<p><br /> ಚಂಡೀಗಡ (ಐಎಎನ್ಎಸ್):ವ್ಯಾಪಾರಸ್ಥರಿಗೆ ಸಣ್ಣ ಮಳಿಗೆಗಳನ್ನು ಹಂಚಿಕೆ ಮಾಡುವ ಯೋಜನೆಯಲ್ಲಿ ನಡೆದಿರುವ ಬಹು ಕೋಟಿ ರೂಪಾಯಿಗಳ ಹಗರಣದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪವನ್ ಕುಮಾರ್ ಬನ್ಸಲ್ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳ ಭಾಗಿಯಾಗಿದ್ದಾರೆ ಎಂದು ತನಿಖಾ ವರದಿ ಹೇಳಿದೆ.<br /> <br /> ಈ ಹಗರಣದ ಬಗ್ಗೆ ತನಿಖೆ ನಡೆಸಿದ ಹಿರಿಯ ಅಧಿಕಾರಿ ಪಿ.ಎಸ್.ಶೇರ್ಗಿಲ್ ಅವರು ನೀಡಿರುವ 700 ಪುಟಗಳ ವರದಿಯಲ್ಲಿ ಚಂಡೀಗಡದ ಸೆಕ್ಟರ್ 41ರಲ್ಲಿ ಸಣ್ಣ ಮಳಿಗೆಗಳನ್ನು ಹಂಚಿಕೆ ಮಾಡುವ ಯೋಜನೆಯಲ್ಲಿ ಅವ್ಯವಹಾರ ನಡೆದಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ.<br /> <br /> ತನಿಖೆ ನಡೆಸಿದ ಸಮಯದಲ್ಲಿ ಕೇಂದ್ರಾಡಳಿತ ಪ್ರದೇಶವಾದ ಚಂಡೀಗಡದ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಅವರು, ಈ ಹಗರಣದಲ್ಲಿ ಸಚಿವ ಬನ್ಸಲ್ ಅವರ ಪಾತ್ರವೂ ಇದೆ ಎಂದು ಉಲ್ಲೇಖಿಸಿದ್ದಾರೆ.<br /> <br /> ಚಂಡೀಗಡ ಆಡಳಿತದ ಸಲಹೆಗಾರ ಪ್ರದೀಪ್ ಮೆಹ್ರಾ, ಚಂಡೀಗಡದ ಮಾಜಿ ಜಿಲ್ಲಾಧಿಕಾರಿ ಆರ್.ಕೆ. ರಾವ್ ಸೇರಿದಂತೆ ಅನೇಕ ಕಂದಾಯ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ತಮ್ಮ ವರದಿಯಲ್ಲಿ ಹೇಳಿದ್ದಾರೆ. <br /> <br /> ಸೆಕ್ಟರ್ 22ರಲ್ಲಿದ್ದ ಬಜ್ವಾರ ಮಾರುಕಟ್ಟೆಯಲ್ಲಿ 1989ರಲ್ಲಿ ಬೆಂಕಿ ಅನಾಹುತದಿಂದ ನಷ್ಟ ಅನುಭವಿಸಿದ ವ್ಯಾಪಾರಿಗಳಿಗೆ ಪರಿಹಾರಾರ್ಥವಾಗಿ ಈ ಮಳಿಗೆಯನ್ನು ನಿರ್ಮಿಸಲಾಗಿದೆ. ಆದರೆ, ಬೆಂಕಿ ಅನಾಹುತದಲ್ಲಿ ಯಾವುದೇ ನಷ್ಟ ಅನುಭವಿಸದ ಹಲವಾರು ಮಂದಿ ಪೊಲೀಸರು, ಕಂದಾಯ ಇಲಾಖೆಗಳ ಅಧಿಕಾರಿಗಳೊಂದಿಗೆ ಸೇರಿಕೊಂಡು ಪಿತೂರಿ ನಡೆಸಿ ಸೆಕ್ಟರ್ 41ರಲ್ಲಿ ಮಳಿಗೆಗಳನ್ನು ಪಡೆದಿದ್ದಾರೆ. <br /> <br /> ರಾಜಕಾರಣಿಗಳು, ಪೊಲೀಸರು ಮತ್ತು ಇತರ ಇಲಾಖೆಗಳ ಅಧಿಕಾರಿಗಳಿಗೆ ನೀಡಲಾಗಿರುವ ಲಂಚದ ಹಣವೂ ಸೇರಿದಂತೆ ಮಳಿಗೆ ಹಂಚಿಕೆಯಲ್ಲಿ ಹಲವು ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವ ಶೇರ್ಗಿಲ್, ಈ ಹಗರಣವನ್ನು ವಿಸ್ತೃತವಾಗಿ ತನಿಖೆ ನಡೆಸಲು ಸಿಬಿಐಗೆ ವಹಿಸುವುದು ಸೂಕ್ತ ಎಂದು ಶಿಫಾರಸು ಮಾಡಿದ್ದಾರೆ.<br /> <br /> ಮಳಿಗೆ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಅನೇಕ ದೂರುಗಳು ಬಂದ ಕಾರಣ ಚಂಡೀಗಡ ಆಡಳಿತಾಧಿಕಾರಿ ಶಿವರಾಜ್ ಪಾಟೀಲ್ ಮಾರ್ಚ್ 2010ರಲ್ಲಿ ತನಿಖೆ ಆದೇಶ ನೀಡಿ ಶೇರ್ಗಿಲ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><br /> ಚಂಡೀಗಡ (ಐಎಎನ್ಎಸ್):ವ್ಯಾಪಾರಸ್ಥರಿಗೆ ಸಣ್ಣ ಮಳಿಗೆಗಳನ್ನು ಹಂಚಿಕೆ ಮಾಡುವ ಯೋಜನೆಯಲ್ಲಿ ನಡೆದಿರುವ ಬಹು ಕೋಟಿ ರೂಪಾಯಿಗಳ ಹಗರಣದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪವನ್ ಕುಮಾರ್ ಬನ್ಸಲ್ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳ ಭಾಗಿಯಾಗಿದ್ದಾರೆ ಎಂದು ತನಿಖಾ ವರದಿ ಹೇಳಿದೆ.<br /> <br /> ಈ ಹಗರಣದ ಬಗ್ಗೆ ತನಿಖೆ ನಡೆಸಿದ ಹಿರಿಯ ಅಧಿಕಾರಿ ಪಿ.ಎಸ್.ಶೇರ್ಗಿಲ್ ಅವರು ನೀಡಿರುವ 700 ಪುಟಗಳ ವರದಿಯಲ್ಲಿ ಚಂಡೀಗಡದ ಸೆಕ್ಟರ್ 41ರಲ್ಲಿ ಸಣ್ಣ ಮಳಿಗೆಗಳನ್ನು ಹಂಚಿಕೆ ಮಾಡುವ ಯೋಜನೆಯಲ್ಲಿ ಅವ್ಯವಹಾರ ನಡೆದಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ.<br /> <br /> ತನಿಖೆ ನಡೆಸಿದ ಸಮಯದಲ್ಲಿ ಕೇಂದ್ರಾಡಳಿತ ಪ್ರದೇಶವಾದ ಚಂಡೀಗಡದ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಅವರು, ಈ ಹಗರಣದಲ್ಲಿ ಸಚಿವ ಬನ್ಸಲ್ ಅವರ ಪಾತ್ರವೂ ಇದೆ ಎಂದು ಉಲ್ಲೇಖಿಸಿದ್ದಾರೆ.<br /> <br /> ಚಂಡೀಗಡ ಆಡಳಿತದ ಸಲಹೆಗಾರ ಪ್ರದೀಪ್ ಮೆಹ್ರಾ, ಚಂಡೀಗಡದ ಮಾಜಿ ಜಿಲ್ಲಾಧಿಕಾರಿ ಆರ್.ಕೆ. ರಾವ್ ಸೇರಿದಂತೆ ಅನೇಕ ಕಂದಾಯ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ತಮ್ಮ ವರದಿಯಲ್ಲಿ ಹೇಳಿದ್ದಾರೆ. <br /> <br /> ಸೆಕ್ಟರ್ 22ರಲ್ಲಿದ್ದ ಬಜ್ವಾರ ಮಾರುಕಟ್ಟೆಯಲ್ಲಿ 1989ರಲ್ಲಿ ಬೆಂಕಿ ಅನಾಹುತದಿಂದ ನಷ್ಟ ಅನುಭವಿಸಿದ ವ್ಯಾಪಾರಿಗಳಿಗೆ ಪರಿಹಾರಾರ್ಥವಾಗಿ ಈ ಮಳಿಗೆಯನ್ನು ನಿರ್ಮಿಸಲಾಗಿದೆ. ಆದರೆ, ಬೆಂಕಿ ಅನಾಹುತದಲ್ಲಿ ಯಾವುದೇ ನಷ್ಟ ಅನುಭವಿಸದ ಹಲವಾರು ಮಂದಿ ಪೊಲೀಸರು, ಕಂದಾಯ ಇಲಾಖೆಗಳ ಅಧಿಕಾರಿಗಳೊಂದಿಗೆ ಸೇರಿಕೊಂಡು ಪಿತೂರಿ ನಡೆಸಿ ಸೆಕ್ಟರ್ 41ರಲ್ಲಿ ಮಳಿಗೆಗಳನ್ನು ಪಡೆದಿದ್ದಾರೆ. <br /> <br /> ರಾಜಕಾರಣಿಗಳು, ಪೊಲೀಸರು ಮತ್ತು ಇತರ ಇಲಾಖೆಗಳ ಅಧಿಕಾರಿಗಳಿಗೆ ನೀಡಲಾಗಿರುವ ಲಂಚದ ಹಣವೂ ಸೇರಿದಂತೆ ಮಳಿಗೆ ಹಂಚಿಕೆಯಲ್ಲಿ ಹಲವು ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವ ಶೇರ್ಗಿಲ್, ಈ ಹಗರಣವನ್ನು ವಿಸ್ತೃತವಾಗಿ ತನಿಖೆ ನಡೆಸಲು ಸಿಬಿಐಗೆ ವಹಿಸುವುದು ಸೂಕ್ತ ಎಂದು ಶಿಫಾರಸು ಮಾಡಿದ್ದಾರೆ.<br /> <br /> ಮಳಿಗೆ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಅನೇಕ ದೂರುಗಳು ಬಂದ ಕಾರಣ ಚಂಡೀಗಡ ಆಡಳಿತಾಧಿಕಾರಿ ಶಿವರಾಜ್ ಪಾಟೀಲ್ ಮಾರ್ಚ್ 2010ರಲ್ಲಿ ತನಿಖೆ ಆದೇಶ ನೀಡಿ ಶೇರ್ಗಿಲ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>