<p><strong>ಬೆಂಗಳೂರು:</strong> `ಸಾಮಾಜಿಕ ಸಮಾನತೆಯ ಹರಿಕಾರರಾದ ಬಸವಣ್ಣನವರ ತತ್ವ, ಆದರ್ಶಗಳು ಇಂದು ಸಪ್ತಸಾಗರದಾಚೆಗೂ ಹರಡಬೇಕಾದ ಅವಶ್ಯಕತೆ ಬಂದೊದಗಿದೆ. ಆ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಬಸವಧರ್ಮ ಪೀಠ ಹತ್ತು ಹಲವು ಯೋಜನೆಗಳನ್ನು ಹಾಕಿಕೊಂಡಿದೆ~ ಎಂದು ಮಾತೆ ಮಹಾದೇವಿ ಅವರು ಹೇಳಿದರು.</p>.<p>ಬಸವಧರ್ಮ ಪೀಠ ಮತ್ತು ರಾಷ್ಟ್ರೀಯ ಬಸವದಳ ಇತ್ತೀಚೆಗೆ ನಗರದಲ್ಲಿ ಆಯೋಜಿಸಿದ್ದ ಬಸವ ಜಯಂತಿಯ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.</p>.<p>`ದೇವರು ನಮಗೆ ಎರಡು ಕೈಗಳನ್ನು ನೀಡಿದ್ದು, ಒಂದು ನಮ್ಮ ಕುಟುಂಬದ ನಿರ್ವಹಣೆಗಾದರೆ, ಇನ್ನೊಂದು ದುಡಿಮೆ ಮಾಡಿ ಸಮಾಜದ ಏಳಿಗೆಗೆ ಶ್ರಮಿಸಬೇಕೆಂದು ಅಣ್ಣ ಬಸವಣ್ಣ ಕರೆ ನೀಡಿದ್ದರು. ಆ ತತ್ವಗಳ ಅನುಷ್ಠಾನ ಇಂದು ಆಗಬೇಕಿದೆ~ ಎಂದರು.</p>.<p>ಸಂಸದ ಡಿ.ಬಿ.ಚಂದ್ರೇಗೌಡ ಮಾತನಾಡಿ, `ಇಂದಿನ ರಾಜಕಾರಣಿಗಳು ರಾಜಕೀಯದಲ್ಲಿ ಬಸವಣ್ಣನವರನ್ನು ಅನುಸರಿಸಬೇಕು. ಅವರು ಹೇಳಿರುವ ತತ್ವಗಳನ್ನು ಅಳವಡಿಸಿಕೊಳ್ಳಬೇಕು~ ಎಂದರು.</p>.<p>ಕಾರ್ಯಕ್ರಮದಲ್ಲಿ ಶಾಸಕ ನೆ.ಲ.ನರೇಂದ್ರಬಾಬು, ಯಶವಂತಪುರ ತರಕಾರಿ ಮಾರುಕಟ್ಟೆ ಅಧ್ಯಕ್ಷ ಬಸವರಾಜು ತಿಂಡ್ಲು, ಬಿಬಿಎಂಪಿ ಸದಸ್ಯ ಕೃಷ್ಣಪ್ಪ ಮತ್ತಿತರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಸಾಮಾಜಿಕ ಸಮಾನತೆಯ ಹರಿಕಾರರಾದ ಬಸವಣ್ಣನವರ ತತ್ವ, ಆದರ್ಶಗಳು ಇಂದು ಸಪ್ತಸಾಗರದಾಚೆಗೂ ಹರಡಬೇಕಾದ ಅವಶ್ಯಕತೆ ಬಂದೊದಗಿದೆ. ಆ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಬಸವಧರ್ಮ ಪೀಠ ಹತ್ತು ಹಲವು ಯೋಜನೆಗಳನ್ನು ಹಾಕಿಕೊಂಡಿದೆ~ ಎಂದು ಮಾತೆ ಮಹಾದೇವಿ ಅವರು ಹೇಳಿದರು.</p>.<p>ಬಸವಧರ್ಮ ಪೀಠ ಮತ್ತು ರಾಷ್ಟ್ರೀಯ ಬಸವದಳ ಇತ್ತೀಚೆಗೆ ನಗರದಲ್ಲಿ ಆಯೋಜಿಸಿದ್ದ ಬಸವ ಜಯಂತಿಯ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.</p>.<p>`ದೇವರು ನಮಗೆ ಎರಡು ಕೈಗಳನ್ನು ನೀಡಿದ್ದು, ಒಂದು ನಮ್ಮ ಕುಟುಂಬದ ನಿರ್ವಹಣೆಗಾದರೆ, ಇನ್ನೊಂದು ದುಡಿಮೆ ಮಾಡಿ ಸಮಾಜದ ಏಳಿಗೆಗೆ ಶ್ರಮಿಸಬೇಕೆಂದು ಅಣ್ಣ ಬಸವಣ್ಣ ಕರೆ ನೀಡಿದ್ದರು. ಆ ತತ್ವಗಳ ಅನುಷ್ಠಾನ ಇಂದು ಆಗಬೇಕಿದೆ~ ಎಂದರು.</p>.<p>ಸಂಸದ ಡಿ.ಬಿ.ಚಂದ್ರೇಗೌಡ ಮಾತನಾಡಿ, `ಇಂದಿನ ರಾಜಕಾರಣಿಗಳು ರಾಜಕೀಯದಲ್ಲಿ ಬಸವಣ್ಣನವರನ್ನು ಅನುಸರಿಸಬೇಕು. ಅವರು ಹೇಳಿರುವ ತತ್ವಗಳನ್ನು ಅಳವಡಿಸಿಕೊಳ್ಳಬೇಕು~ ಎಂದರು.</p>.<p>ಕಾರ್ಯಕ್ರಮದಲ್ಲಿ ಶಾಸಕ ನೆ.ಲ.ನರೇಂದ್ರಬಾಬು, ಯಶವಂತಪುರ ತರಕಾರಿ ಮಾರುಕಟ್ಟೆ ಅಧ್ಯಕ್ಷ ಬಸವರಾಜು ತಿಂಡ್ಲು, ಬಿಬಿಎಂಪಿ ಸದಸ್ಯ ಕೃಷ್ಣಪ್ಪ ಮತ್ತಿತರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>