<p><strong>ಗೌರಿಬಿದನೂರು: </strong>ಪಟ್ಟಣದಲ್ಲಿ ಸೂಕ್ತ ರೀತಿಯಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಪ್ರಯಾಣಿಕರು ಬಸ್ಗಳ ಟಾಪ್ ಮೇಲೆ ಕುಳಿತು ಪ್ರಯಾಣಿಸ ಬೇಕಾದ ಅನಿವಾರ್ಯತೆ ನಿರ್ಮಾಣ ಆಗಿದೆ.<br /> <br /> ನಗರಗೆರೆ, ವಾಟದಹೊಸಹಳ್ಳಿ, ಯಲ್ಲೋಡು ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರಿಗೆ ಈ ಪ್ರಯಾಣ ಸಾಮಾನ್ಯ. ಬಸ್ ವೇಗವಾಗಿ ಸಂಚರಿಸುವಾಗ ಆಯ ತಪ್ಪಿ ಬೀಳುವ ಅಪಾಯ ಇದ್ದರೂ ಪ್ರಯಾಣ ಮುಂದುವರೆದಿದೆ.<br /> <br /> `ಗ್ರಾಮಕ್ಕೆ ಬೆಳಗಿನ ಸಮಯದಲ್ಲಿ ಒಂದೇ ಬಸ್ ಹೊರಡುವುದರಿಂದ ಖಾಸಗಿ ಬಸ್ ಸೇವೆ ಅನಿವಾರ್ಯ ವಾಗಿದೆ. ಆತಂಕದಲ್ಲಿ ಪ್ರತಿದಿನ ಸಂಚರಿಸಬೇಕಿದೆ. ಇದಕ್ಕೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಎನ್ನುತ್ತಾರೆ ವಿದ್ಯಾರ್ಥಿ ಮಹೇಶ್.<br /> <br /> `ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ಬೆಳಿಗ್ಗೆ 8 ರಿಂದ 10 ಗಂಟೆ ಸಮಯ ದಲ್ಲಿ ಕನಿಷ್ಠ ಮೂರು ಬಸ್ಗಳು ಸಂಚರಿಸಿದರೆ ಅನುಕೂಲವಾಗು ತ್ತದೆ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎನ್ನವುದು ವಿದ್ಯಾರ್ಥಿಗಳಾದ ಅನಿಲ್ಕುಮಾರ್, ನವೀನ್ಕುಮಾರ್ ಒತ್ತಾಯಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು: </strong>ಪಟ್ಟಣದಲ್ಲಿ ಸೂಕ್ತ ರೀತಿಯಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಪ್ರಯಾಣಿಕರು ಬಸ್ಗಳ ಟಾಪ್ ಮೇಲೆ ಕುಳಿತು ಪ್ರಯಾಣಿಸ ಬೇಕಾದ ಅನಿವಾರ್ಯತೆ ನಿರ್ಮಾಣ ಆಗಿದೆ.<br /> <br /> ನಗರಗೆರೆ, ವಾಟದಹೊಸಹಳ್ಳಿ, ಯಲ್ಲೋಡು ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರಿಗೆ ಈ ಪ್ರಯಾಣ ಸಾಮಾನ್ಯ. ಬಸ್ ವೇಗವಾಗಿ ಸಂಚರಿಸುವಾಗ ಆಯ ತಪ್ಪಿ ಬೀಳುವ ಅಪಾಯ ಇದ್ದರೂ ಪ್ರಯಾಣ ಮುಂದುವರೆದಿದೆ.<br /> <br /> `ಗ್ರಾಮಕ್ಕೆ ಬೆಳಗಿನ ಸಮಯದಲ್ಲಿ ಒಂದೇ ಬಸ್ ಹೊರಡುವುದರಿಂದ ಖಾಸಗಿ ಬಸ್ ಸೇವೆ ಅನಿವಾರ್ಯ ವಾಗಿದೆ. ಆತಂಕದಲ್ಲಿ ಪ್ರತಿದಿನ ಸಂಚರಿಸಬೇಕಿದೆ. ಇದಕ್ಕೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಎನ್ನುತ್ತಾರೆ ವಿದ್ಯಾರ್ಥಿ ಮಹೇಶ್.<br /> <br /> `ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ಬೆಳಿಗ್ಗೆ 8 ರಿಂದ 10 ಗಂಟೆ ಸಮಯ ದಲ್ಲಿ ಕನಿಷ್ಠ ಮೂರು ಬಸ್ಗಳು ಸಂಚರಿಸಿದರೆ ಅನುಕೂಲವಾಗು ತ್ತದೆ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎನ್ನವುದು ವಿದ್ಯಾರ್ಥಿಗಳಾದ ಅನಿಲ್ಕುಮಾರ್, ನವೀನ್ಕುಮಾರ್ ಒತ್ತಾಯಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>