<p><strong>ವಾಷಿಂಗ್ಟನ್(ಪಿಟಿಐ): </strong>ಮನೆಕೆಲಸದವಳ ವೀಸಾ ಅರ್ಜಿಯಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪಕ್ಕಾಗಿ <span style="font-size: 26px;">ನ್ಯೂಯಾರ್ಕ್ನಲ್ಲಿನ ಭಾರತದ ಉಪ ಕಾನ್ಸಲ್ ಜನರಲ್ ದೇವಯಾನಿ ಖೋಬ್ರಾಗಡೆ ಅವರನ್ನು ಅಮೆರಿಕ ಅಧಿಕಾರಿಗಳು ಬಂಧಿಸಿ ಕೋಳ ತೊಡಿಸಿದ ಪ್ರಕರಣದಿಂದ ಉಂಟಾಗಿರುವ ರಾಜತಾಂತ್ರಿಕ ಬಿಕ್ಕಟ್ಟು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯಕ್ಕೆ ಧಕ್ಕೆಯಾಗಲಾರದು ಎಂಬ ವಿಶ್ವಾಸವನ್ನು ಅಮೆರಿಕ ವ್ಯಕ್ತಪಡಿಸಿದೆ.</span></p>.<p>‘ಭಾರತದೊಂದಿಗೆ ನಾವು ಹಲವು ವರ್ಷಗಳಿಂದ ಸಹಭಾಗಿತ್ವ ಹೊಂದಿದ್ದೇವೆ. ಇದು ಭವಿಷ್ಯದಲ್ಲೂ ಮುಂದುವರಿಯಲಿದೆ’ ಎಂದು ಅಮೆರಿಕದ ವಿದೇಶಾಂಗ ವಕ್ತಾರರು ತಿಳಿಸಿದ್ದಾರೆ.<br /> <br /> ದೇವಯಾನಿ ಬಂಧನ ಪ್ರಕರಣ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ಕೆಲವು ವಿಷಯಗಳ ಬಗ್ಗೆ ವಿವರ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.<br /> <br /> ಭಾರತದ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅವರು ಅಮೆರಿಕ ಪ್ರವಾಸದಿಂದ ವಾಪಸಾದ ಮಾರನೇ ದಿನವೇ ದೇವಯಾನಿ ಅವರ ಬಂಧನ ನಡೆದಿರುವುದು ಭಾರತ ಹಾಗೂ ಅಮೆರಿಕ ನಡುವಿನ ರಾಜತಾಂತ್ರಿಕ ಸಂಬಂಧದ ಮೇಲೆ ಪರಿಣಾಮ ಬೀರಿದೆ.<br /> <br /> ‘ಭಾರತದ ರಾಜತಾಂತ್ರಿಕ ಅಧಿಕಾರಿಗೆ ಕೈಕೋಳ ತೊಡಿಸಿ ಅವಮಾನ ಮಾಡಿರುವುದನ್ನು ಒಪ್ಪಿಕೊಳ್ಳಲಾಗದು’ ಎಂದು ವಾಷಿಂಗ್ಟನ್ನ ಭಾರತೀಯ ರಾಯಭಾರ ಕಚೇರಿಯ ಹಿರಿಯ ರಾಜತಾಂತ್ರಿಕ ತರಣ್ಜಿತ್ ಸಿಂಗ್ ಸಂಧು ಅಮೆರಿಕದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಹೇಳಿದ್ದಾರೆ.<br /> <br /> ಇದೇ ವೇಳೆ ದೇವಯಾನಿ ಅವರ ಬಂಧನ ಪ್ರಕರಣವನ್ನು ಆದಷ್ಟು ಶೀಘ್ರ ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.<br /> ‘ದೇವಯಾನಿ ರಾಜತಾಂತ್ರಿಕ ಅಧಿಕಾರಿ. ತಮ್ಮ ಕರ್ತವ್ಯ ನಿರ್ವಹಣೆಗಾಗಿ ಅವರು ಅಮೆರಿಕದಲ್ಲಿದ್ದರು. ಆದ್ದರಿಂದ ಅವರಿಗೆ ವಿನಾಯಿತಿ ನೀಡಬೇಕಿತ್ತು’ ಎಂದು ರಾಯಭಾರ ಕಚೇರಿ ಹೇಳಿಕೆ ತಿಳಿಸಿದೆ.<br /> <br /> ‘ದೇವಯಾನಿ ಅವರು ಇಬ್ಬರು ಮಕ್ಕಳ ತಾಯಿ. ಅವರ ಬಂಧನ ಪ್ರಕರಣದಿಂದ ಭಾರತ ಸರ್ಕಾರ ಆಘಾತಕ್ಕೊಳಗಾಗಿದೆ ಹಾಗೂ ಅಮೆರಿಕದ ಅಧಿಕಾರಿಗಳ ಕ್ರಮದಿಂದ ಗಾಬರಿಗೊಂಡಿದೆ’ ಎಂದೂ ಹೇಳಲಾಗಿದೆ.<br /> <br /> ದೇವಯಾನಿ ರಾಜತಾಂತ್ರಿಕ ವಿನಾಯಿತಿಗೆ ಅರ್ಹತೆ ಹೊಂದಿದ್ದರು ಎಂದು ಅವರ ವಕೀಲ ಪ್ರೀತ್ ಭರಾರ್ ಹೇಳಿದ್ದಾರೆ.<br /> ರಾಜತಾಂತ್ರಿಕರಿಗೆ ವಿಯೆನ್ನಾ ಒಪ್ಪಂದದಂತೆ ವಿನಾಯಿತಿ ನೀಡಬೇಕು ಎಂದು ಭಾರತ ಮೂಲದ ಅಮೆರಿಕ ವಕೀಲ ರವಿ ಬಾತ್ರಾ ಹೇಳಿದ್ದಾರೆ.<br /> <br /> ವಿಯೆನ್ನಾ ಒಪ್ಪಂದದನ್ವಯ ವಿದೇಶಿ ರಾಜತಾಂತ್ರಿಕರಿಗೆ ರಾಜತಾಂತ್ರಿಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮಾತ್ರ ಅಮೆರಿಕದ ನ್ಯಾಯಾಂಗ ಪ್ರಕ್ರಿಯೆಯಿಂದ ವಿನಾಯಿತಿ ಇರುತ್ತದೆ. ವೀಸಾ ನಿಯಮ ಉಲ್ಲಂಘಿಸಿದಲ್ಲಿ ಕಾನೂನಿನ ರಕ್ಷಣೆ ನೀಡಲಾಗದು ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.<br /> <br /> <strong>ಅಧಿಕಾರಿಗಳ ಜತೆ ಚರ್ಚೆ: </strong>ದೇವಯಾನಿ ಪ್ರಕರಣದ ಕುರಿತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರಿ, ರಾಷ್ಟ್ರೀಯ ಭದ್ರತಾ ಉಪಸಲಹೆಗಾರ ಟೋನಿ ಬ್ಲಿಂಕೆನ್ ಸೇರಿದಂತೆ ಪ್ರಮುಖರ ಜತೆ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಮಾತನಾಡಿದ್ದಾರೆ.<br /> <br /> ಅಲ್ಲದೇ ಅಮೆರಿಕದ ವಿದೇಶಾಂಗ ಇಲಾಖೆಯಲ್ಲಿ ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳ ಸಹಾಯಕ ಕಾರ್ಯದರ್ಶಿಯಾಗಿರುವ ನಿಶಾ ದೇಸಾಯಿ ಬಿಸ್ವಾಲ್ ಅವರು ವಿದೇಶಾಂಗ ಇಲಾಖೆ ಮತ್ತು ಭಾರತದ ರಾಜತಾಂತ್ರಿಕರ ಜತೆ ಚರ್ಚೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್(ಪಿಟಿಐ): </strong>ಮನೆಕೆಲಸದವಳ ವೀಸಾ ಅರ್ಜಿಯಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪಕ್ಕಾಗಿ <span style="font-size: 26px;">ನ್ಯೂಯಾರ್ಕ್ನಲ್ಲಿನ ಭಾರತದ ಉಪ ಕಾನ್ಸಲ್ ಜನರಲ್ ದೇವಯಾನಿ ಖೋಬ್ರಾಗಡೆ ಅವರನ್ನು ಅಮೆರಿಕ ಅಧಿಕಾರಿಗಳು ಬಂಧಿಸಿ ಕೋಳ ತೊಡಿಸಿದ ಪ್ರಕರಣದಿಂದ ಉಂಟಾಗಿರುವ ರಾಜತಾಂತ್ರಿಕ ಬಿಕ್ಕಟ್ಟು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯಕ್ಕೆ ಧಕ್ಕೆಯಾಗಲಾರದು ಎಂಬ ವಿಶ್ವಾಸವನ್ನು ಅಮೆರಿಕ ವ್ಯಕ್ತಪಡಿಸಿದೆ.</span></p>.<p>‘ಭಾರತದೊಂದಿಗೆ ನಾವು ಹಲವು ವರ್ಷಗಳಿಂದ ಸಹಭಾಗಿತ್ವ ಹೊಂದಿದ್ದೇವೆ. ಇದು ಭವಿಷ್ಯದಲ್ಲೂ ಮುಂದುವರಿಯಲಿದೆ’ ಎಂದು ಅಮೆರಿಕದ ವಿದೇಶಾಂಗ ವಕ್ತಾರರು ತಿಳಿಸಿದ್ದಾರೆ.<br /> <br /> ದೇವಯಾನಿ ಬಂಧನ ಪ್ರಕರಣ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ಕೆಲವು ವಿಷಯಗಳ ಬಗ್ಗೆ ವಿವರ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.<br /> <br /> ಭಾರತದ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅವರು ಅಮೆರಿಕ ಪ್ರವಾಸದಿಂದ ವಾಪಸಾದ ಮಾರನೇ ದಿನವೇ ದೇವಯಾನಿ ಅವರ ಬಂಧನ ನಡೆದಿರುವುದು ಭಾರತ ಹಾಗೂ ಅಮೆರಿಕ ನಡುವಿನ ರಾಜತಾಂತ್ರಿಕ ಸಂಬಂಧದ ಮೇಲೆ ಪರಿಣಾಮ ಬೀರಿದೆ.<br /> <br /> ‘ಭಾರತದ ರಾಜತಾಂತ್ರಿಕ ಅಧಿಕಾರಿಗೆ ಕೈಕೋಳ ತೊಡಿಸಿ ಅವಮಾನ ಮಾಡಿರುವುದನ್ನು ಒಪ್ಪಿಕೊಳ್ಳಲಾಗದು’ ಎಂದು ವಾಷಿಂಗ್ಟನ್ನ ಭಾರತೀಯ ರಾಯಭಾರ ಕಚೇರಿಯ ಹಿರಿಯ ರಾಜತಾಂತ್ರಿಕ ತರಣ್ಜಿತ್ ಸಿಂಗ್ ಸಂಧು ಅಮೆರಿಕದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಹೇಳಿದ್ದಾರೆ.<br /> <br /> ಇದೇ ವೇಳೆ ದೇವಯಾನಿ ಅವರ ಬಂಧನ ಪ್ರಕರಣವನ್ನು ಆದಷ್ಟು ಶೀಘ್ರ ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.<br /> ‘ದೇವಯಾನಿ ರಾಜತಾಂತ್ರಿಕ ಅಧಿಕಾರಿ. ತಮ್ಮ ಕರ್ತವ್ಯ ನಿರ್ವಹಣೆಗಾಗಿ ಅವರು ಅಮೆರಿಕದಲ್ಲಿದ್ದರು. ಆದ್ದರಿಂದ ಅವರಿಗೆ ವಿನಾಯಿತಿ ನೀಡಬೇಕಿತ್ತು’ ಎಂದು ರಾಯಭಾರ ಕಚೇರಿ ಹೇಳಿಕೆ ತಿಳಿಸಿದೆ.<br /> <br /> ‘ದೇವಯಾನಿ ಅವರು ಇಬ್ಬರು ಮಕ್ಕಳ ತಾಯಿ. ಅವರ ಬಂಧನ ಪ್ರಕರಣದಿಂದ ಭಾರತ ಸರ್ಕಾರ ಆಘಾತಕ್ಕೊಳಗಾಗಿದೆ ಹಾಗೂ ಅಮೆರಿಕದ ಅಧಿಕಾರಿಗಳ ಕ್ರಮದಿಂದ ಗಾಬರಿಗೊಂಡಿದೆ’ ಎಂದೂ ಹೇಳಲಾಗಿದೆ.<br /> <br /> ದೇವಯಾನಿ ರಾಜತಾಂತ್ರಿಕ ವಿನಾಯಿತಿಗೆ ಅರ್ಹತೆ ಹೊಂದಿದ್ದರು ಎಂದು ಅವರ ವಕೀಲ ಪ್ರೀತ್ ಭರಾರ್ ಹೇಳಿದ್ದಾರೆ.<br /> ರಾಜತಾಂತ್ರಿಕರಿಗೆ ವಿಯೆನ್ನಾ ಒಪ್ಪಂದದಂತೆ ವಿನಾಯಿತಿ ನೀಡಬೇಕು ಎಂದು ಭಾರತ ಮೂಲದ ಅಮೆರಿಕ ವಕೀಲ ರವಿ ಬಾತ್ರಾ ಹೇಳಿದ್ದಾರೆ.<br /> <br /> ವಿಯೆನ್ನಾ ಒಪ್ಪಂದದನ್ವಯ ವಿದೇಶಿ ರಾಜತಾಂತ್ರಿಕರಿಗೆ ರಾಜತಾಂತ್ರಿಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮಾತ್ರ ಅಮೆರಿಕದ ನ್ಯಾಯಾಂಗ ಪ್ರಕ್ರಿಯೆಯಿಂದ ವಿನಾಯಿತಿ ಇರುತ್ತದೆ. ವೀಸಾ ನಿಯಮ ಉಲ್ಲಂಘಿಸಿದಲ್ಲಿ ಕಾನೂನಿನ ರಕ್ಷಣೆ ನೀಡಲಾಗದು ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.<br /> <br /> <strong>ಅಧಿಕಾರಿಗಳ ಜತೆ ಚರ್ಚೆ: </strong>ದೇವಯಾನಿ ಪ್ರಕರಣದ ಕುರಿತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರಿ, ರಾಷ್ಟ್ರೀಯ ಭದ್ರತಾ ಉಪಸಲಹೆಗಾರ ಟೋನಿ ಬ್ಲಿಂಕೆನ್ ಸೇರಿದಂತೆ ಪ್ರಮುಖರ ಜತೆ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಮಾತನಾಡಿದ್ದಾರೆ.<br /> <br /> ಅಲ್ಲದೇ ಅಮೆರಿಕದ ವಿದೇಶಾಂಗ ಇಲಾಖೆಯಲ್ಲಿ ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳ ಸಹಾಯಕ ಕಾರ್ಯದರ್ಶಿಯಾಗಿರುವ ನಿಶಾ ದೇಸಾಯಿ ಬಿಸ್ವಾಲ್ ಅವರು ವಿದೇಶಾಂಗ ಇಲಾಖೆ ಮತ್ತು ಭಾರತದ ರಾಜತಾಂತ್ರಿಕರ ಜತೆ ಚರ್ಚೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>