<p><strong>ಬಳ್ಳಾರಿ: </strong>ಬಾಲ್ಯವಿವಾಹದಂತಹ ಅನಿಷ್ಟ ಪದ್ಧತಿಯನ್ನು ಹೊಡೆದೋಡಿಸುವಲ್ಲಿ ಪ್ರತಿಯೊಬ್ಬರೂ ಸಹಕರಿಬೇಕು ಎಂದು ಸಂಸದೆ ಜೆ. ಶಾಂತಾ ಸಲಹೆ ನೀಡಿದರು.<br /> <br /> ನಗರದ ಗಾಂಧಿ ಭವನದಲ್ಲಿ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಏರ್ಪಡಿಸಿದ್ದ ಬಾಲ್ಯವಿವಾಹ ನಿಷೇಧ ಕಾಯ್ದೆ ಲಾಂಛನ ಸ್ವೀಕಾರ ಹಾಗೂ ಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಬಾಲ್ಯವಿವಾಹ ತಡೆಗಟ್ಟುವಲ್ಲಿ ಪಾಲಕರು, ಸಂಘ- ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ. ಈ ಅನಿಷ್ಟ ಪದ್ಧತಿಯನ್ನು ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ. ಪ್ರತಿಯೊಬ್ಬರೂ ವಿದ್ಯಾವಂತರಾದಲ್ಲಿ ಇಂತಹ ಪದ್ಧತಿ ಮರೆಯಾಗುತ್ತದೆ. ಪಾಲಕರು ತಮ್ಮ ಮಕ್ಕಳು ವಯಸ್ಕರಾಗುವವರೆಗೆ ಮದುವೆ ಮಾಡದೆ, ಸೂಕ್ತ ಶಿಕ್ಷಣ ಕೊಡಿಸಿ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ನೆರವಾಗಬೇಕು ಎಂದರು.<br /> <br /> ಬಾಲ್ಯವಿವಾಹ ಪದ್ಧತಿ ನಿರ್ಮೂಲನೆಗೆ ಈವರೆಗೆ ಅನೇಕ ಹೋರಾಟಗಳು ನಡೆದಿವೆ. ಪೋಲಿಯೊ ಮುಕ್ತ ರಾಷ್ಟ್ರ ನಿರ್ಮಾಣ ಮಾಡಿದಂತೆಯೇ ಬಾಲ್ಯವಿವಾಹ ಮುಕ್ತ ದೇಶ ನಿರ್ಮಾಣವಾಗಬೇಕು ಎಂದು ಶಾಸಕ ಜಿ. ಸೋಮಶೇಖರರೆಡ್ಡಿ ತಿಳಿಸಿದರು.<br /> <br /> ಬಾಲ್ಯವಿವಾಹ ಪದ್ಧತಿಯು ಸಾಮಾಜಿಕ ಕಂಟಕವಾಗಿದ್ದು, ಇದನ್ನು ತಡೆಗಟ್ಟುವ ಕಾಯ್ದೆಯ ಸಮರ್ಪಕ ಅನುಷ್ಠಾನದ ಅಗತ್ಯವಿದೆ ಎಂದು ಮೇಯರ್ ಪಾರ್ವತಿ ಇಂದುಶೇಖರ್ ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಅರುಣಾ ತಿಪ್ಪಾರೆಡ್ಡಿ ಪ್ರತಿಜ್ಞಾವಿಧಿ ಬೋಧಿಸಿದರು. ಉಪಮೇಯರ್ ಶಶಿಕಲಾ, ಉಪವಿಭಾಗಾಧಿಕಾರಿ ಶಶಿಕಾಂತ್ ಸೆಂಥಿಲ್, ತಹಶೀಲ್ದಾರ್ ಶಶಿಧರ ಬಗಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮೇಟಿ ಉಪಸ್ಥಿತರಿದ್ದರು. ಬಸವರಾಜ್ ಸ್ವಾಗತಿಸಿದರು.<br /> <br /> ಇದೇ ವೇಳೆ ನಡೆದ ಬಾಲ್ಯವಿವಾಹ ತಡೆ ಕುರಿತ ಜಾಗೃತಿ ಜಾಥಾದಲ್ಲಿ ವಿವಿಧ ಶಾಲೆ- ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬಾಲ್ಯ ವಿವಾಹ ನಿಷೇಧ ಕುರಿತು ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ಬಾಲ್ಯವಿವಾಹದಂತಹ ಅನಿಷ್ಟ ಪದ್ಧತಿಯನ್ನು ಹೊಡೆದೋಡಿಸುವಲ್ಲಿ ಪ್ರತಿಯೊಬ್ಬರೂ ಸಹಕರಿಬೇಕು ಎಂದು ಸಂಸದೆ ಜೆ. ಶಾಂತಾ ಸಲಹೆ ನೀಡಿದರು.<br /> <br /> ನಗರದ ಗಾಂಧಿ ಭವನದಲ್ಲಿ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಏರ್ಪಡಿಸಿದ್ದ ಬಾಲ್ಯವಿವಾಹ ನಿಷೇಧ ಕಾಯ್ದೆ ಲಾಂಛನ ಸ್ವೀಕಾರ ಹಾಗೂ ಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಬಾಲ್ಯವಿವಾಹ ತಡೆಗಟ್ಟುವಲ್ಲಿ ಪಾಲಕರು, ಸಂಘ- ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ. ಈ ಅನಿಷ್ಟ ಪದ್ಧತಿಯನ್ನು ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ. ಪ್ರತಿಯೊಬ್ಬರೂ ವಿದ್ಯಾವಂತರಾದಲ್ಲಿ ಇಂತಹ ಪದ್ಧತಿ ಮರೆಯಾಗುತ್ತದೆ. ಪಾಲಕರು ತಮ್ಮ ಮಕ್ಕಳು ವಯಸ್ಕರಾಗುವವರೆಗೆ ಮದುವೆ ಮಾಡದೆ, ಸೂಕ್ತ ಶಿಕ್ಷಣ ಕೊಡಿಸಿ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ನೆರವಾಗಬೇಕು ಎಂದರು.<br /> <br /> ಬಾಲ್ಯವಿವಾಹ ಪದ್ಧತಿ ನಿರ್ಮೂಲನೆಗೆ ಈವರೆಗೆ ಅನೇಕ ಹೋರಾಟಗಳು ನಡೆದಿವೆ. ಪೋಲಿಯೊ ಮುಕ್ತ ರಾಷ್ಟ್ರ ನಿರ್ಮಾಣ ಮಾಡಿದಂತೆಯೇ ಬಾಲ್ಯವಿವಾಹ ಮುಕ್ತ ದೇಶ ನಿರ್ಮಾಣವಾಗಬೇಕು ಎಂದು ಶಾಸಕ ಜಿ. ಸೋಮಶೇಖರರೆಡ್ಡಿ ತಿಳಿಸಿದರು.<br /> <br /> ಬಾಲ್ಯವಿವಾಹ ಪದ್ಧತಿಯು ಸಾಮಾಜಿಕ ಕಂಟಕವಾಗಿದ್ದು, ಇದನ್ನು ತಡೆಗಟ್ಟುವ ಕಾಯ್ದೆಯ ಸಮರ್ಪಕ ಅನುಷ್ಠಾನದ ಅಗತ್ಯವಿದೆ ಎಂದು ಮೇಯರ್ ಪಾರ್ವತಿ ಇಂದುಶೇಖರ್ ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಅರುಣಾ ತಿಪ್ಪಾರೆಡ್ಡಿ ಪ್ರತಿಜ್ಞಾವಿಧಿ ಬೋಧಿಸಿದರು. ಉಪಮೇಯರ್ ಶಶಿಕಲಾ, ಉಪವಿಭಾಗಾಧಿಕಾರಿ ಶಶಿಕಾಂತ್ ಸೆಂಥಿಲ್, ತಹಶೀಲ್ದಾರ್ ಶಶಿಧರ ಬಗಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮೇಟಿ ಉಪಸ್ಥಿತರಿದ್ದರು. ಬಸವರಾಜ್ ಸ್ವಾಗತಿಸಿದರು.<br /> <br /> ಇದೇ ವೇಳೆ ನಡೆದ ಬಾಲ್ಯವಿವಾಹ ತಡೆ ಕುರಿತ ಜಾಗೃತಿ ಜಾಥಾದಲ್ಲಿ ವಿವಿಧ ಶಾಲೆ- ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬಾಲ್ಯ ವಿವಾಹ ನಿಷೇಧ ಕುರಿತು ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>