<p>ಗಂಗಾವತಿ: ಬರಪೀಡಿತ ಪ್ರದೇಶಗಳಲ್ಲಿನ ಶಾಲೆ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರ ಕೂಡಲೇ ಮನ್ನಾ ಮಾಡಬೇಕೆಂದು ಭಾರತ ವಿದ್ಯಾರ್ಥಿ ಪೇಡರೇಶನ್ (ಎಸ್ಎಫ್ಐ) ಸಂಘಟನೆ ಶುಕ್ರವಾರ ಇಲ್ಲಿ ಒತ್ತಾಯ ಮಾಡಿದೆ. <br /> <br /> ಸಂಘಟನೆಯ ಪದಾಧಿಕಾರಿಗಳು ಶುಕ್ರವಾರ ಮಿನಿವಿಧಾನಸೌಧದ ಮುಂದೆ ಕೆಲಕಾಲ ಧರಣಿ ನಡೆಸಿದರು, ಬರಪೀಡಿತ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆ ನಿಸ್ತೇಜವಾಗಿವೆ. ಕೃಷಿ ಆಧಾರಿತ ಆರ್ಥಿಕ ಚಟುವಟಿಕೆ ಸ್ತಬ್ಧವಾಗಿವೆ ಎಂದು ವಿದ್ಯಾರ್ಥಿಗಳು ವಿವರಿಸಿದರು.<br /> <br /> ಈ ಬಗ್ಗೆ ಸರ್ಕಾರಕ್ಕೆ ಬರೆದ ಮನವಿಯನ್ನು ತಹಸೀಲ್ದಾರ್ ಸಿ,ಡಿ. ಗೀತಾ ಅವರ ಮೂಲಕ ಸಲ್ಲಿಸಲಾಯಿತು. ರಾಜ್ಯದ 123 ತಾಲ್ಲೂಕುಗಳಲ್ಲಿ ಬರ ಇದೆ. ರೈತರ ಭೂಕಂದಾಯವನ್ನು ಸರ್ಕಾರ ಮನ್ನಾ ಮಾಡಿದೆ.<br /> ಈ ಇಂತಹ ಸಂದರ್ಭದಲ್ಲಿ ರೈತರು, ಕೃಷಿ ಕೂಲಿಕಾರ್ಮಿಕರು, ದಲಿತರು, ಹಿಂದುಳಿದ ವರ್ಗದವರು ತಮ್ಮ ಮಕ್ಕಳಿಗೆ ದುಬಾರಿ ಶಿಕ್ಷಣ ಶುಲ್ಕ ನೀಡಿ ವಿದ್ಯಾಭ್ಯಾಸ ಕೊಡಿಸುವರೇ ಎಂಬುದನ್ನು ಸರ್ಕಾರ ಮನಗಾಣಬೇಕು ಎಂದು ಒತ್ತಾಯಿಸಿದರು.<br /> ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಜೆಡಿಎಸ್ ಪಕ್ಷದ ಪ್ರಮುಖರು ಬರಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ರಾಜಕೀಯ ಪ್ರೇರಿತ ಓಟ್ ಬ್ಯಾಂಕಿನ ಉದ್ದೇಶದಿಂದ ಮಾತನಾಡುತ್ತಿದ್ದಾರೆ. ಆದರೆ ಯಾರೊಬ್ಬರು ಬಡವರ ಮಕ್ಕಳ ಶಿಕ್ಷಣದ ಬಗ್ಗೆ ಚಿಂತಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು. <br /> ಹೈದರಬಾದ್ ಕರ್ನಾಟಕ ಪ್ರದೇಶದಲ್ಲಿ ಅತಿವೃಷ್ಠಿ ಸಂಭವಿಸಿ ಮನೆ, ಹೊಲ ಕಳೆದುಕೊಂಡು ಆರ್ಥಿಕ ಸಂಕಷ್ಟದಿಂದ ಸುಧಾರಿಸಿಕೊಳ್ಳುವ ಹಂತದಲ್ಲಿ ಮತ್ತೆ ಈಗ ಬರದ ಛಾಯೆ ಮೂಡಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಲಾಯಿತು. <br /> ಬರ ಪೀಡಿತ ಪ್ರದೇಶ ಎಂದು ಘೋಷಿಸಿದ ಪ್ರದೇಶದಲ್ಲಿ ಎಲ್ಲ ಹಂತದ ಶಿಕ್ಷಣವನ್ನು ಉಚಿತವಾಗಿ ನೀಡಬೇಕು, ವಿದ್ಯಾರ್ಥಿ ವೇತನ ತಕ್ಷಣಕ್ಕೆ ಬಿಡುಗಡೆ ಮಾಡಬೇಕು, ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡಬೇಕೆಂಬ ಮನವಿಯನ್ನು ಸಲ್ಲಿಸಲಾಯಿತು.<br /> ದುರುಗೇಶ ಡಗ್ಗಿ, ಗ್ಯಾನೇಶ ಕಡಗದ, ಬಾಳಪ್ಪ ಹುಲಿಹೈದರ, ರಸೂಲ್, ಕನಕರಾಯ ಡಗ್ಗಿ, ಈರಣ್ಣ ವಡ್ಡರ, ಪ್ರಕಾಶ ಚಿತ್ರಗಾರ, ನೀಲಕಂಠ, ಪರಮೇಶ, ಲೋಕೇಶ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ಬರಪೀಡಿತ ಪ್ರದೇಶಗಳಲ್ಲಿನ ಶಾಲೆ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರ ಕೂಡಲೇ ಮನ್ನಾ ಮಾಡಬೇಕೆಂದು ಭಾರತ ವಿದ್ಯಾರ್ಥಿ ಪೇಡರೇಶನ್ (ಎಸ್ಎಫ್ಐ) ಸಂಘಟನೆ ಶುಕ್ರವಾರ ಇಲ್ಲಿ ಒತ್ತಾಯ ಮಾಡಿದೆ. <br /> <br /> ಸಂಘಟನೆಯ ಪದಾಧಿಕಾರಿಗಳು ಶುಕ್ರವಾರ ಮಿನಿವಿಧಾನಸೌಧದ ಮುಂದೆ ಕೆಲಕಾಲ ಧರಣಿ ನಡೆಸಿದರು, ಬರಪೀಡಿತ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆ ನಿಸ್ತೇಜವಾಗಿವೆ. ಕೃಷಿ ಆಧಾರಿತ ಆರ್ಥಿಕ ಚಟುವಟಿಕೆ ಸ್ತಬ್ಧವಾಗಿವೆ ಎಂದು ವಿದ್ಯಾರ್ಥಿಗಳು ವಿವರಿಸಿದರು.<br /> <br /> ಈ ಬಗ್ಗೆ ಸರ್ಕಾರಕ್ಕೆ ಬರೆದ ಮನವಿಯನ್ನು ತಹಸೀಲ್ದಾರ್ ಸಿ,ಡಿ. ಗೀತಾ ಅವರ ಮೂಲಕ ಸಲ್ಲಿಸಲಾಯಿತು. ರಾಜ್ಯದ 123 ತಾಲ್ಲೂಕುಗಳಲ್ಲಿ ಬರ ಇದೆ. ರೈತರ ಭೂಕಂದಾಯವನ್ನು ಸರ್ಕಾರ ಮನ್ನಾ ಮಾಡಿದೆ.<br /> ಈ ಇಂತಹ ಸಂದರ್ಭದಲ್ಲಿ ರೈತರು, ಕೃಷಿ ಕೂಲಿಕಾರ್ಮಿಕರು, ದಲಿತರು, ಹಿಂದುಳಿದ ವರ್ಗದವರು ತಮ್ಮ ಮಕ್ಕಳಿಗೆ ದುಬಾರಿ ಶಿಕ್ಷಣ ಶುಲ್ಕ ನೀಡಿ ವಿದ್ಯಾಭ್ಯಾಸ ಕೊಡಿಸುವರೇ ಎಂಬುದನ್ನು ಸರ್ಕಾರ ಮನಗಾಣಬೇಕು ಎಂದು ಒತ್ತಾಯಿಸಿದರು.<br /> ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಜೆಡಿಎಸ್ ಪಕ್ಷದ ಪ್ರಮುಖರು ಬರಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ರಾಜಕೀಯ ಪ್ರೇರಿತ ಓಟ್ ಬ್ಯಾಂಕಿನ ಉದ್ದೇಶದಿಂದ ಮಾತನಾಡುತ್ತಿದ್ದಾರೆ. ಆದರೆ ಯಾರೊಬ್ಬರು ಬಡವರ ಮಕ್ಕಳ ಶಿಕ್ಷಣದ ಬಗ್ಗೆ ಚಿಂತಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು. <br /> ಹೈದರಬಾದ್ ಕರ್ನಾಟಕ ಪ್ರದೇಶದಲ್ಲಿ ಅತಿವೃಷ್ಠಿ ಸಂಭವಿಸಿ ಮನೆ, ಹೊಲ ಕಳೆದುಕೊಂಡು ಆರ್ಥಿಕ ಸಂಕಷ್ಟದಿಂದ ಸುಧಾರಿಸಿಕೊಳ್ಳುವ ಹಂತದಲ್ಲಿ ಮತ್ತೆ ಈಗ ಬರದ ಛಾಯೆ ಮೂಡಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಲಾಯಿತು. <br /> ಬರ ಪೀಡಿತ ಪ್ರದೇಶ ಎಂದು ಘೋಷಿಸಿದ ಪ್ರದೇಶದಲ್ಲಿ ಎಲ್ಲ ಹಂತದ ಶಿಕ್ಷಣವನ್ನು ಉಚಿತವಾಗಿ ನೀಡಬೇಕು, ವಿದ್ಯಾರ್ಥಿ ವೇತನ ತಕ್ಷಣಕ್ಕೆ ಬಿಡುಗಡೆ ಮಾಡಬೇಕು, ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡಬೇಕೆಂಬ ಮನವಿಯನ್ನು ಸಲ್ಲಿಸಲಾಯಿತು.<br /> ದುರುಗೇಶ ಡಗ್ಗಿ, ಗ್ಯಾನೇಶ ಕಡಗದ, ಬಾಳಪ್ಪ ಹುಲಿಹೈದರ, ರಸೂಲ್, ಕನಕರಾಯ ಡಗ್ಗಿ, ಈರಣ್ಣ ವಡ್ಡರ, ಪ್ರಕಾಶ ಚಿತ್ರಗಾರ, ನೀಲಕಂಠ, ಪರಮೇಶ, ಲೋಕೇಶ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>