<p>ಕೊಳ್ಳೇಗಾಲ: ಡಾ. ಬಾಬು ಜಗಜೀವನರಾಂ ಸಮುದಾಯ ಭವನದ ಕಾಂಪೌಂಡ್, ಅಡುಗೆ ಮನೆ ಸೇರಿದಂತೆ ವಿವಿಧ ಕಾಮಗಾರಿಗೆ ರೂ. 50 ಲಕ್ಷ ಹಣವನ್ನು ಸಮಾಜ ಕಲ್ಯಾಣ ಇಲಾಖೆ ಸಚಿವರು ಬಿಡುಗಡೆ ಮಾಡಿದ್ದಾರೆ ಎಂದು ಶಾಸಕ ಜಿ.ಎನ್. ನಂಜುಂಡಸ್ವಾಮಿ ತಿಳಿಸಿದರು.<br /> <br /> ಬಾಪುನಗರದ ಡಾ.ಬಾಬು ಜಗಜೀವನರಾಂ ಸಮುದಾಯ ಭವನದ ಕಾಂಪೌಂಡ್, ಅಡಿಗೆ ಮನೆ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನಾ ನೆರವೇರಿಸಿ ಮಾತನಾಡಿದರು. <br /> <br /> ಸಚಿವರು ಎ. ನಾರಾಯಣಸ್ವಾಮಿ ಮಾತನಾಡಿ, ಸಮುದಾಯ ಭವನ ಎಲ್ಲೆಡೆ ನಿರ್ಮಾಣಗೊಳ್ಳುತ್ತಿದೆ. ಸಮುದಾಯ ಭವನ ನಿರ್ಮಾಣಮಾಡುವಲ್ಲಿ ತೋರುವ ಆಸಕ್ತಿಯನ್ನು ಜನರು ಅದರ ಬಳಕೆಯಲ್ಲೂ ತೋರಿಸಬೇಕು ಎಂದರು.<br /> <br /> ಜಿಲ್ಲಾ ಉಸ್ತುವಾರಿ ಸಚಿವ ರೇಣುಕಾಚಾರ್ಯ, ಜಯಶೇಖರ್, ಬಾಲರಾಜ್, ಮಹದೇವ, ಶೇಖರ್, ಯಜಮಾನ ಸಿದ್ದಪ್ಪ, ಮಹದೇವು ಸಿದ್ದರಾಜು ಇತರರು ಇದ್ದರು.<br /> <br /> ಹೊದಿಕೆ ನೀಡಲು ಸೂಚನೆ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಗೆ ದಿಂಬು ಮತ್ತು ಹೊದಿಕೆಯನ್ನು ತಕ್ಷಣವೇ ನೀಡಿವ ಬಗ್ಗೆ ಕ್ರಮ ಕೈಗೊಳ್ಳು ವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎ. ನಾರಾಯಣಸ್ವಾಮಿ ಸೂಚನೆ ನೀಡಿದರು. <br /> <br /> ತಾಲ್ಲೂಕಿನ ಹನೂರು ಪಟ್ಟಣದ ಮೊರಾರ್ಜಿ ದೇಸಾಯಿ ಬಾಲಕ ಮತ್ತು ಬಾಲಕಿಯರ ವಸತಿ ಶಾಲೆಗೆ ಭಾನುವಾರ ಸಂಜೆ ಭೇಟಿ ನೀಡಿದ ಅವರು, ನಿಲಯದ ವಿದ್ಯಾರ್ಥಿಗಳ ಜತೆ ಆಹಾರ ಸೇವಿಸಿದರು. <br /> ವಿದ್ಯುತ್ ಕಡಿತಗೊಂಡರೆ ಓದಿಗೆ ತೊಂದರೆಯಾಗುತ್ತಿದೆ. ಜನರೇಟರ್ ವ್ಯವಸ್ಥೆ ಕಲ್ಪಿಸಲು ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. <br /> <br /> ಶಾಸಕ ಜಿ.ಎನ್. ನಂಜುಂಡಸ್ವಾಮಿ, ಆರ್. ನರೇಂದ್ರ, ಮಾಜಿ ಶಾಸಕಿ ಪರಿಮಳ ನಾಗಪ್ಪ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರತಿಭಾ, ಮಹದೇವಯ್ಯ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಡಾ. ಬಾಬು ಜಗಜೀವನರಾಂ ಸಮುದಾಯ ಭವನದ ಕಾಂಪೌಂಡ್, ಅಡುಗೆ ಮನೆ ಸೇರಿದಂತೆ ವಿವಿಧ ಕಾಮಗಾರಿಗೆ ರೂ. 50 ಲಕ್ಷ ಹಣವನ್ನು ಸಮಾಜ ಕಲ್ಯಾಣ ಇಲಾಖೆ ಸಚಿವರು ಬಿಡುಗಡೆ ಮಾಡಿದ್ದಾರೆ ಎಂದು ಶಾಸಕ ಜಿ.ಎನ್. ನಂಜುಂಡಸ್ವಾಮಿ ತಿಳಿಸಿದರು.<br /> <br /> ಬಾಪುನಗರದ ಡಾ.ಬಾಬು ಜಗಜೀವನರಾಂ ಸಮುದಾಯ ಭವನದ ಕಾಂಪೌಂಡ್, ಅಡಿಗೆ ಮನೆ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನಾ ನೆರವೇರಿಸಿ ಮಾತನಾಡಿದರು. <br /> <br /> ಸಚಿವರು ಎ. ನಾರಾಯಣಸ್ವಾಮಿ ಮಾತನಾಡಿ, ಸಮುದಾಯ ಭವನ ಎಲ್ಲೆಡೆ ನಿರ್ಮಾಣಗೊಳ್ಳುತ್ತಿದೆ. ಸಮುದಾಯ ಭವನ ನಿರ್ಮಾಣಮಾಡುವಲ್ಲಿ ತೋರುವ ಆಸಕ್ತಿಯನ್ನು ಜನರು ಅದರ ಬಳಕೆಯಲ್ಲೂ ತೋರಿಸಬೇಕು ಎಂದರು.<br /> <br /> ಜಿಲ್ಲಾ ಉಸ್ತುವಾರಿ ಸಚಿವ ರೇಣುಕಾಚಾರ್ಯ, ಜಯಶೇಖರ್, ಬಾಲರಾಜ್, ಮಹದೇವ, ಶೇಖರ್, ಯಜಮಾನ ಸಿದ್ದಪ್ಪ, ಮಹದೇವು ಸಿದ್ದರಾಜು ಇತರರು ಇದ್ದರು.<br /> <br /> ಹೊದಿಕೆ ನೀಡಲು ಸೂಚನೆ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಗೆ ದಿಂಬು ಮತ್ತು ಹೊದಿಕೆಯನ್ನು ತಕ್ಷಣವೇ ನೀಡಿವ ಬಗ್ಗೆ ಕ್ರಮ ಕೈಗೊಳ್ಳು ವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎ. ನಾರಾಯಣಸ್ವಾಮಿ ಸೂಚನೆ ನೀಡಿದರು. <br /> <br /> ತಾಲ್ಲೂಕಿನ ಹನೂರು ಪಟ್ಟಣದ ಮೊರಾರ್ಜಿ ದೇಸಾಯಿ ಬಾಲಕ ಮತ್ತು ಬಾಲಕಿಯರ ವಸತಿ ಶಾಲೆಗೆ ಭಾನುವಾರ ಸಂಜೆ ಭೇಟಿ ನೀಡಿದ ಅವರು, ನಿಲಯದ ವಿದ್ಯಾರ್ಥಿಗಳ ಜತೆ ಆಹಾರ ಸೇವಿಸಿದರು. <br /> ವಿದ್ಯುತ್ ಕಡಿತಗೊಂಡರೆ ಓದಿಗೆ ತೊಂದರೆಯಾಗುತ್ತಿದೆ. ಜನರೇಟರ್ ವ್ಯವಸ್ಥೆ ಕಲ್ಪಿಸಲು ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. <br /> <br /> ಶಾಸಕ ಜಿ.ಎನ್. ನಂಜುಂಡಸ್ವಾಮಿ, ಆರ್. ನರೇಂದ್ರ, ಮಾಜಿ ಶಾಸಕಿ ಪರಿಮಳ ನಾಗಪ್ಪ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರತಿಭಾ, ಮಹದೇವಯ್ಯ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>