<p><strong>ಬೆಂಗಳೂರು:</strong> ಕೈವಾರ ಮಠಕ್ಕೆ ರಾಜ್ಯ ಸರ್ಕಾರ ನೀಡಿರುವ ಅನುದಾನವನ್ನು ಬಲಿಜ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕರ್ನಾಟಕ ಬಲಿಜ ಸಂಘಕ್ಕೆ ನೀಡಬೇಕು ಎಂದು ಸಂಘದ ಕಾರ್ಯಾಧ್ಯಕ್ಷ ಕೆ.ಎಂ.ಶ್ರೀನಿವಾಸ ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿ ಲಕ್ಷ್ಮಯ್ಯ ಅವರು ಒತ್ತಾಯಿಸಿದ್ದಾರೆ.<br /> <br /> ಮಠದ ಧರ್ಮಾಧಿಕಾರಿ ಎಂ.ಆರ್.ಜಯರಾಂ ಅವರು ಬಜೆಟ್ನಲ್ಲಿ ನೀಡಿರುವ ಅನುದಾನವನ್ನು ತಿರಸ್ಕರಿಸುವ ಮೂಲಕ ಬಲಿಜ ಜನಾಂಗದ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಖಂಡಿಸಿ, ಬಜೆಟ್ನಲ್ಲಿ ನೀಡಿರುವ ಮೊತ್ತವನ್ನು ಐದು ಕೋಟಿ ರೂಪಾಯಿಗೆ ಹೆಚ್ಚಿಸಿ ಸಂಘಕ್ಕೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.<br /> <br /> ಯೋಗಿ ನಾರಾಯೇಣ ಯತೀಂದ್ರರು ಸ್ಥಾಪಿಸಿದ ಮಠವು ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ ಅಂದಿನಿಂದ ಇಂದಿನವರೆಗೂ ಬಲಿಜ ಜನಾಂಗದ ಮಠವಾಗಿ ಉಳಿದಿದೆ. ಕೈವಾರ ನಾರಾಯಣಪ್ಪ ಸ್ಥಾಪಿಸಿರುವ ಈ ಮಠವು ಬಲಿಜ ಸಮಾಜದ ಏಕೈಕ ಗುರುಪೀಠವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೈವಾರ ಮಠಕ್ಕೆ ರಾಜ್ಯ ಸರ್ಕಾರ ನೀಡಿರುವ ಅನುದಾನವನ್ನು ಬಲಿಜ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕರ್ನಾಟಕ ಬಲಿಜ ಸಂಘಕ್ಕೆ ನೀಡಬೇಕು ಎಂದು ಸಂಘದ ಕಾರ್ಯಾಧ್ಯಕ್ಷ ಕೆ.ಎಂ.ಶ್ರೀನಿವಾಸ ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿ ಲಕ್ಷ್ಮಯ್ಯ ಅವರು ಒತ್ತಾಯಿಸಿದ್ದಾರೆ.<br /> <br /> ಮಠದ ಧರ್ಮಾಧಿಕಾರಿ ಎಂ.ಆರ್.ಜಯರಾಂ ಅವರು ಬಜೆಟ್ನಲ್ಲಿ ನೀಡಿರುವ ಅನುದಾನವನ್ನು ತಿರಸ್ಕರಿಸುವ ಮೂಲಕ ಬಲಿಜ ಜನಾಂಗದ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಖಂಡಿಸಿ, ಬಜೆಟ್ನಲ್ಲಿ ನೀಡಿರುವ ಮೊತ್ತವನ್ನು ಐದು ಕೋಟಿ ರೂಪಾಯಿಗೆ ಹೆಚ್ಚಿಸಿ ಸಂಘಕ್ಕೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.<br /> <br /> ಯೋಗಿ ನಾರಾಯೇಣ ಯತೀಂದ್ರರು ಸ್ಥಾಪಿಸಿದ ಮಠವು ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ ಅಂದಿನಿಂದ ಇಂದಿನವರೆಗೂ ಬಲಿಜ ಜನಾಂಗದ ಮಠವಾಗಿ ಉಳಿದಿದೆ. ಕೈವಾರ ನಾರಾಯಣಪ್ಪ ಸ್ಥಾಪಿಸಿರುವ ಈ ಮಠವು ಬಲಿಜ ಸಮಾಜದ ಏಕೈಕ ಗುರುಪೀಠವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>