<p><strong>ಬೆಂಗಳೂರು:</strong> ರಾಜ್ಯದ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ರಾಜ್ಯ ಸರ್ಕಾರ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ನಗರದ ಕೆ.ಜಿ.ರಸ್ತೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಸಿಪಿಎಂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>`ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಬಿಡುಗಡೆ ಮಾಡರುವ 300 ಕೋಟಿ ರೂಪಾಯಿ ಹಣದಿಂದ ಬರ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಿಲ್ಲ. ಬರ ಪೀಡಿತ ತಾಲ್ಲೂಕುಗಳಿಗೆ ಅಗತ್ಯವಿರುವ ಪರಿಹಾರ ಕಾಮಗಾರಿಗಳಿಗಾಗಿ ಹೆಚ್ಚುವರಿ ಹಣ ಬಿಡುಗಡೆ ಮಾಡಬೇಕು~ ಎಂದು ಪಕ್ಷದ ಬೆಂಗಳೂರು ಉತ್ತರ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಪ್ರಕಾಶ್ ಒತ್ತಾಯಿಸಿದರು.</p>.<p>`ಬರ ಪರಿಸ್ಥಿತಿ ತಲೆದೋರಿರುವ ತಾಲ್ಲೂಕುಗಳಲ್ಲಿ ಕುಡಿಯುವ ನೀರಿಗೂ ಜನ ತೀವ್ರ ತೊಂದರೆ ಪಡುವಂತಾಗಿದೆ. ರಾಜ್ಯ ಸರ್ಕಾರ ಕೂಡಲೇ ಪ್ರತಿ ತಾಲ್ಲೂಕುಗಳಿಗೂ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರ ಕೂಡಲೇ ಖಾಸಗಿ ನೀರಿನ ಟ್ಯಾಂಕರ್ಗಳಿಗೆ ಕಡಿವಾಣ ಹಾಕಬೇಕು~ ಎಂದು ಅವರು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಸಮಿತಿಯ ಕಾರ್ಯದರ್ಶಿ ಪ್ರಸನ್ನ ಕುಮಾರ್, ಉಮೇಶ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ರಾಜ್ಯ ಸರ್ಕಾರ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ನಗರದ ಕೆ.ಜಿ.ರಸ್ತೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಸಿಪಿಎಂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>`ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಬಿಡುಗಡೆ ಮಾಡರುವ 300 ಕೋಟಿ ರೂಪಾಯಿ ಹಣದಿಂದ ಬರ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಿಲ್ಲ. ಬರ ಪೀಡಿತ ತಾಲ್ಲೂಕುಗಳಿಗೆ ಅಗತ್ಯವಿರುವ ಪರಿಹಾರ ಕಾಮಗಾರಿಗಳಿಗಾಗಿ ಹೆಚ್ಚುವರಿ ಹಣ ಬಿಡುಗಡೆ ಮಾಡಬೇಕು~ ಎಂದು ಪಕ್ಷದ ಬೆಂಗಳೂರು ಉತ್ತರ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಪ್ರಕಾಶ್ ಒತ್ತಾಯಿಸಿದರು.</p>.<p>`ಬರ ಪರಿಸ್ಥಿತಿ ತಲೆದೋರಿರುವ ತಾಲ್ಲೂಕುಗಳಲ್ಲಿ ಕುಡಿಯುವ ನೀರಿಗೂ ಜನ ತೀವ್ರ ತೊಂದರೆ ಪಡುವಂತಾಗಿದೆ. ರಾಜ್ಯ ಸರ್ಕಾರ ಕೂಡಲೇ ಪ್ರತಿ ತಾಲ್ಲೂಕುಗಳಿಗೂ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರ ಕೂಡಲೇ ಖಾಸಗಿ ನೀರಿನ ಟ್ಯಾಂಕರ್ಗಳಿಗೆ ಕಡಿವಾಣ ಹಾಕಬೇಕು~ ಎಂದು ಅವರು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಸಮಿತಿಯ ಕಾರ್ಯದರ್ಶಿ ಪ್ರಸನ್ನ ಕುಮಾರ್, ಉಮೇಶ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>