<p>ಬೆಂಗಳೂರು: ಇದೇ 27ರಿಂದ ಬಸ್ ಸಂಚಾರವನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಕಾಲ ಮುಷ್ಕರ ನಡೆಸುವ ಸಂಬಂಧ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಾರ್ಮಿಕ ಸಂಘಟನೆಗಳಲ್ಲಿ ಒಡಕು ಉಂಟಾಗಿದೆ. <br /> <br /> ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಎಸ್ಸಿ/ಎಸ್ಟಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ, ಸಿಐಟಿಯು ಸಹ ಮುಷ್ಕರಕ್ಕೆ ವಿರೋಧ ವ್ಯಕ್ತಪಡಿಸಿದೆ ಎಂದು ಮಜ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸನ್ನ ಅವರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಮುಷ್ಕರದಲ್ಲಿ ಭಾಗಿಯಾಗುವುದಾಗಿ ತಿಳಿಸಿದೆ. <br /> <br /> ನೌಕರರ ಬೇಡಿಕೆಗಳ ಬಗ್ಗೆ ಅನೇಕ ಬಾರಿ ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕಾರ್ಮಿಕರ ಹಕ್ಕುಗಳನ್ನು ದಮನಗೊಳಿಸುವ ಪ್ರಯತ್ನ ನಡೆದಿದೆ. ಇದನ್ನು ಖಂಡಿಸಿ ಮುಷ್ಕರ ನಡೆಸಲಾಗುತ್ತಿದೆ ಎಂದು ಜಂಟಿ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಇದೇ 27ರಿಂದ ಬಸ್ ಸಂಚಾರವನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಕಾಲ ಮುಷ್ಕರ ನಡೆಸುವ ಸಂಬಂಧ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಾರ್ಮಿಕ ಸಂಘಟನೆಗಳಲ್ಲಿ ಒಡಕು ಉಂಟಾಗಿದೆ. <br /> <br /> ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಎಸ್ಸಿ/ಎಸ್ಟಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ, ಸಿಐಟಿಯು ಸಹ ಮುಷ್ಕರಕ್ಕೆ ವಿರೋಧ ವ್ಯಕ್ತಪಡಿಸಿದೆ ಎಂದು ಮಜ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸನ್ನ ಅವರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಮುಷ್ಕರದಲ್ಲಿ ಭಾಗಿಯಾಗುವುದಾಗಿ ತಿಳಿಸಿದೆ. <br /> <br /> ನೌಕರರ ಬೇಡಿಕೆಗಳ ಬಗ್ಗೆ ಅನೇಕ ಬಾರಿ ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕಾರ್ಮಿಕರ ಹಕ್ಕುಗಳನ್ನು ದಮನಗೊಳಿಸುವ ಪ್ರಯತ್ನ ನಡೆದಿದೆ. ಇದನ್ನು ಖಂಡಿಸಿ ಮುಷ್ಕರ ನಡೆಸಲಾಗುತ್ತಿದೆ ಎಂದು ಜಂಟಿ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>