<p><strong>ಬೆಂಗಳೂರು : </strong>‘ಬಸ್ ನಿಲ್ದಾಣದಿಂದ 100 ಮೀಟರ್ ಅಂತರದೊಳಗೆ ತಂಬಾಕು ಸೇವನೆ ಹಾಗೂ ಧೂಮಪಾನ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ.ಈಶ್ವರಪ್ಪ ಹೇಳಿದರು.<br /> <br /> ಸಾರ್ವಜನಿಕ ಆರೋಗ್ಯ ಸಂಸ್ಥೆ, ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್ಗಳ ಸಂಘ (ಕೆಪಿಎಚ್ಆರ್ಎ) ಹಾಗೂ ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘದ ಸಹಯೋಗದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.<br /> <br /> ‘ಬಸ್ ನಿಲ್ದಾಣದ 100 ಮೀಟರ್ ವ್ಯಾಪ್ತಿಯಲ್ಲಿ ಧೂಮಪಾನ ನಿಷೇಧಕ್ಕೆ ಈಗಿನ ಕಾನೂನಿನಲ್ಲಿ ಅವಕಾಶವಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನದ ಪರೋಕ್ಷ ಪರಿಣಾಮಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದರು.<br /> <br /> ತಂಬಾಕು ರಹಿತ ಕರ್ನಾಟಕ ಆಂದೋಲನದ ಸಂಚಾಲಕ ಡಾ.ವಿಶಾಲ್ ರಾವ್, ‘ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚು ಮಂದಿ ಪ್ರತಿನಿತ್ಯ ಧೂಮಪಾನ ಮಾಡುತ್ತಾರೆ. ಇವರು ಧೂಮಪಾನ ಮಾಡಿ ಬಿಟ್ಟ ಹೊಗೆಯನ್ನು ಅಷ್ಟೇ ಸಂಖ್ಯೆಯ ಜನ ಸೇವನೆ ಮಾಡುತ್ತಾರೆ. ಈ ರೀತಿ ಧೂಮಪಾನದ ದುಷ್ಪರಿಣಾಮಗಳಿಗೆ ಪರೋಕ್ಷವಾಗಿ ತುತ್ತಾಗುವವರ ಸಂಖ್ಯೆಯೂ ಹೆಚ್ಚಾಗಿದೆ’ ಎಂದರು.<br /> <br /> ‘ಧೂಮಪಾನದಿಂದಾಗುವ ದುಷ್ಪರಿಣಾಮಗಳನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಾಗಿ ಧೂಮಪಾನ ನಿಷೇಧಿಸಬೇಕು’ ಎಂದು ಅವರು ಆಗ್ರಹಿಸಿದರು. ಕೆಪಿಎಚ್ಆರ್ಎ ಅಧ್ಯಕ್ಷ ರಾಮಚಂದ್ರ ಉಪಾಧ್ಯ ಮಾತನಾಡಿ, ‘ಗ್ರಾಹಕರ ಮತ್ತು ನೌಕರರ ಆರೋಗ್ಯ ದೃಷ್ಟಿಯಿಂದ ಸಂಘದ ಹೋಟೆಲ್ಗಳಲ್ಲಿ ಧೂಮಪಾನ ನಿಷೇಧಿಸುವಂತೆ ಸೂಚಿಸಲಾಗಿದೆ’ ಎಂದರು.<br /> <br /> ಬೆಂಗಳೂರು ಹೋಟೆಲ್ಗಳ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್, ಹೋಟೆಲ್ ನೌಕರರಲ್ಲಿ ಧೂಮಪಾನದ ಪ್ರತ್ಯಕ್ಷ ಮತ್ತು ಪರೋಕ್ಷ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು : </strong>‘ಬಸ್ ನಿಲ್ದಾಣದಿಂದ 100 ಮೀಟರ್ ಅಂತರದೊಳಗೆ ತಂಬಾಕು ಸೇವನೆ ಹಾಗೂ ಧೂಮಪಾನ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ.ಈಶ್ವರಪ್ಪ ಹೇಳಿದರು.<br /> <br /> ಸಾರ್ವಜನಿಕ ಆರೋಗ್ಯ ಸಂಸ್ಥೆ, ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್ಗಳ ಸಂಘ (ಕೆಪಿಎಚ್ಆರ್ಎ) ಹಾಗೂ ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘದ ಸಹಯೋಗದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.<br /> <br /> ‘ಬಸ್ ನಿಲ್ದಾಣದ 100 ಮೀಟರ್ ವ್ಯಾಪ್ತಿಯಲ್ಲಿ ಧೂಮಪಾನ ನಿಷೇಧಕ್ಕೆ ಈಗಿನ ಕಾನೂನಿನಲ್ಲಿ ಅವಕಾಶವಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನದ ಪರೋಕ್ಷ ಪರಿಣಾಮಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದರು.<br /> <br /> ತಂಬಾಕು ರಹಿತ ಕರ್ನಾಟಕ ಆಂದೋಲನದ ಸಂಚಾಲಕ ಡಾ.ವಿಶಾಲ್ ರಾವ್, ‘ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚು ಮಂದಿ ಪ್ರತಿನಿತ್ಯ ಧೂಮಪಾನ ಮಾಡುತ್ತಾರೆ. ಇವರು ಧೂಮಪಾನ ಮಾಡಿ ಬಿಟ್ಟ ಹೊಗೆಯನ್ನು ಅಷ್ಟೇ ಸಂಖ್ಯೆಯ ಜನ ಸೇವನೆ ಮಾಡುತ್ತಾರೆ. ಈ ರೀತಿ ಧೂಮಪಾನದ ದುಷ್ಪರಿಣಾಮಗಳಿಗೆ ಪರೋಕ್ಷವಾಗಿ ತುತ್ತಾಗುವವರ ಸಂಖ್ಯೆಯೂ ಹೆಚ್ಚಾಗಿದೆ’ ಎಂದರು.<br /> <br /> ‘ಧೂಮಪಾನದಿಂದಾಗುವ ದುಷ್ಪರಿಣಾಮಗಳನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಾಗಿ ಧೂಮಪಾನ ನಿಷೇಧಿಸಬೇಕು’ ಎಂದು ಅವರು ಆಗ್ರಹಿಸಿದರು. ಕೆಪಿಎಚ್ಆರ್ಎ ಅಧ್ಯಕ್ಷ ರಾಮಚಂದ್ರ ಉಪಾಧ್ಯ ಮಾತನಾಡಿ, ‘ಗ್ರಾಹಕರ ಮತ್ತು ನೌಕರರ ಆರೋಗ್ಯ ದೃಷ್ಟಿಯಿಂದ ಸಂಘದ ಹೋಟೆಲ್ಗಳಲ್ಲಿ ಧೂಮಪಾನ ನಿಷೇಧಿಸುವಂತೆ ಸೂಚಿಸಲಾಗಿದೆ’ ಎಂದರು.<br /> <br /> ಬೆಂಗಳೂರು ಹೋಟೆಲ್ಗಳ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್, ಹೋಟೆಲ್ ನೌಕರರಲ್ಲಿ ಧೂಮಪಾನದ ಪ್ರತ್ಯಕ್ಷ ಮತ್ತು ಪರೋಕ್ಷ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>