<p>ನವದೆಹಲಿ (ಪಿಟಿಐ): ಬಾಬಾ ರಾಮ್ದೇವ್ ಮೇಲೆ ವ್ಯಕ್ತಿಯೊಬ್ಬ ಪತ್ರಿಕಾಗೋಷ್ಠಿಯಲ್ಲಿ ಕಪ್ಪು ಶಾಯಿ ಎರಚಿದ ಘಟನೆ ಶನಿವಾರ ನಡೆದಿದೆ.<br /> <br /> ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕಪ್ಪುಹಣದ ವಿರುದ್ಧ ತಾವು ರೂಪಿಸಿರುವ ಹೋರಾಟದ ಬಗ್ಗೆ ಮಾಹಿತಿ ನೀಡಲು ರಾಮ್ದೇವ್ `ಕಾನ್ಸ್ಟಿಟ್ಯೂಷನ್ ಕ್ಲಬ್~ನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಜನತಾ ಪಕ್ಷದ ಮುಖಂಡ ಸುಬ್ರಮಣಿಯನ್ಸ್ವಾಮಿ ಅವರೂ ಗೋಷ್ಠಿಯಲ್ಲಿದ್ದರು.<br /> <br /> ಶಾಯಿ ಎರಚಿ ದಾಳಿ ನಡೆಸಿದವನನ್ನು ದೆಹಲಿ ನಿವಾಸಿ ಕಮ್ರಾನ್ ಸಿದ್ದಿಕಿ ಎಂದು ಗುರುತಿಸಲಾಗಿದೆ. ಈತ `ರಿಯಲ್ ಕಾಸ್~ ಎಂಬ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆ ನಡೆಸುತ್ತಿದ್ದು, ಬಾತ್ಲಾ ಹೌಸ್ ಎನ್ಕೌಂಟರ್ ಪ್ರಕರಣದ ಬಗ್ಗೆ ದೂರು ನೀಡಿದ್ದವರಲ್ಲಿ ಈ ಸಂಸ್ಥೆಯೂ ಒಂದಾಗಿದೆ.<br /> <br /> ರಾಮ್ದೇವ್ ಅವರ ಬಲಗಣ್ಣಿನ ಮೇಲೆ ಶಾಯಿ ಎರಚಿದ ಈತನನ್ನು ರಾಮ್ದೇವ್ ಬೆಂಬಲಿಗರು ಹಿಡಿದುಕೊಂಡು ಹಿಗ್ಗಾಮಗ್ಗಾ ಥಳಿಸಿದರು. ಇದರಿಂದಾಗಿ ಆತನ ಅಂಗಿ ಹರಿದು ಛಿದ್ರವಾಗಿ, ತುಟಿಯಿಂದ ರಕ್ತ ಸೋರಲು ಆರಂಭವಾಯಿತು. ಅಷ್ಟರಲ್ಲಿ ಪೊಲೀಸರು ಆರೋಪಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡರು.<br /> <br /> ಆರೋಪಿ ವಾಕಿಟಾಕಿ ಹಿಡಿದು ಭದ್ರತಾ ಸಿಬ್ಬಂದಿಯಂತೆ ನಟಿಸುತ್ತ ಪತ್ರಿಕಾಗೋಷ್ಠಿ ನಡೆಯುತ್ತಿದ್ದ ಕ್ಲಬ್ಗೆ ಬಂದಿದ್ದ. ಆತನ ಬಳಿ ಆಸಿಡ್ ಸೀಸೆ ಕೂಡ ಇತ್ತು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಮ್ದೇವ್ ಆಪ್ತ ಜೈದೀಪ್ ಹೇಳಿದ್ದಾರೆ. ಈ ಘಟನೆನಂತರ ರಾಮ್ದೇವ್ ಕೂಡಲೇ ಪತ್ರಿಕಾಗೋಷ್ಠಿ ಬರ್ಖಾಸ್ತುಗೊಳಿಸಿದರು. ಅವರನ್ನು ಪೊಲೀಸರ ಬೆಂಗಾವಲಿನಲ್ಲಿ ಕ್ಲಬ್ನಿಂದ ಕರೆದುಕೊಂಡು ಹೋಗುವಾಗ ನೂಕುನುಗ್ಗುಲು ಉಂಟಾಯಿತು.<br /> <br /> ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಮ್ದೇವ್, `ಇಂತಹ ಘಟನೆಗಳಿಂದ ವಿಚಲಿತಗೊಳ್ಳುವುದಿಲ್ಲ; ಭ್ರಷ್ಟಾಚಾರದ ವಿರುದ್ಧ ಹೋರಾಟ ನಿಲ್ಲದು~ ಎಂದರು.<br /> <br /> ಶಾಯಿ ಎರಚುವುದಕ್ಕೂ ಮುನ್ನ ಸಿದ್ದಿಕಿ 2008ರ ನಡೆದ ಬಾತ್ಲಾ ಹೌಸ್ ಎನ್ಕೌಂಟರ್ ಬಗ್ಗೆ ರಾಮ್ದೇವ್ ಅವರನ್ನು ಪ್ರಶ್ನಿಸಿದ. ಇದನ್ನು ರಾಮ್ದೇವ್ ನಿರ್ಲಕ್ಷಿಸಿದರು. ಮರು ಕ್ಷಣವೇ ಆತ ಅವರ ಮೇಲೆ ಶಾಯಿ ಎರಚಿದ. <br /> <br /> ದೆಹಲಿಯಲ್ಲಿ ನಡೆದ ಸರಣಿ ಬಾಂಬ್ ದಾಳಿ ಸಂಚುಕೋರರು ಬಾತ್ಲಾ ಹೌಸ್ನಲ್ಲಿ ಅಡಗಿರಬಹುದು ಎಂಬ ಮಾಹಿತಿ ಮೇಲೆ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಅಲ್ಲಿದ್ದವರೆಲ್ಲಾ ಹತ್ಯೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಬಾಬಾ ರಾಮ್ದೇವ್ ಮೇಲೆ ವ್ಯಕ್ತಿಯೊಬ್ಬ ಪತ್ರಿಕಾಗೋಷ್ಠಿಯಲ್ಲಿ ಕಪ್ಪು ಶಾಯಿ ಎರಚಿದ ಘಟನೆ ಶನಿವಾರ ನಡೆದಿದೆ.<br /> <br /> ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕಪ್ಪುಹಣದ ವಿರುದ್ಧ ತಾವು ರೂಪಿಸಿರುವ ಹೋರಾಟದ ಬಗ್ಗೆ ಮಾಹಿತಿ ನೀಡಲು ರಾಮ್ದೇವ್ `ಕಾನ್ಸ್ಟಿಟ್ಯೂಷನ್ ಕ್ಲಬ್~ನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಜನತಾ ಪಕ್ಷದ ಮುಖಂಡ ಸುಬ್ರಮಣಿಯನ್ಸ್ವಾಮಿ ಅವರೂ ಗೋಷ್ಠಿಯಲ್ಲಿದ್ದರು.<br /> <br /> ಶಾಯಿ ಎರಚಿ ದಾಳಿ ನಡೆಸಿದವನನ್ನು ದೆಹಲಿ ನಿವಾಸಿ ಕಮ್ರಾನ್ ಸಿದ್ದಿಕಿ ಎಂದು ಗುರುತಿಸಲಾಗಿದೆ. ಈತ `ರಿಯಲ್ ಕಾಸ್~ ಎಂಬ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆ ನಡೆಸುತ್ತಿದ್ದು, ಬಾತ್ಲಾ ಹೌಸ್ ಎನ್ಕೌಂಟರ್ ಪ್ರಕರಣದ ಬಗ್ಗೆ ದೂರು ನೀಡಿದ್ದವರಲ್ಲಿ ಈ ಸಂಸ್ಥೆಯೂ ಒಂದಾಗಿದೆ.<br /> <br /> ರಾಮ್ದೇವ್ ಅವರ ಬಲಗಣ್ಣಿನ ಮೇಲೆ ಶಾಯಿ ಎರಚಿದ ಈತನನ್ನು ರಾಮ್ದೇವ್ ಬೆಂಬಲಿಗರು ಹಿಡಿದುಕೊಂಡು ಹಿಗ್ಗಾಮಗ್ಗಾ ಥಳಿಸಿದರು. ಇದರಿಂದಾಗಿ ಆತನ ಅಂಗಿ ಹರಿದು ಛಿದ್ರವಾಗಿ, ತುಟಿಯಿಂದ ರಕ್ತ ಸೋರಲು ಆರಂಭವಾಯಿತು. ಅಷ್ಟರಲ್ಲಿ ಪೊಲೀಸರು ಆರೋಪಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡರು.<br /> <br /> ಆರೋಪಿ ವಾಕಿಟಾಕಿ ಹಿಡಿದು ಭದ್ರತಾ ಸಿಬ್ಬಂದಿಯಂತೆ ನಟಿಸುತ್ತ ಪತ್ರಿಕಾಗೋಷ್ಠಿ ನಡೆಯುತ್ತಿದ್ದ ಕ್ಲಬ್ಗೆ ಬಂದಿದ್ದ. ಆತನ ಬಳಿ ಆಸಿಡ್ ಸೀಸೆ ಕೂಡ ಇತ್ತು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಮ್ದೇವ್ ಆಪ್ತ ಜೈದೀಪ್ ಹೇಳಿದ್ದಾರೆ. ಈ ಘಟನೆನಂತರ ರಾಮ್ದೇವ್ ಕೂಡಲೇ ಪತ್ರಿಕಾಗೋಷ್ಠಿ ಬರ್ಖಾಸ್ತುಗೊಳಿಸಿದರು. ಅವರನ್ನು ಪೊಲೀಸರ ಬೆಂಗಾವಲಿನಲ್ಲಿ ಕ್ಲಬ್ನಿಂದ ಕರೆದುಕೊಂಡು ಹೋಗುವಾಗ ನೂಕುನುಗ್ಗುಲು ಉಂಟಾಯಿತು.<br /> <br /> ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಮ್ದೇವ್, `ಇಂತಹ ಘಟನೆಗಳಿಂದ ವಿಚಲಿತಗೊಳ್ಳುವುದಿಲ್ಲ; ಭ್ರಷ್ಟಾಚಾರದ ವಿರುದ್ಧ ಹೋರಾಟ ನಿಲ್ಲದು~ ಎಂದರು.<br /> <br /> ಶಾಯಿ ಎರಚುವುದಕ್ಕೂ ಮುನ್ನ ಸಿದ್ದಿಕಿ 2008ರ ನಡೆದ ಬಾತ್ಲಾ ಹೌಸ್ ಎನ್ಕೌಂಟರ್ ಬಗ್ಗೆ ರಾಮ್ದೇವ್ ಅವರನ್ನು ಪ್ರಶ್ನಿಸಿದ. ಇದನ್ನು ರಾಮ್ದೇವ್ ನಿರ್ಲಕ್ಷಿಸಿದರು. ಮರು ಕ್ಷಣವೇ ಆತ ಅವರ ಮೇಲೆ ಶಾಯಿ ಎರಚಿದ. <br /> <br /> ದೆಹಲಿಯಲ್ಲಿ ನಡೆದ ಸರಣಿ ಬಾಂಬ್ ದಾಳಿ ಸಂಚುಕೋರರು ಬಾತ್ಲಾ ಹೌಸ್ನಲ್ಲಿ ಅಡಗಿರಬಹುದು ಎಂಬ ಮಾಹಿತಿ ಮೇಲೆ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಅಲ್ಲಿದ್ದವರೆಲ್ಲಾ ಹತ್ಯೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>