<p><strong>ದಾವಣಗೆರೆ: </strong>ನಗರದ ಬಸಾಪುರದಲ್ಲಿ ಬುಧವಾರ ಬೆಳಿಗ್ಗೆ ಹಿಮವತ್ಕೇದಾರ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಅಡ್ಡ ಪಲ್ಲಕ್ಕಿ ಉತ್ಸವ ಯಶಸ್ವಿಯಾಗಿ ಜರುಗಿತು.<br /> <br /> ಎರಡು ದಿನ ನಡೆಯುವ ಜನ ಜಾಗೃತಿ ಧರ್ಮ ಸಮಾರಂಭದ ಅಂಗವಾಗಿ ಮೊದಲದಿನ ಸ್ವಾಮೀಜಿಯ ಪಲ್ಲಕ್ಕಿ ಉತ್ಸವ ನಡೆಯಿತು. ಗ್ರಾಮಸ್ಥರು ಶ್ರೀಗಳು ಅಲಂಕರಿಸಿದ್ದ ಪಲ್ಲಕ್ಕಿ ಹೊತ್ತು ‘ಪಂಚಪೀಠಕ್ಕೆ ಜಯವಾಗಲಿ...’, ‘ಮಾನವ<br /> ಧರ್ಮಕ್ಕೆ ಜಯವಾಗಲಿ...’ ಎಂದು ಘೋಷಣೆ ಕೂಗುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.<br /> ಸ್ವಾಮೀಜಿ ಅವರು ಕುಳಿತಿದ್ದ ಪಲ್ಲಕ್ಕಿಯು ಕೆಲವೆಡೆ ನಿಂತು, ಸಾಗುತ್ತಿತ್ತು. ಆ ಸಮಯದಲ್ಲಿ ಶ್ರೀಗಳು ಭಕ್ತರಿಗೆ ಆಶೀರ್ವಾದ ನೀಡಿದರು.<br /> <br /> ಗ್ರಾಮದ ಮಹಿಳೆಯರು ಪೂರ್ಣಕುಂಭ, ಕಳಸದೊಂದಿಗೆ ಸ್ವಾಮೀಜಿಯ ಪಲ್ಲಕ್ಕಿ ಉತ್ಸವವನ್ನು ಬರಮಾಡಿಕೊಂಡರು. ನೂರಾರು ಗ್ರಾಮಸ್ಥರು ಉತ್ಸವದಲ್ಲಿ ಪಾಲ್ಗೊಂಡು ಸ್ವಾಮೀಜಿ ಅವರಿಗೆ ಜಯಕಾರ ಕೂಗಿ ಸಂಭ್ರಮಿಸಿದರು.<br /> ಜಾನಪದ ಕಲಾ ಮೇಳ ತಂಡ, ಭಜನಾ ತಂಡಗಳು ಭಾಗವಹಿಸಿದ್ದವು.<br /> <br /> ಕಣ್ವಕುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಆವರಗೊಳ್ಳದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಆಲ್ದಳ್ಳಿ ಶಿವಾನಂದಪ್ಪ, ಎಂ.ಎಸ್.ಕೊಟ್ರಯ್ಯ, ಸುರೇಂದ್ರಪ್ಪ, ಮಹೇಶ್ವರಪ್ಪ, ದೇವೇಂದ್ರಪ್ಪ ಸೇರಿದಂತೆ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ನಗರದ ಬಸಾಪುರದಲ್ಲಿ ಬುಧವಾರ ಬೆಳಿಗ್ಗೆ ಹಿಮವತ್ಕೇದಾರ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಅಡ್ಡ ಪಲ್ಲಕ್ಕಿ ಉತ್ಸವ ಯಶಸ್ವಿಯಾಗಿ ಜರುಗಿತು.<br /> <br /> ಎರಡು ದಿನ ನಡೆಯುವ ಜನ ಜಾಗೃತಿ ಧರ್ಮ ಸಮಾರಂಭದ ಅಂಗವಾಗಿ ಮೊದಲದಿನ ಸ್ವಾಮೀಜಿಯ ಪಲ್ಲಕ್ಕಿ ಉತ್ಸವ ನಡೆಯಿತು. ಗ್ರಾಮಸ್ಥರು ಶ್ರೀಗಳು ಅಲಂಕರಿಸಿದ್ದ ಪಲ್ಲಕ್ಕಿ ಹೊತ್ತು ‘ಪಂಚಪೀಠಕ್ಕೆ ಜಯವಾಗಲಿ...’, ‘ಮಾನವ<br /> ಧರ್ಮಕ್ಕೆ ಜಯವಾಗಲಿ...’ ಎಂದು ಘೋಷಣೆ ಕೂಗುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.<br /> ಸ್ವಾಮೀಜಿ ಅವರು ಕುಳಿತಿದ್ದ ಪಲ್ಲಕ್ಕಿಯು ಕೆಲವೆಡೆ ನಿಂತು, ಸಾಗುತ್ತಿತ್ತು. ಆ ಸಮಯದಲ್ಲಿ ಶ್ರೀಗಳು ಭಕ್ತರಿಗೆ ಆಶೀರ್ವಾದ ನೀಡಿದರು.<br /> <br /> ಗ್ರಾಮದ ಮಹಿಳೆಯರು ಪೂರ್ಣಕುಂಭ, ಕಳಸದೊಂದಿಗೆ ಸ್ವಾಮೀಜಿಯ ಪಲ್ಲಕ್ಕಿ ಉತ್ಸವವನ್ನು ಬರಮಾಡಿಕೊಂಡರು. ನೂರಾರು ಗ್ರಾಮಸ್ಥರು ಉತ್ಸವದಲ್ಲಿ ಪಾಲ್ಗೊಂಡು ಸ್ವಾಮೀಜಿ ಅವರಿಗೆ ಜಯಕಾರ ಕೂಗಿ ಸಂಭ್ರಮಿಸಿದರು.<br /> ಜಾನಪದ ಕಲಾ ಮೇಳ ತಂಡ, ಭಜನಾ ತಂಡಗಳು ಭಾಗವಹಿಸಿದ್ದವು.<br /> <br /> ಕಣ್ವಕುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಆವರಗೊಳ್ಳದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಆಲ್ದಳ್ಳಿ ಶಿವಾನಂದಪ್ಪ, ಎಂ.ಎಸ್.ಕೊಟ್ರಯ್ಯ, ಸುರೇಂದ್ರಪ್ಪ, ಮಹೇಶ್ವರಪ್ಪ, ದೇವೇಂದ್ರಪ್ಪ ಸೇರಿದಂತೆ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>