<p>ನಾಗಮಂಗಲ: ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ತಾಲ್ಲೂಕಿನ ತಟ್ಟಹಳ್ಳಿ ಗೇಟ್ ಸಮೀಪದ ತಿರುವಿನಲ್ಲಿ ಶನಿವಾರ ನಡೆದಿದೆ. <br /> <br /> ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ರೋಟರಿ ವಿದ್ಯಾ ಸಂಸ್ಥೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳು ಹಾಗೂ ದೇವಲಾಪುರ ಸುತ್ತಲಿನ ಗ್ರಾಮಸ್ಥರು ಗಾಯಗೊಂಡವರಲ್ಲಿ ಸೇರಿದ್ದಾರೆ. <br /> <br /> ಗಾಯಾಳುಗಳಿಗೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಆದಿಚುಂಚನಗಿರಿ ಆಸ್ಪತ್ರೆ ಮತ್ತು ಮಂಡ್ಯದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.<br /> <br /> ದೇವಲಾಪುರ ಗ್ರಾಮದಿಂದ ನಾಗಮಂಗಲಕ್ಕೆ ಬರುತ್ತಿದ್ದ ಖಾಸಗಿ ಬಸ್ ಅತಿಯಾದ ವೇಗದ ಚಾಲನೆಯಿಂದ ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗಲಿಲ್ಲ. ಆಗ ಬಸ್ ಪಲ್ಟಿ ಹೊಡೆಯಿತು. <br /> <br /> `ಬಸ್ಸು ದೇವಲಾಪುರದಿಂದ ಹೊರಡುವ ಸಂದರ್ಭದಲ್ಲೇ ಹಿಂದಿನ ಟೈರ್ ಪಂಕ್ಚರ್ ಆಗಿದ್ದು ಗಮನಕ್ಕೆ ಬಂದಿತ್ತು. ಆತನ ಗಮನಕ್ಕೆ ತಂದರೂ ಉಡಾಫೆಯಿಂದ ವರ್ತಿಸಿದ. ಬೇಕಾದವರೂ ಬನ್ನಿ ಎಂಬ ಉತ್ತರ ನೀಡಿದ. ಅನಿವಾರ್ಯವಾಗಿ ಈ ಬಸ್ನಲ್ಲಿ ಪ್ರಯಾಣ ಮಾಡಬೇಕಾಯಿತು~ ಎಂದು ಗಾಯಗೊಂಡವರು ತಿಳಿಸಿದರು.<br /> <br /> ಈ ಘಟನೆಯಲ್ಲಿ ಕಂಡಕ್ಟರ್ ಸಹ ಗಾಯಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ನಾಲ್ಕೈದು ಮಂದಿಗೆ ತೀವ್ರ ಸ್ವರೂಪದ ಗಾಯವಾಗಿದೆ. <br /> ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಗಮಂಗಲ: ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ತಾಲ್ಲೂಕಿನ ತಟ್ಟಹಳ್ಳಿ ಗೇಟ್ ಸಮೀಪದ ತಿರುವಿನಲ್ಲಿ ಶನಿವಾರ ನಡೆದಿದೆ. <br /> <br /> ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ರೋಟರಿ ವಿದ್ಯಾ ಸಂಸ್ಥೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳು ಹಾಗೂ ದೇವಲಾಪುರ ಸುತ್ತಲಿನ ಗ್ರಾಮಸ್ಥರು ಗಾಯಗೊಂಡವರಲ್ಲಿ ಸೇರಿದ್ದಾರೆ. <br /> <br /> ಗಾಯಾಳುಗಳಿಗೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಆದಿಚುಂಚನಗಿರಿ ಆಸ್ಪತ್ರೆ ಮತ್ತು ಮಂಡ್ಯದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.<br /> <br /> ದೇವಲಾಪುರ ಗ್ರಾಮದಿಂದ ನಾಗಮಂಗಲಕ್ಕೆ ಬರುತ್ತಿದ್ದ ಖಾಸಗಿ ಬಸ್ ಅತಿಯಾದ ವೇಗದ ಚಾಲನೆಯಿಂದ ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗಲಿಲ್ಲ. ಆಗ ಬಸ್ ಪಲ್ಟಿ ಹೊಡೆಯಿತು. <br /> <br /> `ಬಸ್ಸು ದೇವಲಾಪುರದಿಂದ ಹೊರಡುವ ಸಂದರ್ಭದಲ್ಲೇ ಹಿಂದಿನ ಟೈರ್ ಪಂಕ್ಚರ್ ಆಗಿದ್ದು ಗಮನಕ್ಕೆ ಬಂದಿತ್ತು. ಆತನ ಗಮನಕ್ಕೆ ತಂದರೂ ಉಡಾಫೆಯಿಂದ ವರ್ತಿಸಿದ. ಬೇಕಾದವರೂ ಬನ್ನಿ ಎಂಬ ಉತ್ತರ ನೀಡಿದ. ಅನಿವಾರ್ಯವಾಗಿ ಈ ಬಸ್ನಲ್ಲಿ ಪ್ರಯಾಣ ಮಾಡಬೇಕಾಯಿತು~ ಎಂದು ಗಾಯಗೊಂಡವರು ತಿಳಿಸಿದರು.<br /> <br /> ಈ ಘಟನೆಯಲ್ಲಿ ಕಂಡಕ್ಟರ್ ಸಹ ಗಾಯಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ನಾಲ್ಕೈದು ಮಂದಿಗೆ ತೀವ್ರ ಸ್ವರೂಪದ ಗಾಯವಾಗಿದೆ. <br /> ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>