<p>ಬೆಂಗಳೂರು: `ಬಸವಣ್ಣನ ಆದರ್ಶ, ತತ್ವ ಸಿದ್ಧಾಂತಗಳ ಆಚರಣೆಯು ಇಂದು ನಾಟಕೀಯವಾಗಿದೆ. ಅವುಗಳ ನಿಜವಾದ ಅನುಷ್ಠಾನ ಯಾರಿಂದಲೂ ಆಗಿಲ್ಲ~ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.<br /> <br /> ಕನ್ನಡ ಅಭಿವೃದ್ಧಿ ಬಳಗವು ಸೋಮವಾರ ಕನ್ನಡಭವನದಲ್ಲಿ ಏರ್ಪಡಿಸಿದ್ದ ಅಣ್ಣ ಬಸವಣ್ಣ-ಅಣ್ಣ ರಾಜಣ್ಣನವರ ಜಯಂತ್ಯುತ್ಸವದ ಅಂಗವಾಗಿ `ಅಣ್ಣನಿಗೆ ನುಡಿ ನಮನ ಮತ್ತು ಜಗಜ್ಯೋತಿ ಬಸವೇಶ್ವರ ರಾಷ್ಟ್ರೀಯ ಸೇವಾ ಪುರಸ್ಕಾರ~ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `ಬಸವಣ್ಣ ಮತ್ತು ಡಾ. ರಾಜ್ರ ಜಯಂತಿಯನ್ನು ವರ್ಷಕ್ಕೆ ಒಂದು ಬಾರಿ ಮಾಡಬೇಕೆಂಬ ಯೋಚನೆಯಿಂದ ಮಾಡಲಾಗುತ್ತಿದೆ. ಬರೀ ಕೇವಲ ತೋರಿಕೆಗಾಗಿ ಮಾತ್ರ. ಅವರ ತತ್ವ ಸಿದ್ಧಾಂತಗಳ ಅನುಷ್ಠಾನ ಸರಿಯಾಗಿ ಆಗಬೇಕು~ ಎಂದರು.<br /> <br /> ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಅವರು ಮಾತನಾಡಿ, `ರಾಷ್ಟ್ರದಲ್ಲಿ ಏಕನೀತಿ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಆಯಾ ರಾಜ್ಯದ ಮಾತೃಭಾಷೆಯಲ್ಲಿ ಕಲಿಸಬೇಕು. ನಂತರ ಇಂಗ್ಲಿಷನ್ನು ಕಲಿಸಬಹುದು. ಏಕೆಂದರೆ, ಇಂದಿನ ಪರಿಸ್ಥಿತಿಯಲ್ಲಿ ಯಾವುದು ಬೇಡ ಎನ್ನುವ ಪರಿಸ್ಥಿತಿಯಲ್ಲಿ ನಾವಿಲ್ಲ~ ಎಂದರು. <br /> <br /> `ಸರ್ಕಾರ ಯಾವುದೇ ಯೋಜನೆಯನ್ನು ಜಾರಿಗೆ ತಂದರೂ ಅದಕ್ಕೆ ಒಳ್ಳೆಯ ಉದ್ದೇಶವಿರುತ್ತದೆ. ಆದರೆ, ಕಡ್ಡಾಯ ಇಂಗ್ಲಿಷ್ ಶಿಕ್ಷಣ ನೀತಿಯನ್ನು ಕುರಿತಾಗಿ ಶಿಕ್ಷಣ ತಜ್ಞರು, ಪೋಷಕರು, ಸಾಹಿತಿಗಳ ಜತೆ ಚರ್ಚೆ ಮಾಡಿ ಜಾರಿಗೊಳಿಸಿದರೆ ಎಲ್ಲೂ ಗೊಂದಲದ ವಾತಾವರಣ ನಿರ್ಮಾಣವಾಗುವುದಿಲ್ಲ~ ಎಂದರು.<br /> <br /> `ಸರ್ಕಾರದ ಈ ತರಹದ ಗೊಂದಲದ ನೀತಿಗಳಿಂದ ಪ್ರಾದೇಶಿಕ ಭಾಷೆಗಳು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಇದರ ಬಗ್ಗೆ ಸರ್ಕಾರ ಒಳ್ಳೆಯ ನಿರ್ಧಾರವನ್ನು ಕೈಗೊಳ್ಳಬೇಕು~ ಎಂದರು.<br /> <br /> ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಎ.ಎಸ್.ಸದಾಶಿವಯ್ಯ ಅವರಿಗೆ ಶ್ರೀ ಜಗಜ್ಯೋತಿ ಬಸವೇಶ್ವರ ರಾಷ್ಟ್ರೀಯ ಸೇವಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.<br /> <br /> ಕಾರ್ಯಕ್ರಮದಲ್ಲಿ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಿ.ಬಿ.ಶಿವಪ್ಪ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವಸುಂಧರಾ ಭೂಪತಿ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಬಸವಣ್ಣನ ಆದರ್ಶ, ತತ್ವ ಸಿದ್ಧಾಂತಗಳ ಆಚರಣೆಯು ಇಂದು ನಾಟಕೀಯವಾಗಿದೆ. ಅವುಗಳ ನಿಜವಾದ ಅನುಷ್ಠಾನ ಯಾರಿಂದಲೂ ಆಗಿಲ್ಲ~ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.<br /> <br /> ಕನ್ನಡ ಅಭಿವೃದ್ಧಿ ಬಳಗವು ಸೋಮವಾರ ಕನ್ನಡಭವನದಲ್ಲಿ ಏರ್ಪಡಿಸಿದ್ದ ಅಣ್ಣ ಬಸವಣ್ಣ-ಅಣ್ಣ ರಾಜಣ್ಣನವರ ಜಯಂತ್ಯುತ್ಸವದ ಅಂಗವಾಗಿ `ಅಣ್ಣನಿಗೆ ನುಡಿ ನಮನ ಮತ್ತು ಜಗಜ್ಯೋತಿ ಬಸವೇಶ್ವರ ರಾಷ್ಟ್ರೀಯ ಸೇವಾ ಪುರಸ್ಕಾರ~ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `ಬಸವಣ್ಣ ಮತ್ತು ಡಾ. ರಾಜ್ರ ಜಯಂತಿಯನ್ನು ವರ್ಷಕ್ಕೆ ಒಂದು ಬಾರಿ ಮಾಡಬೇಕೆಂಬ ಯೋಚನೆಯಿಂದ ಮಾಡಲಾಗುತ್ತಿದೆ. ಬರೀ ಕೇವಲ ತೋರಿಕೆಗಾಗಿ ಮಾತ್ರ. ಅವರ ತತ್ವ ಸಿದ್ಧಾಂತಗಳ ಅನುಷ್ಠಾನ ಸರಿಯಾಗಿ ಆಗಬೇಕು~ ಎಂದರು.<br /> <br /> ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಅವರು ಮಾತನಾಡಿ, `ರಾಷ್ಟ್ರದಲ್ಲಿ ಏಕನೀತಿ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಆಯಾ ರಾಜ್ಯದ ಮಾತೃಭಾಷೆಯಲ್ಲಿ ಕಲಿಸಬೇಕು. ನಂತರ ಇಂಗ್ಲಿಷನ್ನು ಕಲಿಸಬಹುದು. ಏಕೆಂದರೆ, ಇಂದಿನ ಪರಿಸ್ಥಿತಿಯಲ್ಲಿ ಯಾವುದು ಬೇಡ ಎನ್ನುವ ಪರಿಸ್ಥಿತಿಯಲ್ಲಿ ನಾವಿಲ್ಲ~ ಎಂದರು. <br /> <br /> `ಸರ್ಕಾರ ಯಾವುದೇ ಯೋಜನೆಯನ್ನು ಜಾರಿಗೆ ತಂದರೂ ಅದಕ್ಕೆ ಒಳ್ಳೆಯ ಉದ್ದೇಶವಿರುತ್ತದೆ. ಆದರೆ, ಕಡ್ಡಾಯ ಇಂಗ್ಲಿಷ್ ಶಿಕ್ಷಣ ನೀತಿಯನ್ನು ಕುರಿತಾಗಿ ಶಿಕ್ಷಣ ತಜ್ಞರು, ಪೋಷಕರು, ಸಾಹಿತಿಗಳ ಜತೆ ಚರ್ಚೆ ಮಾಡಿ ಜಾರಿಗೊಳಿಸಿದರೆ ಎಲ್ಲೂ ಗೊಂದಲದ ವಾತಾವರಣ ನಿರ್ಮಾಣವಾಗುವುದಿಲ್ಲ~ ಎಂದರು.<br /> <br /> `ಸರ್ಕಾರದ ಈ ತರಹದ ಗೊಂದಲದ ನೀತಿಗಳಿಂದ ಪ್ರಾದೇಶಿಕ ಭಾಷೆಗಳು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಇದರ ಬಗ್ಗೆ ಸರ್ಕಾರ ಒಳ್ಳೆಯ ನಿರ್ಧಾರವನ್ನು ಕೈಗೊಳ್ಳಬೇಕು~ ಎಂದರು.<br /> <br /> ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಎ.ಎಸ್.ಸದಾಶಿವಯ್ಯ ಅವರಿಗೆ ಶ್ರೀ ಜಗಜ್ಯೋತಿ ಬಸವೇಶ್ವರ ರಾಷ್ಟ್ರೀಯ ಸೇವಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.<br /> <br /> ಕಾರ್ಯಕ್ರಮದಲ್ಲಿ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಿ.ಬಿ.ಶಿವಪ್ಪ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವಸುಂಧರಾ ಭೂಪತಿ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>