<p><strong>ಚಾಮರಾಜನಗರ: </strong>`ಅನಿಷ್ಟ ಬಾಲ್ಯ ವಿವಾಹ ಪದ್ಧತಿಯ ನಿರ್ಮೂಲನೆಗೆ ಸಾರ್ವಜನಿಕರ ಸಹಭಾಗಿತ್ವದ ಅಗತ್ಯವಿದೆ. ಜತೆಗೆ, ಆಚರಣೆ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಿದೆ~ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ. ರಾಜೇಶ್ವರಿ ಹೇಳಿದರು.<br /> <br /> ಸಮೀಪದ ಮರಿಯಾಲದ ಜೆಎಸ್ಎಸ್ ರುಡ್ಸೆಟ್ ಸಂಸ್ಥೆಯಲ್ಲಿ ಜಿಲ್ಲಾ ಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜೆಎಸ್ಎಸ್ ರುಡ್ಸೆಟ್ನಿಂದ ಮಂಗಳವಾರ ಮಹಿಳೆಯರ, ಮಕ್ಕಳ ಸಾಗಾಣಿಕೆ, ಬಾಲ್ಯ ವೇಶ್ಯಾ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಬಡತನ ಸೇರಿದಂತೆ ಇತರೇ ಸಾಮಾಜಿಕ ಕಾರಣಗಳಿಂದ ಮಹಿಳೆ ಯರು, ಮಕ್ಕಳ ಸಾಗಾಣಿಕೆ ಹಾಗೂ ಬಾಲ್ಯ ವೇಶ್ಯಾ ಪದ್ಧತಿ ನಡೆಯುತ್ತಿದೆ ಎಂದ ಅವರು, ಮಹಿಳೆಯರಿಗೆ ಸೂಕ್ತ ಶಿಕ್ಷಣ ನೀಡಬೇಕಿದೆ. ಮೂಢನಂಬಿಕೆಗೆ ಒಳಗಾಗದಂತೆ ಅವರಿಗೆ ತಿಳಿವಳಿಕೆ ಮೂಡಿಸಬೇಕು ಎಂದು ಸಲಹೆ ನೀಡಿದರು. <br /> <br /> ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಕೆ. ಈಶ್ವರ್ ಮಾತನಾಡಿ, ಬಾಲ್ಯವಿವಾಹ, ವೇಶ್ಯಾವಾಟಿಕೆ ನಿರ್ಮೂಲನೆ ಸಂಬಂಧ ಗ್ರಾಮಮಟ್ಟದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿ ಬಾಲ್ಯವಿವಾಹ ಪದ್ಧತಿ ಹೆಚ್ಚಿದೆ. ಹೀಗಾಗಿ, ಗ್ರಾಮೀಣರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅರಿವು ಮೂಡಿಸಬೇಕು ಎಂದು ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಸುಂದರನಾಯ್ಕ ಮಾತನಾಡಿ, `ಅನಿಷ್ಟ ಪದ್ಧತಿಗಳ ನಿರ್ಮೂಲನೆಗೆ ಗ್ರಾಮ ಪಂಚಾಯಿತಿ ವಿಶೇಷ ಗಮನಹರಿಸಬೇಕು. ಕೆಲವೊಮ್ಮೆ ಮಾಹಿತಿ ಕೊರತೆಯಿಂದ ಜಿಲ್ಲಾ ಪಂಚಾಯಿತಿಗೆ ಈ ವಿಚಾರಗಳು ಗಮನಕ್ಕೆ ಬರುವುದಿಲ್ಲ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಂಬಂಧ ಗ್ರಾಮಮಟ್ಟದಲ್ಲಿ ಜಾಗೃತಿ ಮೂಡಿಸಬೇಕಿದೆ~ ಎಂದರು.<br /> <br /> ಗ್ರಾಮಮಟ್ಟದಲ್ಲಿ ಮಾಸಿಕ ಸಭೆ ನಡೆಯದಿದ್ದರೆ ಸರ್ಕಾರದ ಅನುದಾನ ಕೂಡ ಖೋತ ಆಗುವ ಸಂಭವವಿದೆ ಎಂದರು.<br /> <br /> ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಬಿ.ಪಿ. ಪುಟ್ಟಬುದ್ಧಿ ಮಾತನಾಡಿ, ಶಿಕ್ಷಣದ ಕೊರತೆ ಪರಿಣಾಮ ಗ್ರಾಮೀಣರು ಮೂಢನಂಬಿಕೆಗಳಿಗೆ ಬಲಿಯಾಗುತ್ತಿದ್ದಾರೆ. ಬಾಲ್ಯವಿವಾಹ, ವೇಶ್ಯಾವಾಟಿಕೆ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾದರೆ ಮಾತ್ರವೇ ದೇಶ ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶೇಹೆರ್ಬಾನು, ಅಭಿವೃದ್ಧಿ ಅಧಿಕಾರಿ ಡಾ.ಎಸ್. ದಿವಾಕರ್, ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟಾನ್ಲಿ, ಪರಶುರಾಮ್, ಜೆಎಸ್ಎಸ್ ರುಡ್ಸೆಟ್ ಸಂಸ್ಥೆಯ ಯೋಜನಾಧಿಕಾರಿ ಬಿ.ಎಂ. ಚಂದ್ರಶೇಖರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>`ಅನಿಷ್ಟ ಬಾಲ್ಯ ವಿವಾಹ ಪದ್ಧತಿಯ ನಿರ್ಮೂಲನೆಗೆ ಸಾರ್ವಜನಿಕರ ಸಹಭಾಗಿತ್ವದ ಅಗತ್ಯವಿದೆ. ಜತೆಗೆ, ಆಚರಣೆ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಿದೆ~ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ. ರಾಜೇಶ್ವರಿ ಹೇಳಿದರು.<br /> <br /> ಸಮೀಪದ ಮರಿಯಾಲದ ಜೆಎಸ್ಎಸ್ ರುಡ್ಸೆಟ್ ಸಂಸ್ಥೆಯಲ್ಲಿ ಜಿಲ್ಲಾ ಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜೆಎಸ್ಎಸ್ ರುಡ್ಸೆಟ್ನಿಂದ ಮಂಗಳವಾರ ಮಹಿಳೆಯರ, ಮಕ್ಕಳ ಸಾಗಾಣಿಕೆ, ಬಾಲ್ಯ ವೇಶ್ಯಾ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಬಡತನ ಸೇರಿದಂತೆ ಇತರೇ ಸಾಮಾಜಿಕ ಕಾರಣಗಳಿಂದ ಮಹಿಳೆ ಯರು, ಮಕ್ಕಳ ಸಾಗಾಣಿಕೆ ಹಾಗೂ ಬಾಲ್ಯ ವೇಶ್ಯಾ ಪದ್ಧತಿ ನಡೆಯುತ್ತಿದೆ ಎಂದ ಅವರು, ಮಹಿಳೆಯರಿಗೆ ಸೂಕ್ತ ಶಿಕ್ಷಣ ನೀಡಬೇಕಿದೆ. ಮೂಢನಂಬಿಕೆಗೆ ಒಳಗಾಗದಂತೆ ಅವರಿಗೆ ತಿಳಿವಳಿಕೆ ಮೂಡಿಸಬೇಕು ಎಂದು ಸಲಹೆ ನೀಡಿದರು. <br /> <br /> ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಕೆ. ಈಶ್ವರ್ ಮಾತನಾಡಿ, ಬಾಲ್ಯವಿವಾಹ, ವೇಶ್ಯಾವಾಟಿಕೆ ನಿರ್ಮೂಲನೆ ಸಂಬಂಧ ಗ್ರಾಮಮಟ್ಟದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿ ಬಾಲ್ಯವಿವಾಹ ಪದ್ಧತಿ ಹೆಚ್ಚಿದೆ. ಹೀಗಾಗಿ, ಗ್ರಾಮೀಣರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅರಿವು ಮೂಡಿಸಬೇಕು ಎಂದು ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಸುಂದರನಾಯ್ಕ ಮಾತನಾಡಿ, `ಅನಿಷ್ಟ ಪದ್ಧತಿಗಳ ನಿರ್ಮೂಲನೆಗೆ ಗ್ರಾಮ ಪಂಚಾಯಿತಿ ವಿಶೇಷ ಗಮನಹರಿಸಬೇಕು. ಕೆಲವೊಮ್ಮೆ ಮಾಹಿತಿ ಕೊರತೆಯಿಂದ ಜಿಲ್ಲಾ ಪಂಚಾಯಿತಿಗೆ ಈ ವಿಚಾರಗಳು ಗಮನಕ್ಕೆ ಬರುವುದಿಲ್ಲ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಂಬಂಧ ಗ್ರಾಮಮಟ್ಟದಲ್ಲಿ ಜಾಗೃತಿ ಮೂಡಿಸಬೇಕಿದೆ~ ಎಂದರು.<br /> <br /> ಗ್ರಾಮಮಟ್ಟದಲ್ಲಿ ಮಾಸಿಕ ಸಭೆ ನಡೆಯದಿದ್ದರೆ ಸರ್ಕಾರದ ಅನುದಾನ ಕೂಡ ಖೋತ ಆಗುವ ಸಂಭವವಿದೆ ಎಂದರು.<br /> <br /> ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಬಿ.ಪಿ. ಪುಟ್ಟಬುದ್ಧಿ ಮಾತನಾಡಿ, ಶಿಕ್ಷಣದ ಕೊರತೆ ಪರಿಣಾಮ ಗ್ರಾಮೀಣರು ಮೂಢನಂಬಿಕೆಗಳಿಗೆ ಬಲಿಯಾಗುತ್ತಿದ್ದಾರೆ. ಬಾಲ್ಯವಿವಾಹ, ವೇಶ್ಯಾವಾಟಿಕೆ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾದರೆ ಮಾತ್ರವೇ ದೇಶ ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶೇಹೆರ್ಬಾನು, ಅಭಿವೃದ್ಧಿ ಅಧಿಕಾರಿ ಡಾ.ಎಸ್. ದಿವಾಕರ್, ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟಾನ್ಲಿ, ಪರಶುರಾಮ್, ಜೆಎಸ್ಎಸ್ ರುಡ್ಸೆಟ್ ಸಂಸ್ಥೆಯ ಯೋಜನಾಧಿಕಾರಿ ಬಿ.ಎಂ. ಚಂದ್ರಶೇಖರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>