<p><strong>ಚಾಮರಾಜನಗರ:</strong> ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಅಕ್ರಮ ಬಂಧನದಲ್ಲಿಟ್ಟು ಆತ್ಮಹತ್ಯೆಗೂ ಕಾರಣನಾದ ಯುವಕನಿಗೆ ಇಲ್ಲಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯವು 22 ವರ್ಷ ಸಜೆ ಹಾಗೂ 53 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. <br /> <br /> ಗುಂಡ್ಲುಪೇಟೆ ತಾಲ್ಲೂಕಿನ ನಿಟ್ರೆ ಗ್ರಾಮದ ರಾಘವೇಂದ್ರ (22) ಶಿಕ್ಷೆಗೊಳಗಾದವ. 2010ರ ಜ.21ರಂದು ತನ್ನ ಅಂಗಡಿಗೆ ದಿನಸಿ ಸಾಮಗ್ರಿ ಖರೀದಿಸಲು ಬಂದಿದ್ದ ಅದೇ ಗ್ರಾಮದ ಬಾಲಕಿ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದ. ನಂತರ ಆಕೆಯನ್ನು ಅಂಗಡಿಯಲ್ಲಿಯೇ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದ ಆರೋಪ ಆತನ ಮೇಲಿತ್ತು. <br /> ಈ ಘಟನೆಯಿಂದ ಮನನೊಂದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. <br /> <br /> ಈ ಸಂಬಂಧ ಗುಂಡ್ಲುಪೇಟೆ ಠಾಣೆಯ ವೃತ್ತ ನಿರೀಕ್ಷಕ ಟಿ.ಅಶೋಕ್ಕುಮಾರ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜಿ.ಎಂ.ಎಂ. ಮಹಾ ಸ್ವಾಮೀಜಿ ಶಿಕ್ಷೆ ವಿಧಿಸಿದ್ದಾರೆ. <br /> <br /> ಅಕ್ರಮ ಬಂಧನ ಸಂಬಂಧ 1 ವರ್ಷ ಸಜೆ ಹಾಗೂ 1 ಸಾವಿರ ರೂ ದಂಡ, ಬೆದರಿಕೆಗೆ 3 ವರ್ಷ ಸಜೆ ಮತ್ತು ರೂ.2 ಸಾವಿರ ದಂಡ, ಅತ್ಯಾಚಾರ ಎಸಗಿದ್ದಕ್ಕೆ 9 ವರ್ಷ ಸಜೆ ಹಾಗೂ ರೂ.25 ಸಾವಿರ ದಂಡ, ಆಕೆಯ ಆತ್ಮಹತ್ಯೆಗೆ ಕಾರಣನಾಗಿದ್ದಕ್ಕೆ 9 ವರ್ಷ ಶಿಕ್ಷೆ ಹಾಗೂ ರೂ.25 ಸಾವಿರ ದಂಡವಿಧಿಸಿ ಗುರುವಾರ ತೀರ್ಪು ನೀಡಿದ್ದಾರೆ. ದಂಡದ ಹಣದಲ್ಲಿ 40 ಸಾವಿರ ರೂಪಾಯಿಯನ್ನು ಬಾಲಕಿಯ ಕುಟುಂಬಕ್ಕೆ ನೀಡಲು ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಅಕ್ರಮ ಬಂಧನದಲ್ಲಿಟ್ಟು ಆತ್ಮಹತ್ಯೆಗೂ ಕಾರಣನಾದ ಯುವಕನಿಗೆ ಇಲ್ಲಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯವು 22 ವರ್ಷ ಸಜೆ ಹಾಗೂ 53 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. <br /> <br /> ಗುಂಡ್ಲುಪೇಟೆ ತಾಲ್ಲೂಕಿನ ನಿಟ್ರೆ ಗ್ರಾಮದ ರಾಘವೇಂದ್ರ (22) ಶಿಕ್ಷೆಗೊಳಗಾದವ. 2010ರ ಜ.21ರಂದು ತನ್ನ ಅಂಗಡಿಗೆ ದಿನಸಿ ಸಾಮಗ್ರಿ ಖರೀದಿಸಲು ಬಂದಿದ್ದ ಅದೇ ಗ್ರಾಮದ ಬಾಲಕಿ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದ. ನಂತರ ಆಕೆಯನ್ನು ಅಂಗಡಿಯಲ್ಲಿಯೇ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದ ಆರೋಪ ಆತನ ಮೇಲಿತ್ತು. <br /> ಈ ಘಟನೆಯಿಂದ ಮನನೊಂದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. <br /> <br /> ಈ ಸಂಬಂಧ ಗುಂಡ್ಲುಪೇಟೆ ಠಾಣೆಯ ವೃತ್ತ ನಿರೀಕ್ಷಕ ಟಿ.ಅಶೋಕ್ಕುಮಾರ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜಿ.ಎಂ.ಎಂ. ಮಹಾ ಸ್ವಾಮೀಜಿ ಶಿಕ್ಷೆ ವಿಧಿಸಿದ್ದಾರೆ. <br /> <br /> ಅಕ್ರಮ ಬಂಧನ ಸಂಬಂಧ 1 ವರ್ಷ ಸಜೆ ಹಾಗೂ 1 ಸಾವಿರ ರೂ ದಂಡ, ಬೆದರಿಕೆಗೆ 3 ವರ್ಷ ಸಜೆ ಮತ್ತು ರೂ.2 ಸಾವಿರ ದಂಡ, ಅತ್ಯಾಚಾರ ಎಸಗಿದ್ದಕ್ಕೆ 9 ವರ್ಷ ಸಜೆ ಹಾಗೂ ರೂ.25 ಸಾವಿರ ದಂಡ, ಆಕೆಯ ಆತ್ಮಹತ್ಯೆಗೆ ಕಾರಣನಾಗಿದ್ದಕ್ಕೆ 9 ವರ್ಷ ಶಿಕ್ಷೆ ಹಾಗೂ ರೂ.25 ಸಾವಿರ ದಂಡವಿಧಿಸಿ ಗುರುವಾರ ತೀರ್ಪು ನೀಡಿದ್ದಾರೆ. ದಂಡದ ಹಣದಲ್ಲಿ 40 ಸಾವಿರ ರೂಪಾಯಿಯನ್ನು ಬಾಲಕಿಯ ಕುಟುಂಬಕ್ಕೆ ನೀಡಲು ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>