<p><strong>ಚಿಂಚೋಳಿ: </strong>ಮತದಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಮತದಾನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಂಡು ಕಡ್ಡಾಯ ಮತದಾನ ಮಾಡುವಂತೆ ಮನವೊಲಿಸಲು ಇಲ್ಲಿನ ಸರ್ಕಾರಿ ಕನ್ಯಾ ಪ್ರೌಢ ಶಾಲೆಯ ಬಾಲಕಿಯರು ಈಚೆಗೆ ಜಾಥಾ ನಡೆಸಿದರು.<br /> <br /> ಜಾಥಾದಲ್ಲಿ ಕ್ಷೇತ್ರ ಸಮನ್ವಯ ಕೇಂದ್ರದ ಸಮನ್ವಯಾಧಿಕಾರಿ ವೀರಣ್ಣ ಬೊಮ್ಮನಳ್ಳಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಮದ್ ರಫಿ ಶಕಾಲೆ, ದೈಹಿಕ ಶಿಕ್ಷಕ ಎಸ್.ಎ.ಮುನಾಫ್, ರೇವಣಸಿದ್ದಪ್ಪ ದಂಡಿನ್ ಇದ್ದರು.<br /> <br /> ನಂತರ ಶಾಲೆ ಆವರಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ತಹಶೀಲ್ದಾರ್ ಮೋಹನ ಜೋಷಿ ಮಾತನಾಡಿ, ‘ಮತದಾನ ಒಂದು ಪವಿತ್ರ ಕಾರ್ಯ. ಪ್ರತಿಯೊಬ್ಬರೂ ಕಡ್ಡಾಯವಾಗಿ ತಮ್ಮ ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವ ಬಲ ಪಡಿಸಲು ನೆರವಾಗಬೇಕು’ ಎಂದರು.<br /> <br /> ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳ ಮಹತ್ವ ಕುರಿತ ಪ್ರಬಂಧ ಸ್ಪರ್ಧೆ ನಡೆಯಿತು. ಅಶೋಕ, ಮಂಜುಳಾ, ಸರ್ವರ್ ಮಹಾಜಬಿನ್, ವಿಜಯಲಕ್ಷ್ಮಿ, ಸುನೀತಾ ಪಾಲ್ಗೊಂಡಿದ್ದರು. ಮುಖ್ಯಗುರು ನರಸಿಂಗರಾವ್ ಸಿಂಧೆ ಅಧ್ಯಕ್ಷತೆ ವಹಿಸಿದ್ದರು. ನಂದಕುಮಾರ ನಾಯನೂರು ಸ್ವಾಗತಿಸಿ ನಿರೂಪಿಸಿದರು. ಎಸ್.ಎ.ಮುನಾಫ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ: </strong>ಮತದಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಮತದಾನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಂಡು ಕಡ್ಡಾಯ ಮತದಾನ ಮಾಡುವಂತೆ ಮನವೊಲಿಸಲು ಇಲ್ಲಿನ ಸರ್ಕಾರಿ ಕನ್ಯಾ ಪ್ರೌಢ ಶಾಲೆಯ ಬಾಲಕಿಯರು ಈಚೆಗೆ ಜಾಥಾ ನಡೆಸಿದರು.<br /> <br /> ಜಾಥಾದಲ್ಲಿ ಕ್ಷೇತ್ರ ಸಮನ್ವಯ ಕೇಂದ್ರದ ಸಮನ್ವಯಾಧಿಕಾರಿ ವೀರಣ್ಣ ಬೊಮ್ಮನಳ್ಳಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಮದ್ ರಫಿ ಶಕಾಲೆ, ದೈಹಿಕ ಶಿಕ್ಷಕ ಎಸ್.ಎ.ಮುನಾಫ್, ರೇವಣಸಿದ್ದಪ್ಪ ದಂಡಿನ್ ಇದ್ದರು.<br /> <br /> ನಂತರ ಶಾಲೆ ಆವರಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ತಹಶೀಲ್ದಾರ್ ಮೋಹನ ಜೋಷಿ ಮಾತನಾಡಿ, ‘ಮತದಾನ ಒಂದು ಪವಿತ್ರ ಕಾರ್ಯ. ಪ್ರತಿಯೊಬ್ಬರೂ ಕಡ್ಡಾಯವಾಗಿ ತಮ್ಮ ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವ ಬಲ ಪಡಿಸಲು ನೆರವಾಗಬೇಕು’ ಎಂದರು.<br /> <br /> ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳ ಮಹತ್ವ ಕುರಿತ ಪ್ರಬಂಧ ಸ್ಪರ್ಧೆ ನಡೆಯಿತು. ಅಶೋಕ, ಮಂಜುಳಾ, ಸರ್ವರ್ ಮಹಾಜಬಿನ್, ವಿಜಯಲಕ್ಷ್ಮಿ, ಸುನೀತಾ ಪಾಲ್ಗೊಂಡಿದ್ದರು. ಮುಖ್ಯಗುರು ನರಸಿಂಗರಾವ್ ಸಿಂಧೆ ಅಧ್ಯಕ್ಷತೆ ವಹಿಸಿದ್ದರು. ನಂದಕುಮಾರ ನಾಯನೂರು ಸ್ವಾಗತಿಸಿ ನಿರೂಪಿಸಿದರು. ಎಸ್.ಎ.ಮುನಾಫ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>