<p><strong>ವಿಜಾಪುರ: </strong>ಬಾಲ್ಯ ವಿವಾಹದ ಅನಾಹುತಗಳ ಬಗೆಗೆ ಗ್ರಾಮೀಣ ಪ್ರದೇಶದ ಜನತೆಯಲ್ಲಿ ಜಾಗೃತಿ ಮೂಡಿಸಲು ವಿದ್ಯಾರ್ಥಿನಿಯರು ಶ್ರಮಿಸಬೇಕು ಎಂದು ಉಜ್ವಲ ಸಂಸ್ಥೆಯ ನಿರ್ದೇಶಕ ವಾಸುದೇವ್ ತೋಳಬಂದಿ ಸಲಹೆ ನೀಡಿದರು.<br /> <br /> ಉಜ್ವಲ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆಯ ಸಹಯೋಗದಲ್ಲಿ ಇಲ್ಲಿಯ ಮಹಿಳಾ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ `ಬಾಲ್ಯ ವಿವಾಹ ಅನಿಷ್ಠ ಪದ್ಧತಿ ವಿರುದ್ಧ ಅರಿವು~ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದರು.<br /> ಸಹಾಯಕ ಪ್ರಾಧ್ಯಾಪಕ ಡಾ.ರಮೇಶ ಸೋನಕಾಂಬಳೆ, ಬಾಲ್ಯ ವಿವಾಹದ ಸ್ಥಿತಿಗತಿ ವಿವರಿಸಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ಪ್ರೊ.ಎಸ್.ಎ. ಖಾಜಿ, ಇಂದು ಮಹಿಳೆಯರಿಗೆ ಕಾಡುತ್ತಿರುವ ಸಮಸ್ಯೆಗಳಲ್ಲಿ ಬಾಲ್ಯ ವಿವಾಹ ಪ್ರಮುಖ ಕಾರಣವಾಗಿದೆ. ಉತ್ತರ ಕರ್ನಾಟಕದಲ್ಲಿ ಮಹಿಳೆಯರ ಸಂಖ್ಯೆ ಇಳಿಮುಖವಾಗುತ್ತಿದೆ. ಪ್ರತಿಯೊಬ್ಬರು ಮೊದಲು ನಾವು ಮನೆಯಲ್ಲಿ ಹಾಗೂ ನಮ್ಮ ನಮ್ಮ ಗ್ರಾಮಗಳಲ್ಲಿ ಬಾಲ್ಯವಿವಾಹ ತಡೆಯಲು ಕಂಕಣಬದ್ಧರಾಗಬೇಕು ಎಂದರು. <br /> <br /> ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಓಂಕಾರ ಕಾಕಡೆ, ಉಜ್ವಲ ಸಂಸ್ಥೆಯ ಸಂಯೋಜಕ ಯಮನಪ್ಪ ಎಂ. ವೇದಿಕೆಯಲ್ಲಿದ್ದರು. ಮಂಜುಳಾ ಅರೇಬಳ್ಳಿ ಸ್ವಾಗತಿಸಿದರು. ಛಾಯಾ ಕುಂಬಾರ ವಂದಿಸಿದರು. ನಾಗರತ್ನಾ ನಾಯಕ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ: </strong>ಬಾಲ್ಯ ವಿವಾಹದ ಅನಾಹುತಗಳ ಬಗೆಗೆ ಗ್ರಾಮೀಣ ಪ್ರದೇಶದ ಜನತೆಯಲ್ಲಿ ಜಾಗೃತಿ ಮೂಡಿಸಲು ವಿದ್ಯಾರ್ಥಿನಿಯರು ಶ್ರಮಿಸಬೇಕು ಎಂದು ಉಜ್ವಲ ಸಂಸ್ಥೆಯ ನಿರ್ದೇಶಕ ವಾಸುದೇವ್ ತೋಳಬಂದಿ ಸಲಹೆ ನೀಡಿದರು.<br /> <br /> ಉಜ್ವಲ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆಯ ಸಹಯೋಗದಲ್ಲಿ ಇಲ್ಲಿಯ ಮಹಿಳಾ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ `ಬಾಲ್ಯ ವಿವಾಹ ಅನಿಷ್ಠ ಪದ್ಧತಿ ವಿರುದ್ಧ ಅರಿವು~ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದರು.<br /> ಸಹಾಯಕ ಪ್ರಾಧ್ಯಾಪಕ ಡಾ.ರಮೇಶ ಸೋನಕಾಂಬಳೆ, ಬಾಲ್ಯ ವಿವಾಹದ ಸ್ಥಿತಿಗತಿ ವಿವರಿಸಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ಪ್ರೊ.ಎಸ್.ಎ. ಖಾಜಿ, ಇಂದು ಮಹಿಳೆಯರಿಗೆ ಕಾಡುತ್ತಿರುವ ಸಮಸ್ಯೆಗಳಲ್ಲಿ ಬಾಲ್ಯ ವಿವಾಹ ಪ್ರಮುಖ ಕಾರಣವಾಗಿದೆ. ಉತ್ತರ ಕರ್ನಾಟಕದಲ್ಲಿ ಮಹಿಳೆಯರ ಸಂಖ್ಯೆ ಇಳಿಮುಖವಾಗುತ್ತಿದೆ. ಪ್ರತಿಯೊಬ್ಬರು ಮೊದಲು ನಾವು ಮನೆಯಲ್ಲಿ ಹಾಗೂ ನಮ್ಮ ನಮ್ಮ ಗ್ರಾಮಗಳಲ್ಲಿ ಬಾಲ್ಯವಿವಾಹ ತಡೆಯಲು ಕಂಕಣಬದ್ಧರಾಗಬೇಕು ಎಂದರು. <br /> <br /> ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಓಂಕಾರ ಕಾಕಡೆ, ಉಜ್ವಲ ಸಂಸ್ಥೆಯ ಸಂಯೋಜಕ ಯಮನಪ್ಪ ಎಂ. ವೇದಿಕೆಯಲ್ಲಿದ್ದರು. ಮಂಜುಳಾ ಅರೇಬಳ್ಳಿ ಸ್ವಾಗತಿಸಿದರು. ಛಾಯಾ ಕುಂಬಾರ ವಂದಿಸಿದರು. ನಾಗರತ್ನಾ ನಾಯಕ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>