<p><strong>ಕೃಷ್ಣರಾಜಪುರ:</strong> `ಬಸವಣ್ಣನವರ ವಚನ ಸಾಹಿತ್ಯದಲ್ಲಿ ಇರುವ ತತ್ವಗಳು ಮತ್ತು ರೇಣುಕಾಚಾರ್ಯರ ಸಿದ್ದಾಂತ ಶಿಖಾಮಣಿ ಗ್ರಂಥದಲ್ಲಿ ಇರುವ ತತ್ವಗಳು ಒಂದಕ್ಕೊಂದು ಪೂರಕವಾಗಿವೆ~ ಎಂದು ಅಕ್ಕಿ ಹಾಲೂರು ಮುತ್ತಿನ ಕಂಥಿನ ಮಠದ ಅಧ್ಯಕ್ಷ ಚಂದ್ರಶೇಖರ ದೇವರು ಅಭಿಪ್ರಾಯಪಟ್ಟರು.<br /> <br /> ವಿಭೂತಿಪುರ ವೀರಸಿಂಹಾಸನ ಮಠದ ಆವರಣದಲ್ಲಿ ಏರ್ಪಡಿಸಿದ್ದ ರೇಣುಕಾಚಾರ್ಯರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.<br /> <br /> ಸಮಾರಂಭದ ಸಾನಿಧ್ಯ ವಹಿಸಿದ್ದ ಮಠದ ಪಟ್ಟಾಧ್ಯಕ್ಷ ಡಾ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, `ಬಸವಣ್ಣನವರ ತತ್ವಗಳು ಎಂದಿಗೂ ಪ್ರಸ್ತುತ~ ಎಂದು ಪ್ರತಿಪಾದಿಸಿದರು.<br /> <br /> ನಾ ಕು.ಗಣೇಶ್ ಸ್ವರಚಿತ ಕವಿತೆ ವಾಚಿಸಿದರು. ಇದೇ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ವೈಸಿ.ಚೆನ್ನರಸಪ್ಪ ಅವರನ್ನು ಸನ್ಮಾನಿಸಲಾಯಿತು. ಮಠದ ಉಚಿತ ವಿದ್ಯಾರ್ಥಿ ನಿಲಯದ ಮಕ್ಕಳು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಶಿಕ್ಷಕ ನಟರಾಜ್ ಸ್ವಾಗತಿಸಿ, ಸಾಲಿಮಠ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪುರ:</strong> `ಬಸವಣ್ಣನವರ ವಚನ ಸಾಹಿತ್ಯದಲ್ಲಿ ಇರುವ ತತ್ವಗಳು ಮತ್ತು ರೇಣುಕಾಚಾರ್ಯರ ಸಿದ್ದಾಂತ ಶಿಖಾಮಣಿ ಗ್ರಂಥದಲ್ಲಿ ಇರುವ ತತ್ವಗಳು ಒಂದಕ್ಕೊಂದು ಪೂರಕವಾಗಿವೆ~ ಎಂದು ಅಕ್ಕಿ ಹಾಲೂರು ಮುತ್ತಿನ ಕಂಥಿನ ಮಠದ ಅಧ್ಯಕ್ಷ ಚಂದ್ರಶೇಖರ ದೇವರು ಅಭಿಪ್ರಾಯಪಟ್ಟರು.<br /> <br /> ವಿಭೂತಿಪುರ ವೀರಸಿಂಹಾಸನ ಮಠದ ಆವರಣದಲ್ಲಿ ಏರ್ಪಡಿಸಿದ್ದ ರೇಣುಕಾಚಾರ್ಯರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.<br /> <br /> ಸಮಾರಂಭದ ಸಾನಿಧ್ಯ ವಹಿಸಿದ್ದ ಮಠದ ಪಟ್ಟಾಧ್ಯಕ್ಷ ಡಾ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, `ಬಸವಣ್ಣನವರ ತತ್ವಗಳು ಎಂದಿಗೂ ಪ್ರಸ್ತುತ~ ಎಂದು ಪ್ರತಿಪಾದಿಸಿದರು.<br /> <br /> ನಾ ಕು.ಗಣೇಶ್ ಸ್ವರಚಿತ ಕವಿತೆ ವಾಚಿಸಿದರು. ಇದೇ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ವೈಸಿ.ಚೆನ್ನರಸಪ್ಪ ಅವರನ್ನು ಸನ್ಮಾನಿಸಲಾಯಿತು. ಮಠದ ಉಚಿತ ವಿದ್ಯಾರ್ಥಿ ನಿಲಯದ ಮಕ್ಕಳು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಶಿಕ್ಷಕ ನಟರಾಜ್ ಸ್ವಾಗತಿಸಿ, ಸಾಲಿಮಠ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>