<p><strong>ಶ್ರೀನಿವಾಸಪುರ:</strong> ಪಟ್ಟಣದಲ್ಲಿ ಸಿಪಿಎಂ ಕಾರ್ಯಕರ್ತರು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸೋಮವಾರ ರಸ್ತೆ ತಡೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.<br /> <br /> ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಈ ಸಂದರ್ಭದಲ್ಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯುವಲ್ಲಿ ವಿಫಲವಾಗಿವೆ. ಆಳುವ ಮಂದಿಗೆ ಬಡವರ ಪರ ಕಾಳಜಿ ಇಲ್ಲ ಎಂದು ಆಪಾದಿಸಿದರು.<br /> <br /> ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸುವುದರ ಮೂಲಕ ಬಡವರ ಹೊಟ್ಟೆಯ ಮೇಲೆ ಹೊಡೆದಿದೆ. ಈಗ ತೈಲೋತ್ಪನ್ನಗಳನ್ನು ಕೇವಲ ಶ್ರೀಮಂತರು ಮಾತ್ರ ಬಳಸುತ್ತಿಲ್ಲ. ಸಮಾಜದ ಎಲ್ಲ ವರ್ಗದ ಜನರೂ ಬಳಸುತ್ತಾರೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳಿಗೆ ಬೆಂಬಲ ವ್ಯಕ್ತಪಡಿಸಿ ಬಸ್ ಪ್ರಯಾಣ ದರ ಹೆಚ್ಚಿಸುವುದರ ಮೂಲಕ ತನ್ನ ಜನ ವಿರೋಧಿ ಮುಖವಾಡವನ್ನು ಬಯಲು ಮಾಡಿದೆ ಎಂದು ಹೇಳಿದರು.<br /> <br /> ಹಾಲು, ಹಣ್ಣು ,ತರಕಾರಿ ಹಾಗೂ ದಿನಸಿ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಇದರಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಕೂಲಿ ನಾಲಿ ಮಾಡಿ ಬದುಕುವ ಜನರ ಜೀವನ ಅಲ್ಲೋಲ ಕಲ್ಲೋಲವಾಗಿದೆ. ಇನ್ನು ಮಧ್ಯಮ ವರ್ಗದ ಜನರ ಬದುಕು ಇನ್ನಷ್ಟು ಸೊರಗಿದೆ. ಇದಕ್ಕೆ ಸರ್ಕಾರದ ಜನವಿರೋಧಿ ನೀತಿ ಕಾರಣವಾಗಿದೆ. ಸರ್ಕಾರಗಳು ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಸಮಾಜದ ಎಲ್ಲ ವರ್ಗದ ಜನರೂ ಬದುಕುವಂಥ ವಾತಾವರಣ ನಿರ್ಮಿಸಬೇಕು ಎಂದು ಮನವಿ ಮಾಡಿದರು.<br /> <br /> ರಾಜ್ಯ ಸರ್ಕಾರ ಎಪಿಎಲ್ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಸಮಗ್ರ ಆಹಾರ ಪದ್ಧತಿ ನೀತಿ ಜಾರಿಗೆ ತರಬೇಕು. ಇಲ್ಲವಾದರೆ ತಮ್ಮ ಸಂಘಟನೆ ತೀವ್ರ ಪ್ರತಿಭಟನೆ ನಡೆಸುವುದು ಎಂದು ಎಚ್ಚರಿಸಿದರು.<br /> <br /> ಮುಖಂಡರಾದ ಪಿ.ಆರ್.ನವೀನ್ ಕುಮಾರ್, ವೀರಪ್ಪರೆಡ್ಡಿ, ಜಿ.ಈಶ್ವರಮ್ಮ, ನಾಗಭೂಷಣ್, ವಿಜಯಲಕ್ಷ್ಮಿ, ಎಂ.ಜಯಮ್ಮ, ವಿ.ಆನಂದ್ ಪ್ರತಿಭಟನೆ ಇತರರು ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ಪಟ್ಟಣದಲ್ಲಿ ಸಿಪಿಎಂ ಕಾರ್ಯಕರ್ತರು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸೋಮವಾರ ರಸ್ತೆ ತಡೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.<br /> <br /> ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಈ ಸಂದರ್ಭದಲ್ಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯುವಲ್ಲಿ ವಿಫಲವಾಗಿವೆ. ಆಳುವ ಮಂದಿಗೆ ಬಡವರ ಪರ ಕಾಳಜಿ ಇಲ್ಲ ಎಂದು ಆಪಾದಿಸಿದರು.<br /> <br /> ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸುವುದರ ಮೂಲಕ ಬಡವರ ಹೊಟ್ಟೆಯ ಮೇಲೆ ಹೊಡೆದಿದೆ. ಈಗ ತೈಲೋತ್ಪನ್ನಗಳನ್ನು ಕೇವಲ ಶ್ರೀಮಂತರು ಮಾತ್ರ ಬಳಸುತ್ತಿಲ್ಲ. ಸಮಾಜದ ಎಲ್ಲ ವರ್ಗದ ಜನರೂ ಬಳಸುತ್ತಾರೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳಿಗೆ ಬೆಂಬಲ ವ್ಯಕ್ತಪಡಿಸಿ ಬಸ್ ಪ್ರಯಾಣ ದರ ಹೆಚ್ಚಿಸುವುದರ ಮೂಲಕ ತನ್ನ ಜನ ವಿರೋಧಿ ಮುಖವಾಡವನ್ನು ಬಯಲು ಮಾಡಿದೆ ಎಂದು ಹೇಳಿದರು.<br /> <br /> ಹಾಲು, ಹಣ್ಣು ,ತರಕಾರಿ ಹಾಗೂ ದಿನಸಿ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಇದರಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಕೂಲಿ ನಾಲಿ ಮಾಡಿ ಬದುಕುವ ಜನರ ಜೀವನ ಅಲ್ಲೋಲ ಕಲ್ಲೋಲವಾಗಿದೆ. ಇನ್ನು ಮಧ್ಯಮ ವರ್ಗದ ಜನರ ಬದುಕು ಇನ್ನಷ್ಟು ಸೊರಗಿದೆ. ಇದಕ್ಕೆ ಸರ್ಕಾರದ ಜನವಿರೋಧಿ ನೀತಿ ಕಾರಣವಾಗಿದೆ. ಸರ್ಕಾರಗಳು ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಸಮಾಜದ ಎಲ್ಲ ವರ್ಗದ ಜನರೂ ಬದುಕುವಂಥ ವಾತಾವರಣ ನಿರ್ಮಿಸಬೇಕು ಎಂದು ಮನವಿ ಮಾಡಿದರು.<br /> <br /> ರಾಜ್ಯ ಸರ್ಕಾರ ಎಪಿಎಲ್ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಸಮಗ್ರ ಆಹಾರ ಪದ್ಧತಿ ನೀತಿ ಜಾರಿಗೆ ತರಬೇಕು. ಇಲ್ಲವಾದರೆ ತಮ್ಮ ಸಂಘಟನೆ ತೀವ್ರ ಪ್ರತಿಭಟನೆ ನಡೆಸುವುದು ಎಂದು ಎಚ್ಚರಿಸಿದರು.<br /> <br /> ಮುಖಂಡರಾದ ಪಿ.ಆರ್.ನವೀನ್ ಕುಮಾರ್, ವೀರಪ್ಪರೆಡ್ಡಿ, ಜಿ.ಈಶ್ವರಮ್ಮ, ನಾಗಭೂಷಣ್, ವಿಜಯಲಕ್ಷ್ಮಿ, ಎಂ.ಜಯಮ್ಮ, ವಿ.ಆನಂದ್ ಪ್ರತಿಭಟನೆ ಇತರರು ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>