<p>ಮಂಡ್ಯ: ನಿಗದಿತ ಅವಧಿಗೆ ವೇತನ ಪಾವತಿಸಬೇಕು ಮತ್ತು ಮೂರು ತಿಂಗಳಿಂದ ಬಾಕಿ ಉಳಿಸಿರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಲು ಆಗ್ರಹಿಸಿ ಟಾಸ್ಕ್ಪೋರ್ಸ್ ನೌಕರರು ಸೋಮವಾರ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.<br /> <br /> ಕಾವೇರಿ ನೀರಾವರಿ ನಿಗಮದ ನಗರ ಕಚೇರಿಯ ಎದುರು ಗುಂಪುಗೂಡಿದ ನೂರಾರು ನೌಕರರು, ವೇತನ ನೀಡುವಲ್ಲಿ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಕಾಲುವೆಗಳಿಗೆ ನೀರು ಹರಿಸುವುದು ಮತ್ತು ನೀರು ಕಟ್ಟುವ ಸೇವೆಯಲ್ಲಿ ತೊಡಗಿರುವ ಸಿಬ್ಬಂದಿ ಕಾವೇರಿ ನೀರಾವರಿ ನಿಗಮದ ಅಡಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಸಿಬ್ಬಂದಿಗೆ ಮೂರು ತಿಂಗಳಿನಿಂದ ವೇತನವನ್ನೇ ಪಾವತಿಸಿಲ್ಲ ಎಂದು ದೂರಿದರು.<br /> <br /> ಸಂಘದ ಮುಖಂಡರಾದ ಶ್ರೀಕಾಂತ, ಗಿರೀಗೌಡ ಅವರು ಮಾತನಾಡಿ, ನೀರುಗಂಟಿಗಳು, ಟಾಸ್ಕ್ಫೋರ್ಸ್ ನೌಕರರ ಕುಟುಂಬಗಳಿಗೆ ವೇತನವಿಲ್ಲದ ಸಮಸ್ಯೆಯಾಗಿದೆ. ಅಧಿಕಾರಿಗಳು ಇನ್ನಾದರೂ ವಿಳಂಬವನ್ನು ಗಮನಿಸಿ, ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.<br /> <br /> ಬಳಿಕ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಿಗಮದ ಅಧಿಕಾರಿಯೊಬ್ಬರು ಏಪ್ರಿಲ್ನ ಮೊದಲ ಪಾಕ್ಷಿಕದಲ್ಲಿ ವೇತನ ವಿಳಂಬ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಆ ಬಳಿಕ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.<br /> <br /> ಪ್ರತಿಭಟನೆಯಲ್ಲಿ ಕೆಂಪೇಗೌಡ, ಬೋರೇಗೌಡ, ವೈರಮುಡಿ ಮತ್ತಿತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ನಿಗದಿತ ಅವಧಿಗೆ ವೇತನ ಪಾವತಿಸಬೇಕು ಮತ್ತು ಮೂರು ತಿಂಗಳಿಂದ ಬಾಕಿ ಉಳಿಸಿರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಲು ಆಗ್ರಹಿಸಿ ಟಾಸ್ಕ್ಪೋರ್ಸ್ ನೌಕರರು ಸೋಮವಾರ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.<br /> <br /> ಕಾವೇರಿ ನೀರಾವರಿ ನಿಗಮದ ನಗರ ಕಚೇರಿಯ ಎದುರು ಗುಂಪುಗೂಡಿದ ನೂರಾರು ನೌಕರರು, ವೇತನ ನೀಡುವಲ್ಲಿ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಕಾಲುವೆಗಳಿಗೆ ನೀರು ಹರಿಸುವುದು ಮತ್ತು ನೀರು ಕಟ್ಟುವ ಸೇವೆಯಲ್ಲಿ ತೊಡಗಿರುವ ಸಿಬ್ಬಂದಿ ಕಾವೇರಿ ನೀರಾವರಿ ನಿಗಮದ ಅಡಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಸಿಬ್ಬಂದಿಗೆ ಮೂರು ತಿಂಗಳಿನಿಂದ ವೇತನವನ್ನೇ ಪಾವತಿಸಿಲ್ಲ ಎಂದು ದೂರಿದರು.<br /> <br /> ಸಂಘದ ಮುಖಂಡರಾದ ಶ್ರೀಕಾಂತ, ಗಿರೀಗೌಡ ಅವರು ಮಾತನಾಡಿ, ನೀರುಗಂಟಿಗಳು, ಟಾಸ್ಕ್ಫೋರ್ಸ್ ನೌಕರರ ಕುಟುಂಬಗಳಿಗೆ ವೇತನವಿಲ್ಲದ ಸಮಸ್ಯೆಯಾಗಿದೆ. ಅಧಿಕಾರಿಗಳು ಇನ್ನಾದರೂ ವಿಳಂಬವನ್ನು ಗಮನಿಸಿ, ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.<br /> <br /> ಬಳಿಕ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಿಗಮದ ಅಧಿಕಾರಿಯೊಬ್ಬರು ಏಪ್ರಿಲ್ನ ಮೊದಲ ಪಾಕ್ಷಿಕದಲ್ಲಿ ವೇತನ ವಿಳಂಬ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಆ ಬಳಿಕ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.<br /> <br /> ಪ್ರತಿಭಟನೆಯಲ್ಲಿ ಕೆಂಪೇಗೌಡ, ಬೋರೇಗೌಡ, ವೈರಮುಡಿ ಮತ್ತಿತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>