<p>ಬೆಂಗಳೂರು: ಮತ ಗಳಿಕೆಗಾಗಿ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ಏರ್ಪಡಿಸಿದ್ದ ಬಾಡೂಟ ಕುರಿತಂತೆ ಎರಡು ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾದ ದೃಶ್ಯಗಳು ತೀವ್ರ ಅಸಹ್ಯ ಮೂಡಿಸುವಂತದ್ದಾಗಿದೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿಉಪಾಧ್ಯಕ್ಷ ಪ್ರೊ. ಬಿ.ಕೆ.ಚಂದ್ರಶೇಖರ್ ಖೇದ ವ್ಯಕ್ತಪಡಿಸಿದ್ದಾರೆ.<br /> <br /> `ಇದು ಪಕ್ಷಕ್ಕೆ ಸೀಮಿತವಲ್ಲ. ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರು ಮತ್ತಿತರ ಪ್ರದೇಶಗಳ ಶಿಕ್ಷಕ- ಪದವೀಧರ ಕ್ಷೇತ್ರಗಳಲ್ಲಿ ಶಿಕ್ಷಕ ಮತದಾರರಿಗೆ ಮದ್ಯಪಾನ, ಬಾಡೂಟ, ಕೈ ಗಡಿಯಾರ ಮತ್ತಿತರ ವಸ್ತುಗಳ ಆಮಿಷ ಆಳವಾಗಿ ಕೆಲಸ ಮಾಡುತ್ತಿದೆ. ನಾಚಿಕೆಯಿಲ್ಲದ ಇಂಥ ಶಿಕ್ಷಕರನ್ನು ಉಳಿಸಿಕೊಳ್ಳಬೇಕೆ?~ ಎಂದು ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ. ಹೊರಬೇಕಲ್ಲವೇ?~ ಎಂದು ಅವರು ಮಾರ್ಮಿಕವಾಗಿ ಕೇಳಿದ್ದಾರೆ.<br /> <br /> ಬ್ರಿಟಿಷರು ಅಸ್ತಿತ್ವಕ್ಕೆ ತಂದಿದ್ದ ಶಿಕ್ಷಕರ, ಪದವೀಧರರ ಕ್ಷೇತ್ರಗಳು ಇಂದಿನ ಪ್ರಜಾತಂತ್ರ ವ್ಯವಸ್ಥೆಗೆ ಬಹುತೇಕ ಅಪ್ರಸ್ತುತ. ಸಂವಿಧಾನದ ತಿದ್ದುಪಡಿ ಮೂಲಕ ಇವನ್ನು ತೆಗೆಯುವುದೇ ಸೂಕ್ತ~ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮತ ಗಳಿಕೆಗಾಗಿ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ಏರ್ಪಡಿಸಿದ್ದ ಬಾಡೂಟ ಕುರಿತಂತೆ ಎರಡು ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾದ ದೃಶ್ಯಗಳು ತೀವ್ರ ಅಸಹ್ಯ ಮೂಡಿಸುವಂತದ್ದಾಗಿದೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿಉಪಾಧ್ಯಕ್ಷ ಪ್ರೊ. ಬಿ.ಕೆ.ಚಂದ್ರಶೇಖರ್ ಖೇದ ವ್ಯಕ್ತಪಡಿಸಿದ್ದಾರೆ.<br /> <br /> `ಇದು ಪಕ್ಷಕ್ಕೆ ಸೀಮಿತವಲ್ಲ. ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರು ಮತ್ತಿತರ ಪ್ರದೇಶಗಳ ಶಿಕ್ಷಕ- ಪದವೀಧರ ಕ್ಷೇತ್ರಗಳಲ್ಲಿ ಶಿಕ್ಷಕ ಮತದಾರರಿಗೆ ಮದ್ಯಪಾನ, ಬಾಡೂಟ, ಕೈ ಗಡಿಯಾರ ಮತ್ತಿತರ ವಸ್ತುಗಳ ಆಮಿಷ ಆಳವಾಗಿ ಕೆಲಸ ಮಾಡುತ್ತಿದೆ. ನಾಚಿಕೆಯಿಲ್ಲದ ಇಂಥ ಶಿಕ್ಷಕರನ್ನು ಉಳಿಸಿಕೊಳ್ಳಬೇಕೆ?~ ಎಂದು ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ. ಹೊರಬೇಕಲ್ಲವೇ?~ ಎಂದು ಅವರು ಮಾರ್ಮಿಕವಾಗಿ ಕೇಳಿದ್ದಾರೆ.<br /> <br /> ಬ್ರಿಟಿಷರು ಅಸ್ತಿತ್ವಕ್ಕೆ ತಂದಿದ್ದ ಶಿಕ್ಷಕರ, ಪದವೀಧರರ ಕ್ಷೇತ್ರಗಳು ಇಂದಿನ ಪ್ರಜಾತಂತ್ರ ವ್ಯವಸ್ಥೆಗೆ ಬಹುತೇಕ ಅಪ್ರಸ್ತುತ. ಸಂವಿಧಾನದ ತಿದ್ದುಪಡಿ ಮೂಲಕ ಇವನ್ನು ತೆಗೆಯುವುದೇ ಸೂಕ್ತ~ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>