<p>ಮಡಿಕೇರಿ: ಕೊಡಗರಹಳ್ಳಿಯಲ್ಲಿರುವ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ಮುಕ್ತಾಯ ಹಂತದಲ್ಲಿದ್ದು, ದೇವಾಲಯ ನವೀಕರಣ ಮೂರ್ತಿಗಳ ಪುನರ್ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಡಿಸೆಂಬರ್ನಲ್ಲಿ ನಡೆಯಲಿದೆ ಎಂದು ದೇವಾಲಯದ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.<br /> <br /> ಈ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಸೆ. 19 ರಂದು ಬೆಳಿಗ್ಗೆ 7 ಗಂಟೆಯಿಂದ ಶ್ರೀ ಮಹಾ ಗಣಪತಿ ಹೋಮ ಏಕಾದಶ ರುದ್ರಾಭಿಷೇಕ, ಶ್ರೀ ದುರ್ಗಾ ಸಪ್ತಶತಿ ಪಾರಾಯಣ ದೊಂದಿಗೆ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಲಿದೆ ಎಂದು ತಿಳಿಸಿದ್ದಾರೆ.<br /> <br /> ಗ್ರಾಮದ ಹಿರಿಯರು, ಭಕ್ತಾದಿಗಳು ಸೇರಿ ದೇವಾಲಯವನ್ನು ಜೀರ್ಣೋದ್ಧಾ ರಗೊಳಿಸಿ, ಪೂಜಾ ಕಾರ್ಯಕ್ರಮವನ್ನು ನಡೆಸಲು ಮುಂದಾಗಿದ್ದಾರೆ. 2003ರ ಡಿಸಂಬರ್ 15 ರಿಂದ ಆರಂಭಗೊಂಡ ಈ ಸಂಕಲ್ಪ, ಈ ಏಳು ವರ್ಷಗಳ ತಪಸ್ಸಿನ ಫಲವಾಗಿ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ ಎಂದು ದೇವಾಲಯದ ಟ್ರಸ್ಟ್ ಸಂತಸ ವ್ಯಕ್ತಪಡಿಸಿದೆ.<br /> <br /> 2004ರಲ್ಲಿ ಸುಮಾರು ರೂ.40 ಲಕ್ಷದ ಅಂದಾಜಿನಲ್ಲಿ ಕೈಗೆತ್ತಿಕೊಂಡ ಕಾಮಗಾರಿ ಹಲವು ಕಾರಣಗಳಿಂದ ವೆಚ್ಚಗಳು ಏರುತ್ತಾ ಬಂದಿದ್ದು, ಈಗ ಒಟ್ಟು ವೆಚ್ಚ ರೂ. 85 ಲಕ್ಷ ಮೀರಬಹುದೆಂದು ಅಂದಾಜಿಸಲಾಗಿದೆ. ಈ ಏಳು ವರ್ಷದ ಅವಧಿಯಲ್ಲಿ ಭಕ್ತಾಧಿ ಗಳು, ದಾನಿಗಳು, ಗ್ರಾಮಸ್ಥರು ಹಾಗೂ ಟ್ರಸ್ಟ್ ಶ್ರಮದಿಂದಾಗಿ ರೂ. 55 ಲಕ್ಷಕ್ಕೂ ಹೆಚ್ಚಿನ ಮೊತ್ತವನ್ನು ಸಂಗ್ರಹಿಸಲಾಗಿದೆ. <br /> <br /> ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಗಳಿಗೆ . 30 ಲಕ್ಷದಷ್ಟು ಮೊತ್ತ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಡಿಸೆಂಬರ್ 29 ರಂದು ಬೆಳಿಗ್ಗೆ 7.51ರ ಧನುರ್ ಲಗ್ನ ಮುಹೂರ್ತದಲ್ಲಿ ದೇವಾಲಯದ ನವೀಕರಣ, ಮೂರ್ತಿಗಳ ಪುನರ್ಪ್ರತಿಷ್ಠೆ ಕಾರ್ಯಕ್ರಮಗಳು ನೆರವೇರಲಿವೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಕೊಡಗರಹಳ್ಳಿಯಲ್ಲಿರುವ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ಮುಕ್ತಾಯ ಹಂತದಲ್ಲಿದ್ದು, ದೇವಾಲಯ ನವೀಕರಣ ಮೂರ್ತಿಗಳ ಪುನರ್ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಡಿಸೆಂಬರ್ನಲ್ಲಿ ನಡೆಯಲಿದೆ ಎಂದು ದೇವಾಲಯದ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.<br /> <br /> ಈ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಸೆ. 19 ರಂದು ಬೆಳಿಗ್ಗೆ 7 ಗಂಟೆಯಿಂದ ಶ್ರೀ ಮಹಾ ಗಣಪತಿ ಹೋಮ ಏಕಾದಶ ರುದ್ರಾಭಿಷೇಕ, ಶ್ರೀ ದುರ್ಗಾ ಸಪ್ತಶತಿ ಪಾರಾಯಣ ದೊಂದಿಗೆ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಲಿದೆ ಎಂದು ತಿಳಿಸಿದ್ದಾರೆ.<br /> <br /> ಗ್ರಾಮದ ಹಿರಿಯರು, ಭಕ್ತಾದಿಗಳು ಸೇರಿ ದೇವಾಲಯವನ್ನು ಜೀರ್ಣೋದ್ಧಾ ರಗೊಳಿಸಿ, ಪೂಜಾ ಕಾರ್ಯಕ್ರಮವನ್ನು ನಡೆಸಲು ಮುಂದಾಗಿದ್ದಾರೆ. 2003ರ ಡಿಸಂಬರ್ 15 ರಿಂದ ಆರಂಭಗೊಂಡ ಈ ಸಂಕಲ್ಪ, ಈ ಏಳು ವರ್ಷಗಳ ತಪಸ್ಸಿನ ಫಲವಾಗಿ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ ಎಂದು ದೇವಾಲಯದ ಟ್ರಸ್ಟ್ ಸಂತಸ ವ್ಯಕ್ತಪಡಿಸಿದೆ.<br /> <br /> 2004ರಲ್ಲಿ ಸುಮಾರು ರೂ.40 ಲಕ್ಷದ ಅಂದಾಜಿನಲ್ಲಿ ಕೈಗೆತ್ತಿಕೊಂಡ ಕಾಮಗಾರಿ ಹಲವು ಕಾರಣಗಳಿಂದ ವೆಚ್ಚಗಳು ಏರುತ್ತಾ ಬಂದಿದ್ದು, ಈಗ ಒಟ್ಟು ವೆಚ್ಚ ರೂ. 85 ಲಕ್ಷ ಮೀರಬಹುದೆಂದು ಅಂದಾಜಿಸಲಾಗಿದೆ. ಈ ಏಳು ವರ್ಷದ ಅವಧಿಯಲ್ಲಿ ಭಕ್ತಾಧಿ ಗಳು, ದಾನಿಗಳು, ಗ್ರಾಮಸ್ಥರು ಹಾಗೂ ಟ್ರಸ್ಟ್ ಶ್ರಮದಿಂದಾಗಿ ರೂ. 55 ಲಕ್ಷಕ್ಕೂ ಹೆಚ್ಚಿನ ಮೊತ್ತವನ್ನು ಸಂಗ್ರಹಿಸಲಾಗಿದೆ. <br /> <br /> ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಗಳಿಗೆ . 30 ಲಕ್ಷದಷ್ಟು ಮೊತ್ತ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಡಿಸೆಂಬರ್ 29 ರಂದು ಬೆಳಿಗ್ಗೆ 7.51ರ ಧನುರ್ ಲಗ್ನ ಮುಹೂರ್ತದಲ್ಲಿ ದೇವಾಲಯದ ನವೀಕರಣ, ಮೂರ್ತಿಗಳ ಪುನರ್ಪ್ರತಿಷ್ಠೆ ಕಾರ್ಯಕ್ರಮಗಳು ನೆರವೇರಲಿವೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>