<p><strong>ಸೋಮವಾರಪೇಟೆ: </strong>ಬಸವಜಯಂತಿ ಆಚರಣೆಯನ್ನು ಅದ್ದೂರಿಯಾಗಿ ನಡೆಸಲು ತಾಲೂಕು ಕಚೇರಿ ಆವರಣದಲ್ಲಿ ಗುರುವಾರ ತಹಶೀಲ್ದಾರ್ ಕೆ.ಆರ್ ಭಾಸ್ಕರ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ನಿರ್ಧರಿಸಲಾಯಿತು.<br /> <br /> ಬಸವ ಜಯಂತಿ ಆಚರಿಸಲು ಆರಂಭಿಸಿ 100 ವರ್ಷಗಳು ಕಳೆದಿರುವುದರಿಂದ ಈ ಬಾರಿ ರಚನಾತ್ಮಕವಾಗಿ ಬಸವಜಯಂತಿ ಆಚರಿಸಲು ಎಲ್ಲರೂ ಗಮನ ಹರಿಸಬೇಕೆಂದು ವಿರಕ್ತ ಮಠದ ವಿಶ್ವೇಶ್ವರ ಸ್ವಾಮೀಜಿ ತಿಳಿಸಿದರು. ಏ. 24 ರಂದು ಬೆಳಿಗ್ಗೆ 7 ಕ್ಕೆ ವಿರಕ್ತ ಮಠದಿಂದ ಕಕ್ಕೆಹೊಳೆ ಬಳಿಯಿರುವ ಬಸವೇಶ್ವರ ಪ್ರತಿಮೆಯವರೆಗೆ ಮೆರವಣಿಗೆ ತೆರಳಿ ಪ್ರತಿಮೆಗೆ ಮಾಲಾರ್ಪಣೆ ಮಾಡಲು ತೀರ್ಮಾನಿಸಲಾಯಿತು. <br /> <br /> ಅಂದು ಬೆಳಿಗ್ಗೆ 11 ಕ್ಕೆ ಬಸವೇಶ್ವರ ದೇವಾಲಯದ ಬಳಿ ಸಾರ್ವಜನಿಕ ಸಮಾರಂಭ ಹಾಗೂ ಸಂಜೆ 5ಕ್ಕೆ ವಿವಿಧ ಕಲಾ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯುವ ಮೆರವಣಿಗೆಯಲ್ಲಿ ಎ್ಲ್ಲಲ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳು ಪಾಲ್ಗೊಳ್ಳಲು ಸೂಚಿಸಬೇಕೆಂದು ಸಭೆ ನಿರ್ಧರಿಸಿತು. <br /> <br /> ಬಸವ ಜಯಂತಿ ಅಂಗವಾಗಿ ಏ. 23ರಂದು ನಡೆಯಲಿರುವ ವಚನಗಾಯನ, ರಂಗೋಲಿ ಹಾಗೂ ಛದ್ಮವೇಷ ಸ್ಪರ್ಧೆಗಳಿಗೆ ಸೋಮವಾರಪೇಟೆ ನಗರ ವ್ಯಾಪ್ತಿಯ ಶಾಲೆಗಳಿಗೆ ಮಾಹಿತಿ ನೀಡಿ ಸ್ಪರ್ಧೆಗಳಲ್ಲಿ ಮಕ್ಕಳು ಪಾಲ್ಗೊಳ್ಳುವಂತೆ ಸೂಚಿಸುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಚಂದ್ರರಾಜೇ ಅರಸ್ ತಿಳಿಸಿದರು. <br /> <br /> ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ತಾಲೂಕು ಮಟ್ಟದಲ್ಲಿ ಹೆಚ್ಚಿನ ಅಂಕಗಳಿಸಿದ ಒಬ್ಬೊಬ್ಬ ವಿದ್ಯಾರ್ಥಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸುವ ಮೂಲಕ ಬಸವಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಪಿ.ಚಂದ್ರಶೇಖರ್ ಸಲಹೆ ನೀಡಿದರು.<br /> <br /> ಬಸವ ಜಯಂತಿಯಂದು ಮಾಂಸ ಮಾರಾಟ ನಿಷೇಧಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾದ್ದರಿಂದ ಪಟ್ಟಣ ಪಂಚಾಯಿತಿ ಹಾಗೂ ಚೌಡ್ಲು ಗ್ರಾಮ ಪಂಚಾಯಿತಿಗೆ ಈ ಕುರಿತು ಸುತ್ತೋಲೆ ಕಳುಹಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ಗೆ ಸೂಚಿಸಲಾಯಿತು. <br /> <br /> ಸಭೆಯಲ್ಲಿ ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಡಿ.ಎಸ್. ಗಿರೀಶ್, ಅಕ್ಕನ ಬಳಗದ ಅಧ್ಯಕ್ಷೆ ಭಗವತಿ ದೇಶಮುಖ್, ಪದಾಧಿಕಾರಿಗಳು ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ: </strong>ಬಸವಜಯಂತಿ ಆಚರಣೆಯನ್ನು ಅದ್ದೂರಿಯಾಗಿ ನಡೆಸಲು ತಾಲೂಕು ಕಚೇರಿ ಆವರಣದಲ್ಲಿ ಗುರುವಾರ ತಹಶೀಲ್ದಾರ್ ಕೆ.ಆರ್ ಭಾಸ್ಕರ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ನಿರ್ಧರಿಸಲಾಯಿತು.<br /> <br /> ಬಸವ ಜಯಂತಿ ಆಚರಿಸಲು ಆರಂಭಿಸಿ 100 ವರ್ಷಗಳು ಕಳೆದಿರುವುದರಿಂದ ಈ ಬಾರಿ ರಚನಾತ್ಮಕವಾಗಿ ಬಸವಜಯಂತಿ ಆಚರಿಸಲು ಎಲ್ಲರೂ ಗಮನ ಹರಿಸಬೇಕೆಂದು ವಿರಕ್ತ ಮಠದ ವಿಶ್ವೇಶ್ವರ ಸ್ವಾಮೀಜಿ ತಿಳಿಸಿದರು. ಏ. 24 ರಂದು ಬೆಳಿಗ್ಗೆ 7 ಕ್ಕೆ ವಿರಕ್ತ ಮಠದಿಂದ ಕಕ್ಕೆಹೊಳೆ ಬಳಿಯಿರುವ ಬಸವೇಶ್ವರ ಪ್ರತಿಮೆಯವರೆಗೆ ಮೆರವಣಿಗೆ ತೆರಳಿ ಪ್ರತಿಮೆಗೆ ಮಾಲಾರ್ಪಣೆ ಮಾಡಲು ತೀರ್ಮಾನಿಸಲಾಯಿತು. <br /> <br /> ಅಂದು ಬೆಳಿಗ್ಗೆ 11 ಕ್ಕೆ ಬಸವೇಶ್ವರ ದೇವಾಲಯದ ಬಳಿ ಸಾರ್ವಜನಿಕ ಸಮಾರಂಭ ಹಾಗೂ ಸಂಜೆ 5ಕ್ಕೆ ವಿವಿಧ ಕಲಾ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯುವ ಮೆರವಣಿಗೆಯಲ್ಲಿ ಎ್ಲ್ಲಲ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳು ಪಾಲ್ಗೊಳ್ಳಲು ಸೂಚಿಸಬೇಕೆಂದು ಸಭೆ ನಿರ್ಧರಿಸಿತು. <br /> <br /> ಬಸವ ಜಯಂತಿ ಅಂಗವಾಗಿ ಏ. 23ರಂದು ನಡೆಯಲಿರುವ ವಚನಗಾಯನ, ರಂಗೋಲಿ ಹಾಗೂ ಛದ್ಮವೇಷ ಸ್ಪರ್ಧೆಗಳಿಗೆ ಸೋಮವಾರಪೇಟೆ ನಗರ ವ್ಯಾಪ್ತಿಯ ಶಾಲೆಗಳಿಗೆ ಮಾಹಿತಿ ನೀಡಿ ಸ್ಪರ್ಧೆಗಳಲ್ಲಿ ಮಕ್ಕಳು ಪಾಲ್ಗೊಳ್ಳುವಂತೆ ಸೂಚಿಸುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಚಂದ್ರರಾಜೇ ಅರಸ್ ತಿಳಿಸಿದರು. <br /> <br /> ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ತಾಲೂಕು ಮಟ್ಟದಲ್ಲಿ ಹೆಚ್ಚಿನ ಅಂಕಗಳಿಸಿದ ಒಬ್ಬೊಬ್ಬ ವಿದ್ಯಾರ್ಥಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸುವ ಮೂಲಕ ಬಸವಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಪಿ.ಚಂದ್ರಶೇಖರ್ ಸಲಹೆ ನೀಡಿದರು.<br /> <br /> ಬಸವ ಜಯಂತಿಯಂದು ಮಾಂಸ ಮಾರಾಟ ನಿಷೇಧಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾದ್ದರಿಂದ ಪಟ್ಟಣ ಪಂಚಾಯಿತಿ ಹಾಗೂ ಚೌಡ್ಲು ಗ್ರಾಮ ಪಂಚಾಯಿತಿಗೆ ಈ ಕುರಿತು ಸುತ್ತೋಲೆ ಕಳುಹಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ಗೆ ಸೂಚಿಸಲಾಯಿತು. <br /> <br /> ಸಭೆಯಲ್ಲಿ ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಡಿ.ಎಸ್. ಗಿರೀಶ್, ಅಕ್ಕನ ಬಳಗದ ಅಧ್ಯಕ್ಷೆ ಭಗವತಿ ದೇಶಮುಖ್, ಪದಾಧಿಕಾರಿಗಳು ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>