<p>ರಾಮನಗರ: ಬಿಡದಿ ಹೋಬಳಿಯ ಬಾನಂದೂರು ಗ್ರಾಮದಲ್ಲಿ ಅಂದಾಜು ರೂ 1.25 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.<br /> <br /> ಸುವರ್ಣ ಗ್ರಾಮ ಯೋಜನೆಯಡಿ ಗ್ರಾಮದಲ್ಲಿ ಸಿಮೆಂಟ್ ರಸ್ತೆ, ಚರಂಡಿ, ಎಸ್.ಸಿ ಕಾಲೊನಿಯಲ್ಲಿ ಸಿಮೆಂಟ್ ಮತ್ತು ಚರಂಡಿ ನಿರ್ಮಾಣ, ಓವರ್ ಹೆಡ್ ಟ್ಯಾಂಕ್, ಅಂಗನವಾಡಿ ಕಟ್ಟಡ ನಿರ್ಮಾಣದ ಕಾಮಗಾರಿಗೆ ಗುದ್ದಲಿಪೂಜೆ ಮಾಡಿದರು.<br /> <br /> ಆದಿ ಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ ಅವರ ಹುಟ್ಟೂರಾದ ಬಾನಂದೂರು ಅಭಿವೃದ್ಧಿಗೆ ಅಗತ್ಯ ಒತ್ತು ನೀಡಲಾಗುವುದು ಎಂದರು.<br /> <br /> `ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಬಾನಂದೂರು, ಲಕ್ಕಪ್ಪನಹಳ್ಳಿ (ಕೆಂಗಲ್ ಹನುಮಂತಯ್ಯ ಹುಟ್ಟೂರು), ವೀರಾಪುರ (ಡಾ. ಸಿದ್ದಗಂಗಾ ಸ್ವಾಮೀಜಿ ಹುಟ್ಟೂರು) ಗ್ರಾಮ ಅಭಿವೃದ್ಧಿಗೆ ವಿಶೇಷ ಒತ್ತು ನೀಡುವುದಾಗಿ ಹೇಳಿದ್ದಾರೆ.<br /> <br /> 15 ದಿನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಈ ಗ್ರಾಮಕ್ಕೆ ಕರೆತರಲಾಗುವುದು.ಆ ಸಂದರ್ಭದಲ್ಲಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಆಗಬೇಕಿರುವ ಕಾಮಗಾರಿಗಳ ವಿವರ ನೀಡಿದರೆ, ಸಚಿವರು ಸರ್ಕಾರದಿಂದ ವಿಶೇಷ ಅನುದಾನ ತಂದು ಕೆಲಸ ಮಾಡಿಸಿಕೊಡುವರು~ ಎಂದರು.<br /> <br /> ಬರ ನಿರ್ವಹಣೆಗೆ ಪ್ರಾಶಸ್ತ್ಯ: ಜಿಲ್ಲೆಯಲ್ಲಿ ಹಿಂದೆಂದೂ ಕಂಡರಿಯದ ಬರಗಾಲ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿಯ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಎಲ್.ಚಂದ್ರು ಮಾತನಾಡಿ, ಶಾಸಕ ಬಾಲಕೃಷ್ಣ ಮತ್ತು ಸಂಸದ ಎಚ್.ಡಿ. ಕುಮಾರಸ್ವಾಮಿ ಅವರ ಪ್ರಯತ್ನದಿಂದ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು.<br /> <br /> ಜಿ.ಪಂ ಸದಸ್ಯೆ ಶಾಂತಮ್ಮ ವೆಂಕಟೇಶ್, ತಾ.ಪಂ ಅಧ್ಯಕ್ಷೆ ಬಿ.ಎನ್.ಭಾನುಮತಿ ಚಿಕ್ಕಬೋರೇಗೌಡ, ಸದಸ್ಯ ಮಹಿಪತಿ, ಬಿಡದಿ ಗ್ರಾ.ಪಂ ಅಧ್ಯಕ್ಷ ಬಿ.ಸಿ.ಶಿವಕುಮಾರ್, ಮುಖಂಡ ಬಿ.ಎಂ.ಕುಮಾರ್ ಮಾತನಾಡಿದರು. ಜಿ.ಪಂ ಮಾಜಿ ಸದಸ್ಯರಾದ ಜಿ.ರಾಮಯ್ಯ, ಪುಟ್ಟಣ್ಣ, ಮುಖಂಡ ಬ್ಯಾಟಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಬಿಡದಿ ಹೋಬಳಿಯ ಬಾನಂದೂರು ಗ್ರಾಮದಲ್ಲಿ ಅಂದಾಜು ರೂ 1.25 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.<br /> <br /> ಸುವರ್ಣ ಗ್ರಾಮ ಯೋಜನೆಯಡಿ ಗ್ರಾಮದಲ್ಲಿ ಸಿಮೆಂಟ್ ರಸ್ತೆ, ಚರಂಡಿ, ಎಸ್.ಸಿ ಕಾಲೊನಿಯಲ್ಲಿ ಸಿಮೆಂಟ್ ಮತ್ತು ಚರಂಡಿ ನಿರ್ಮಾಣ, ಓವರ್ ಹೆಡ್ ಟ್ಯಾಂಕ್, ಅಂಗನವಾಡಿ ಕಟ್ಟಡ ನಿರ್ಮಾಣದ ಕಾಮಗಾರಿಗೆ ಗುದ್ದಲಿಪೂಜೆ ಮಾಡಿದರು.<br /> <br /> ಆದಿ ಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ ಅವರ ಹುಟ್ಟೂರಾದ ಬಾನಂದೂರು ಅಭಿವೃದ್ಧಿಗೆ ಅಗತ್ಯ ಒತ್ತು ನೀಡಲಾಗುವುದು ಎಂದರು.<br /> <br /> `ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಬಾನಂದೂರು, ಲಕ್ಕಪ್ಪನಹಳ್ಳಿ (ಕೆಂಗಲ್ ಹನುಮಂತಯ್ಯ ಹುಟ್ಟೂರು), ವೀರಾಪುರ (ಡಾ. ಸಿದ್ದಗಂಗಾ ಸ್ವಾಮೀಜಿ ಹುಟ್ಟೂರು) ಗ್ರಾಮ ಅಭಿವೃದ್ಧಿಗೆ ವಿಶೇಷ ಒತ್ತು ನೀಡುವುದಾಗಿ ಹೇಳಿದ್ದಾರೆ.<br /> <br /> 15 ದಿನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಈ ಗ್ರಾಮಕ್ಕೆ ಕರೆತರಲಾಗುವುದು.ಆ ಸಂದರ್ಭದಲ್ಲಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಆಗಬೇಕಿರುವ ಕಾಮಗಾರಿಗಳ ವಿವರ ನೀಡಿದರೆ, ಸಚಿವರು ಸರ್ಕಾರದಿಂದ ವಿಶೇಷ ಅನುದಾನ ತಂದು ಕೆಲಸ ಮಾಡಿಸಿಕೊಡುವರು~ ಎಂದರು.<br /> <br /> ಬರ ನಿರ್ವಹಣೆಗೆ ಪ್ರಾಶಸ್ತ್ಯ: ಜಿಲ್ಲೆಯಲ್ಲಿ ಹಿಂದೆಂದೂ ಕಂಡರಿಯದ ಬರಗಾಲ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿಯ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಎಲ್.ಚಂದ್ರು ಮಾತನಾಡಿ, ಶಾಸಕ ಬಾಲಕೃಷ್ಣ ಮತ್ತು ಸಂಸದ ಎಚ್.ಡಿ. ಕುಮಾರಸ್ವಾಮಿ ಅವರ ಪ್ರಯತ್ನದಿಂದ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು.<br /> <br /> ಜಿ.ಪಂ ಸದಸ್ಯೆ ಶಾಂತಮ್ಮ ವೆಂಕಟೇಶ್, ತಾ.ಪಂ ಅಧ್ಯಕ್ಷೆ ಬಿ.ಎನ್.ಭಾನುಮತಿ ಚಿಕ್ಕಬೋರೇಗೌಡ, ಸದಸ್ಯ ಮಹಿಪತಿ, ಬಿಡದಿ ಗ್ರಾ.ಪಂ ಅಧ್ಯಕ್ಷ ಬಿ.ಸಿ.ಶಿವಕುಮಾರ್, ಮುಖಂಡ ಬಿ.ಎಂ.ಕುಮಾರ್ ಮಾತನಾಡಿದರು. ಜಿ.ಪಂ ಮಾಜಿ ಸದಸ್ಯರಾದ ಜಿ.ರಾಮಯ್ಯ, ಪುಟ್ಟಣ್ಣ, ಮುಖಂಡ ಬ್ಯಾಟಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>