಂತ್ರಿಗಳು ಕೇವಲ ಪಕ್ಷದ ಆಂತರಿಕ ರಾಜಕಾರಣದಲ್ಲಿ ಮುಳುಗಿ ಹೋಗಿದೆ. ಸರ್ಕಾರ ಕೂಡಲೇ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು~ ಎಂದು ಆಗ್ರಹಿಸಿದರು.<br /> <br /> `ಕೇಂದ್ರದ ಮೇಲೆ ಒತ್ತಡ ತಂದು ರಾಜ್ಯ ನೀರಾವರಿ ವಿವಾದಗಳನ್ನು ಶೀಘ್ರವಾಗಿ ಬಗೆಹರಿಸಲು ಪ್ರಯತ್ನಿಸಬೇಕು. ಬರ ಪರಿಸ್ಥಿತಿ ನಿರ್ವಹಣೆಗಾಗಿ ಸರ್ಕಾರ ವಿಶೇಷ ಯೋಜನೆಯನ್ನು ರೂಪಿಸಬೇಕು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಬಹುತೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಸರ್ಕಾರ ಶೀಘ್ರದಲ್ಲೇ ಬರ ಪರಿಹಾರ ಕಾರ್ಯಗಳನ್ನು ಕೈ ಗೊಳ್ಳಬೇಕು~ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಒತ್ತಾಯಿಸಿದರು.<br /> <br /> ನಗರದಲ್ಲಿ ಸೋಮವಾರ ವಿಧಾನಸೌಧ ಆವರಣದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ ಅವರು, `ಬೇಸಿಗೆ ದಿನಗಳ ನೀರಿನ ಬವಣೆಯನ್ನು ನಿರ್ವಹಿಸಲು ರಾಜ್ಯ ಸರ್ಕಾರ ಅಸಮರ್ಥವಾಗಿದೆ. ಜನ ಹಾಗೂ ಜಾನುವಾರುಗಳಿಗೆ ನೀರು, ಆಹಾರವನ್ನು ಒದಗಿಸುವ ಕೆಲಸಕ್ಕೆ ಈ ವರೆಗೂ ಮುಂದಾಗದ ಮಂತ್ರಿಗಳು ಕೇವಲ ಪಕ್ಷದ ಆಂತರಿಕ ರಾಜಕಾರಣದಲ್ಲಿ ಮುಳುಗಿ ಹೋಗಿದೆ. ಸರ್ಕಾರ ಕೂಡಲೇ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು~ ಎಂದು ಆಗ್ರಹಿಸಿದರು.<br /> <br /> `ಕೇಂದ್ರದ ಮೇಲೆ ಒತ್ತಡ ತಂದು ರಾಜ್ಯ ನೀರಾವರಿ ವಿವಾದಗಳನ್ನು ಶೀಘ್ರವಾಗಿ ಬಗೆಹರಿಸಲು ಪ್ರಯತ್ನಿಸಬೇಕು. ಬರ ಪರಿಸ್ಥಿತಿ ನಿರ್ವಹಣೆಗಾಗಿ ಸರ್ಕಾರ ವಿಶೇಷ ಯೋಜನೆಯನ್ನು ರೂಪಿಸಬೇಕು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>