<p><strong>ಬೆಂಗಳೂರು: </strong>ನಾಗರಬಾವಿ 2ನೇ ಹಂತದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಬಸ್ ಘಟಕ (ಡಿಪೊ) ಮತ್ತು ನಿಲ್ದಾಣ ನಿರ್ಮಾಣ ಕಾರ್ಯಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭಾನುವಾರ ಚಾಲನೆ ನೀಡಿದರು.<br /> <br /> ನಂತರ ಮಾತನಾಡಿದ ಅವರು, 3.30 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ₨ 7 ಕೋಟಿ ವೆಚ್ಚದ ನೂತನ ಬಸ್ ಘಟಕ ಮತ್ತು ನಿಲ್ದಾಣ ಮುಂದಿನ ಹತ್ತು ತಿಂಗಳಲ್ಲಿ ಕಾರ್ಯಾಚರಣೆಗೆ ಲಭ್ಯವಾಗಲಿದೆ ಎಂದು ಹೇಳಿದರು.<br /> <br /> ಈ ಹೊಸ ನಿಲ್ದಾಣದಿಂದ ಬಸ್ಗಳು ಪ್ರತಿನಿತ್ಯ 80 ಮಾರ್ಗಗಳಲ್ಲಿ 602 ಟ್ರಿಪ್ಗಳಷ್ಟು ಸಂಚಾರ ನಡೆಸಲಿವೆ ಎಂದು ಅವರು ತಿಳಿಸಿದರು.<br /> ಸಂಸ್ಥೆಯ ಸಿಬ್ಬಂದಿಗಳಿಗೆ ಅನುಕೂಲವಾಗುವಂತೆ ಶಿವನಪುರ, ಗುಂಜೂರು ಮತ್ತು ಕೊಡತಿ ಬಸ್ ಘಟಕಗಳಿಗೆ ಹೊಂದಿಕೊಂಡಂತೆ 120 ವಸತಿಗೃಹಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.<br /> <br /> ಮೇಯರ್ ಬಿ.ಎಸ್.ಸತ್ಯನಾರಾಯಣ ಮಾತನಾಡಿ, ನರಸಿಂಹರಾಜ ಕಾಲೋನಿಯಲ್ಲಿ ಆಧುನಿಕ ಬಸ್ ನಿಲ್ದಾಣ ನಿರ್ಮಿಸುವ ಪ್ರಸ್ತಾವ ಇದೆ ಎಂದರು.<br /> <br /> ಶಾಸಕ ಎಂ.ಮುನಿರತ್ನ ಅವರು ಮಾತನಾಡಿ, ‘ಮಹಾನಗರ ಪಾಲಿಕೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ ಏಕರೂಪದ ಅನುದಾನ ಜಾರಿಯಲ್ಲಿದೆ. ಕ್ಷೇತ್ರಗಳ ಜನಸಂಖ್ಯೆ ಮತ್ತು ವ್ಯಾಪ್ತಿಯನ್ನು ಆಧರಿಸಿ ಅನುದಾನವನ್ನು ಹಂಚಿಕೆ ಮಾಡುವುದರಿಂದ ಕ್ಷೇತ್ರಗಳ ಅಭಿವೃದ್ಧಿಯನ್ನು ಸಮರ್ಪಕವಾಗಿ ಮಾಡಲು ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.<br /> <br /> ವಿಧಾನ ಪರಿಷತ್ ಸದಸ್ಯರಾದ ರಾಮಚಂದ್ರೇಗೌಡ, ಬಿಎಂಟಿಸಿ ವ್ಯವಸ್ಥಾಪಕರಾದ ನಿರ್ದೇಶಕ ಅಂಜುಂ ಪರ್ವೇಜ್ ಮತ್ತು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಾಗರಬಾವಿ 2ನೇ ಹಂತದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಬಸ್ ಘಟಕ (ಡಿಪೊ) ಮತ್ತು ನಿಲ್ದಾಣ ನಿರ್ಮಾಣ ಕಾರ್ಯಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭಾನುವಾರ ಚಾಲನೆ ನೀಡಿದರು.<br /> <br /> ನಂತರ ಮಾತನಾಡಿದ ಅವರು, 3.30 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ₨ 7 ಕೋಟಿ ವೆಚ್ಚದ ನೂತನ ಬಸ್ ಘಟಕ ಮತ್ತು ನಿಲ್ದಾಣ ಮುಂದಿನ ಹತ್ತು ತಿಂಗಳಲ್ಲಿ ಕಾರ್ಯಾಚರಣೆಗೆ ಲಭ್ಯವಾಗಲಿದೆ ಎಂದು ಹೇಳಿದರು.<br /> <br /> ಈ ಹೊಸ ನಿಲ್ದಾಣದಿಂದ ಬಸ್ಗಳು ಪ್ರತಿನಿತ್ಯ 80 ಮಾರ್ಗಗಳಲ್ಲಿ 602 ಟ್ರಿಪ್ಗಳಷ್ಟು ಸಂಚಾರ ನಡೆಸಲಿವೆ ಎಂದು ಅವರು ತಿಳಿಸಿದರು.<br /> ಸಂಸ್ಥೆಯ ಸಿಬ್ಬಂದಿಗಳಿಗೆ ಅನುಕೂಲವಾಗುವಂತೆ ಶಿವನಪುರ, ಗುಂಜೂರು ಮತ್ತು ಕೊಡತಿ ಬಸ್ ಘಟಕಗಳಿಗೆ ಹೊಂದಿಕೊಂಡಂತೆ 120 ವಸತಿಗೃಹಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.<br /> <br /> ಮೇಯರ್ ಬಿ.ಎಸ್.ಸತ್ಯನಾರಾಯಣ ಮಾತನಾಡಿ, ನರಸಿಂಹರಾಜ ಕಾಲೋನಿಯಲ್ಲಿ ಆಧುನಿಕ ಬಸ್ ನಿಲ್ದಾಣ ನಿರ್ಮಿಸುವ ಪ್ರಸ್ತಾವ ಇದೆ ಎಂದರು.<br /> <br /> ಶಾಸಕ ಎಂ.ಮುನಿರತ್ನ ಅವರು ಮಾತನಾಡಿ, ‘ಮಹಾನಗರ ಪಾಲಿಕೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ ಏಕರೂಪದ ಅನುದಾನ ಜಾರಿಯಲ್ಲಿದೆ. ಕ್ಷೇತ್ರಗಳ ಜನಸಂಖ್ಯೆ ಮತ್ತು ವ್ಯಾಪ್ತಿಯನ್ನು ಆಧರಿಸಿ ಅನುದಾನವನ್ನು ಹಂಚಿಕೆ ಮಾಡುವುದರಿಂದ ಕ್ಷೇತ್ರಗಳ ಅಭಿವೃದ್ಧಿಯನ್ನು ಸಮರ್ಪಕವಾಗಿ ಮಾಡಲು ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.<br /> <br /> ವಿಧಾನ ಪರಿಷತ್ ಸದಸ್ಯರಾದ ರಾಮಚಂದ್ರೇಗೌಡ, ಬಿಎಂಟಿಸಿ ವ್ಯವಸ್ಥಾಪಕರಾದ ನಿರ್ದೇಶಕ ಅಂಜುಂ ಪರ್ವೇಜ್ ಮತ್ತು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>