<p><strong>ನವದೆಹಲಿ (ಪಿಟಿಐ): </strong>ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು (ಡಬ್ಲ್ಯುಸಿಡಿ) ಸಾಮೂಹಿಕ ಅತ್ಯಾಚಾರದಂತಹ ಹೀನ ರೀತಿಯ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಬಾಲಾರೋಪಿಯ ವಯೋಮಿತಿಯನ್ನು 18ರಿಂದ 16 ವರ್ಷಕ್ಕೆ ಇಳಿಸುವ ಪ್ರಸ್ತಾವ ಮುಂದಿಟ್ಟಿದೆ.<br /> <br /> ಇಂತಹ ಹೇಯ ಅಪರಾಧ ಕೃತ್ಯದ ಆರೋಪಿಯು 16 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವನಾಗಿದ್ದರೆ ಅವನನ್ನು ಭಾರತೀಯ ದಂಡ ಸಂಹಿತೆ (ಐಪಿಸಿ) ಅನ್ವಯ ವಯಸ್ಕ ಆರೋಪಿಯಂತೆಯೇ ಪರಿಗಣಿಸಬೇಕು ಎಂದು ಪ್ರಸ್ತಾವದಲ್ಲಿ ಹೇಳಲಾಗಿದೆ. ಈ ಕುರಿತು ಕರಡು ಟಿಪ್ಪಣಿ ಸಿದ್ಧಪಡಿಸಿರುವ ‘ಡಬ್ಲ್ಯುಸಿಡಿ’, ಇದನ್ನು ಕೇಂದ್ರ ಸಚಿವ ಸಂಪುಟದ ಮುಂದಿಡಲು ಚಿಂತನೆ ನಡೆಸಿದೆ. ಈ ಪ್ರಸ್ತಾವದ ಬಗ್ಗೆ ಸರ್ಕಾರ ಕೆಲವು ದಿನಗಳಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.<br /> <br /> ಡಿ. 16ರಂದು ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಉಳಿದ ಅಪರಾಧಿಗಳಿಗಿಂತ ಅತ್ಯಂತ ಮೃಗೀಯವಾಗಿ ನಡೆದು ಕೊಂಡವನು ಬಾಲಾರೋಪಿ. ಆದರೆ, ಆತನಿಗೆ ಬಾಲನ್ಯಾಯ ಕಾಯ್ದೆ ಅನ್ವಯ ನೀಡಲಾದ ಶಿಕ್ಷೆ ತೀರಾ ಕಡಿಮೆ ಎಂಬ ಅಭಿಪ್ರಾಯಗಳು ಬಲವಾಗಿ ವ್ಯಕ್ತವಾದ ಹಿನ್ನೆಲೆಯಲ್ಲಿ ‘ಡಬ್ಲ್ಯುಸಿಡಿ’ ಈ ಮಹತ್ವದ ಪ್ರಸ್ತಾವ ಮಾಡಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು (ಡಬ್ಲ್ಯುಸಿಡಿ) ಸಾಮೂಹಿಕ ಅತ್ಯಾಚಾರದಂತಹ ಹೀನ ರೀತಿಯ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಬಾಲಾರೋಪಿಯ ವಯೋಮಿತಿಯನ್ನು 18ರಿಂದ 16 ವರ್ಷಕ್ಕೆ ಇಳಿಸುವ ಪ್ರಸ್ತಾವ ಮುಂದಿಟ್ಟಿದೆ.<br /> <br /> ಇಂತಹ ಹೇಯ ಅಪರಾಧ ಕೃತ್ಯದ ಆರೋಪಿಯು 16 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವನಾಗಿದ್ದರೆ ಅವನನ್ನು ಭಾರತೀಯ ದಂಡ ಸಂಹಿತೆ (ಐಪಿಸಿ) ಅನ್ವಯ ವಯಸ್ಕ ಆರೋಪಿಯಂತೆಯೇ ಪರಿಗಣಿಸಬೇಕು ಎಂದು ಪ್ರಸ್ತಾವದಲ್ಲಿ ಹೇಳಲಾಗಿದೆ. ಈ ಕುರಿತು ಕರಡು ಟಿಪ್ಪಣಿ ಸಿದ್ಧಪಡಿಸಿರುವ ‘ಡಬ್ಲ್ಯುಸಿಡಿ’, ಇದನ್ನು ಕೇಂದ್ರ ಸಚಿವ ಸಂಪುಟದ ಮುಂದಿಡಲು ಚಿಂತನೆ ನಡೆಸಿದೆ. ಈ ಪ್ರಸ್ತಾವದ ಬಗ್ಗೆ ಸರ್ಕಾರ ಕೆಲವು ದಿನಗಳಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.<br /> <br /> ಡಿ. 16ರಂದು ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಉಳಿದ ಅಪರಾಧಿಗಳಿಗಿಂತ ಅತ್ಯಂತ ಮೃಗೀಯವಾಗಿ ನಡೆದು ಕೊಂಡವನು ಬಾಲಾರೋಪಿ. ಆದರೆ, ಆತನಿಗೆ ಬಾಲನ್ಯಾಯ ಕಾಯ್ದೆ ಅನ್ವಯ ನೀಡಲಾದ ಶಿಕ್ಷೆ ತೀರಾ ಕಡಿಮೆ ಎಂಬ ಅಭಿಪ್ರಾಯಗಳು ಬಲವಾಗಿ ವ್ಯಕ್ತವಾದ ಹಿನ್ನೆಲೆಯಲ್ಲಿ ‘ಡಬ್ಲ್ಯುಸಿಡಿ’ ಈ ಮಹತ್ವದ ಪ್ರಸ್ತಾವ ಮಾಡಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>