<p>ಹಾಸನ: `ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಯುದ್ಧೋಪಾದಿಯಲ್ಲಿ ಸಿದ್ಧತೆ ಮಾಡಿಕೊಳ್ಳಿ. ಅದನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು~ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕುಮಾರ ನಾಯಕ್ ಸೋಮವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.<br /> <br /> ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಹೇಮಾವತಿ ಜಲಾಶಯದಿಂದ ಕಾಲುವೆಗಳ ಮೂಲಕ ನೀರು ಹರಿಸಿ ಕೆರೆಗಳನ್ನು ತುಂಬಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಒಂದೆರಡು ದಿನದಲ್ಲೇ ವರದಿ ತಯಾರಿಸಿ ಕೊಡುವಂತೆ ಅವರು ಜಲಾಶಯದ ಎಂಜಿನಿಯರ್ಗಳಿಗೆ ಸೂಚನೆ ನೀಡಿದರು.<br /> <br /> 2011ರಲ್ಲಿ ಯಾವ್ಯಾವ ತಾಲ್ಲೂಕಿನಲ್ಲಿ ಎಷ್ಟೆಷ್ಟು ಪ್ರಮಾಣದಲ್ಲಿ ಮಳೆಯಾಗಿದೆ. ಯಾವ ತಾಲ್ಲೂಕಿನಲ್ಲಿ ಸರಾಸರಿ ಮಳೆಗಿಂತ ಕಡಿಮೆ ಮಳೆಯಾಗಿದೆ. ಯಾವ ತಾಲ್ಲೂಕು/ಹೋಬಳಿಯಲ್ಲಿ ಅಂತರ್ಜಲ ಮಟ್ಟ ಸರಾಸರಿ ಮಟ್ಟಕ್ಕಿಂತ ಜಾಸ್ತಿ ಕುಸಿತ ಕಂಡಿದೆ ಎಂಬ ವಿಚಾರಗಳ ಬಗೆಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. <br /> <br /> ಕುಡಿಯುವ ನೀರಿನ ಸಮಸ್ಯೆ ತೀವ್ರವಾದರೆ ಹೇಮಾವತಿ ಜಲಾಶಯದಿಂದ ಕಾಲುವೆಗಳ ಮೂಲಕ ನೀರು ಹರಿಸಿ ಕೆರೆಗಳನ್ನು ತುಂಬಿಸಲು ಸಾಧ್ಯವೇ ಎಂಬ ಬಗ್ಗೆ ಚಿಂತನೆ ನಡೆಸಿ ಈ ಬಗ್ಗೆ ವಿಸ್ತೃತ ವರದಿ ತಯಾರಿಸಿ ಕಳುಹಿಸುವಂತೆ ಸೂಚಿಸಿದರು. <br /> <br /> ಸಮಸ್ಯೆ ಇರುವ ಕಡೆಗಳಲ್ಲಿ ನೀರು, ಮೇವು ಒದಗಿಸಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಬೇಕು. ಪ್ರತಿ ಇಲಾಖೆಯವರೂ ತಾವು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು. <br /> <br /> ಜಿಲ್ಲಾಧಿಕಾರಿ ಕೆ.ಪಿ. ಮೋಹನರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಟಿ. ಅಂಜನಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: `ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಯುದ್ಧೋಪಾದಿಯಲ್ಲಿ ಸಿದ್ಧತೆ ಮಾಡಿಕೊಳ್ಳಿ. ಅದನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು~ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕುಮಾರ ನಾಯಕ್ ಸೋಮವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.<br /> <br /> ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಹೇಮಾವತಿ ಜಲಾಶಯದಿಂದ ಕಾಲುವೆಗಳ ಮೂಲಕ ನೀರು ಹರಿಸಿ ಕೆರೆಗಳನ್ನು ತುಂಬಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಒಂದೆರಡು ದಿನದಲ್ಲೇ ವರದಿ ತಯಾರಿಸಿ ಕೊಡುವಂತೆ ಅವರು ಜಲಾಶಯದ ಎಂಜಿನಿಯರ್ಗಳಿಗೆ ಸೂಚನೆ ನೀಡಿದರು.<br /> <br /> 2011ರಲ್ಲಿ ಯಾವ್ಯಾವ ತಾಲ್ಲೂಕಿನಲ್ಲಿ ಎಷ್ಟೆಷ್ಟು ಪ್ರಮಾಣದಲ್ಲಿ ಮಳೆಯಾಗಿದೆ. ಯಾವ ತಾಲ್ಲೂಕಿನಲ್ಲಿ ಸರಾಸರಿ ಮಳೆಗಿಂತ ಕಡಿಮೆ ಮಳೆಯಾಗಿದೆ. ಯಾವ ತಾಲ್ಲೂಕು/ಹೋಬಳಿಯಲ್ಲಿ ಅಂತರ್ಜಲ ಮಟ್ಟ ಸರಾಸರಿ ಮಟ್ಟಕ್ಕಿಂತ ಜಾಸ್ತಿ ಕುಸಿತ ಕಂಡಿದೆ ಎಂಬ ವಿಚಾರಗಳ ಬಗೆಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. <br /> <br /> ಕುಡಿಯುವ ನೀರಿನ ಸಮಸ್ಯೆ ತೀವ್ರವಾದರೆ ಹೇಮಾವತಿ ಜಲಾಶಯದಿಂದ ಕಾಲುವೆಗಳ ಮೂಲಕ ನೀರು ಹರಿಸಿ ಕೆರೆಗಳನ್ನು ತುಂಬಿಸಲು ಸಾಧ್ಯವೇ ಎಂಬ ಬಗ್ಗೆ ಚಿಂತನೆ ನಡೆಸಿ ಈ ಬಗ್ಗೆ ವಿಸ್ತೃತ ವರದಿ ತಯಾರಿಸಿ ಕಳುಹಿಸುವಂತೆ ಸೂಚಿಸಿದರು. <br /> <br /> ಸಮಸ್ಯೆ ಇರುವ ಕಡೆಗಳಲ್ಲಿ ನೀರು, ಮೇವು ಒದಗಿಸಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಬೇಕು. ಪ್ರತಿ ಇಲಾಖೆಯವರೂ ತಾವು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು. <br /> <br /> ಜಿಲ್ಲಾಧಿಕಾರಿ ಕೆ.ಪಿ. ಮೋಹನರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಟಿ. ಅಂಜನಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>