<p>ಮುಳಬಾಗಲು: ಪರೀಕ್ಷೆ ಬರೆದು ಎರಡು ವರ್ಷವಾದರೂ ಅಂಕಪಟ್ಟಿ ಬಾರದ ಕಾರಣ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ.<br /> <br /> ಬೆಂಗಳೂರು ವಿಶ್ವವಿದ್ಯಾಲಯ 2009ರಲ್ಲಿ ನಡೆಸಿದ ಬಿ.ಕಾಂ. 3ನೇ ಸೆಮಿಸ್ಟರ್ ಪರೀಕ್ಷೆಯ ಅಂಕಪಟ್ಟಿ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಇದುವರೆಗೂ ಬಂದಿಲ್ಲ. ಪದವಿ ಮುಗಿದರೂ ಅಂಕಪಟ್ಟಿ ಇಲ್ಲದೇ ವಿದ್ಯಾರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಲಾಗದೆ ಪರಿತಪಿಸುತ್ತಿದ್ದಾರೆ.<br /> <br /> ಕಂಪ್ಯೂಟರ್ ಫಂಡಮೆಂಟಲ್ ವಿಷಯದ ಆಂತರಿಕ ಅಂಕಗಳನ್ನು ಕಾಲೇಜಿನಿಂದ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದರೂ ಅಲ್ಲಿನ ಸಿಬ್ಬಂದಿ ಕಂಪ್ಯೂಟರ್ನಲ್ಲಿ ಅಂಕ ದಾಖಲಿಸದಿರುವುದು ಅಂಕಪಟ್ಟಿ ವಿಳಂಬಕ್ಕೆ ಕಾರಣ ಎನ್ನಲಾಗಿದೆ. ಎರಡು ಸಲ ಆಂತರಿಕ ಅಂಕಗಳ ಪಟ್ಟಿಯನ್ನು ವಿ.ವಿ.ಗೆ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಈ ಸಂಬಂಧ ಕುಲ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎನ್ನಲಾಗಿದೆ. <br /> <br /> ಚಿಕ್ಕಬಳ್ಳಾಪುರದಲ್ಲಿ ಈಚೆಗೆ ನಡೆದ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರೂ, ಮೂರನೇ ಸೆಮಿಸ್ಟರ್ ಅಂಕಪಟ್ಟಿ ಇಲ್ಲವೆಂದು ಯಾರಿಗೂ ಉದ್ಯೋಗ ನೀಡಿಲ್ಲ. ಉದ್ಯೋಗ, ಉನ್ನತ ಶಿಕ್ಷಣ ಎರಡರಿಂದಲೂ ಈ ವಿದ್ಯಾರ್ಥಿಗಳು ವಂಚಿತರಾಗಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಲು: ಪರೀಕ್ಷೆ ಬರೆದು ಎರಡು ವರ್ಷವಾದರೂ ಅಂಕಪಟ್ಟಿ ಬಾರದ ಕಾರಣ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ.<br /> <br /> ಬೆಂಗಳೂರು ವಿಶ್ವವಿದ್ಯಾಲಯ 2009ರಲ್ಲಿ ನಡೆಸಿದ ಬಿ.ಕಾಂ. 3ನೇ ಸೆಮಿಸ್ಟರ್ ಪರೀಕ್ಷೆಯ ಅಂಕಪಟ್ಟಿ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಇದುವರೆಗೂ ಬಂದಿಲ್ಲ. ಪದವಿ ಮುಗಿದರೂ ಅಂಕಪಟ್ಟಿ ಇಲ್ಲದೇ ವಿದ್ಯಾರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಲಾಗದೆ ಪರಿತಪಿಸುತ್ತಿದ್ದಾರೆ.<br /> <br /> ಕಂಪ್ಯೂಟರ್ ಫಂಡಮೆಂಟಲ್ ವಿಷಯದ ಆಂತರಿಕ ಅಂಕಗಳನ್ನು ಕಾಲೇಜಿನಿಂದ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದರೂ ಅಲ್ಲಿನ ಸಿಬ್ಬಂದಿ ಕಂಪ್ಯೂಟರ್ನಲ್ಲಿ ಅಂಕ ದಾಖಲಿಸದಿರುವುದು ಅಂಕಪಟ್ಟಿ ವಿಳಂಬಕ್ಕೆ ಕಾರಣ ಎನ್ನಲಾಗಿದೆ. ಎರಡು ಸಲ ಆಂತರಿಕ ಅಂಕಗಳ ಪಟ್ಟಿಯನ್ನು ವಿ.ವಿ.ಗೆ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಈ ಸಂಬಂಧ ಕುಲ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎನ್ನಲಾಗಿದೆ. <br /> <br /> ಚಿಕ್ಕಬಳ್ಳಾಪುರದಲ್ಲಿ ಈಚೆಗೆ ನಡೆದ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರೂ, ಮೂರನೇ ಸೆಮಿಸ್ಟರ್ ಅಂಕಪಟ್ಟಿ ಇಲ್ಲವೆಂದು ಯಾರಿಗೂ ಉದ್ಯೋಗ ನೀಡಿಲ್ಲ. ಉದ್ಯೋಗ, ಉನ್ನತ ಶಿಕ್ಷಣ ಎರಡರಿಂದಲೂ ಈ ವಿದ್ಯಾರ್ಥಿಗಳು ವಂಚಿತರಾಗಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>