<p>ಸಾಗರ: ಮಹಿಳೆಯರನ್ನು ಯಾವ ರೀತಿ ಶೋಷಿಸಬಹುದು ಎನ್ನುವುದಕ್ಕೆ ಬಾಲ್ಯ ವಿವಾಹ ಕೂಡ ಒಂದು ಉದಾಹರಣೆಯಾಗಿದ್ದು ಬಾಲ್ಯ ವಿವಾಹ ಎನ್ನುವುದು ಮಹಿಳಾ ಶೋಷಣೆಯ ಪ್ರತಿರೂಪವಾಗಿದೆ ಎಂದು ತಹಶೀಲ್ದಾರ್ ಸಾಜಿದ್ ಅಹ್ಮದ್ ಮುಲ್ಲಾ ಹೇಳಿದರು.<br /> <br /> ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೋಮವಾರ ಏರ್ಪಡಿಸಿದ್ದ ಬಾಲ್ಯ ವಿವಾಹ ನಿಷೇಧ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಬಾಲ್ಯ ವಿವಾಹದಿಂದ ಹೆಚ್ಚಿನ ತೊಂದರೆಗೆ ಒಳಗಾಗುವವರು ಮಹಿಳೆಯರೆ ಎಂಬ ಅರಿವು ಎಲ್ಲರಲ್ಲಿ ಮೂಡಬೇಕಿದೆ ಎಂದರು.<br /> <br /> ಕಾನೂನಿನ ಪ್ರಕಾರ 18 ವರ್ಷ ತುಂಬದ ಯುವತಿ ಹಾಗೂ 21 ವರ್ಷ ತುಂಬದ ಪುರುಷ ಮದುವೆಯಾದರೆ ಅದಕ್ಕೆ ಮಾನ್ಯತೆಯೆ ಇಲ್ಲ. ಈ ಬಗ್ಗೆ ಕಾಯ್ದೆ ಜಾರಿಯಲ್ಲಿದ್ದರೂ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಬಾಲ್ಯ ವಿವಾಹ ನಡೆಯುತ್ತಿವೆ. ಇದನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜನಜಾಗೃತಿ ನಡೆಸಬೇಕಿದೆ ಎಂದು ಹೇಳಿದರು.<br /> <br /> ಯಾವುದೆ ವ್ಯಕ್ತಿ ವಿವಾಹವಾಗುವ ಮುನ್ನ ದೈಹಿಕ ಬೆಳವಣಿಗೆಯ ಜೊತೆಗೆ ಮಾನಸಿಕವಾಗಿಯೂ ಬೆಳವಣಿಗೆ ಹೊಂದಿರಬೇಕು. ಮುಂದಿನ ಜೀವನದ ಆಗು ಹೋಗುಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ವಿವೇಕ ಇದ್ದಾಗ ಮಾತ್ರ ವೈವಾಹಿಕ ಜೀವನ ಸುಗಮವಾಗಿ ಸಾಗಲು ಸಾಧ್ಯ ಎಂದರು.<br /> <br /> ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ.ಜಿ.ಜೋಯಪ್ಪ ಮಾತನಾಡಿ ಮೂರು ತಿಂಗಳಿಗೊಮ್ಮೆ ಪ್ರತಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.<br /> <br /> ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೆ.ಪಿ.ಅಚ್ಚುತ್, ವನಮಾಲ, ಅಕ್ಷತಾ, ರಘುನಾಥ್ ಹಾಜರಿದ್ದರು. ವಿದ್ಯಾ .ಎಸ್.ಹೆಗಡೆ ಪ್ರಾರ್ಥಿಸಿದರು. ಮಲ್ಲಿಕಾರ್ಜುನ್ ಸ್ವಾಗತಿಸಿದರು. ಲಲಿತ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ಮಹಿಳೆಯರನ್ನು ಯಾವ ರೀತಿ ಶೋಷಿಸಬಹುದು ಎನ್ನುವುದಕ್ಕೆ ಬಾಲ್ಯ ವಿವಾಹ ಕೂಡ ಒಂದು ಉದಾಹರಣೆಯಾಗಿದ್ದು ಬಾಲ್ಯ ವಿವಾಹ ಎನ್ನುವುದು ಮಹಿಳಾ ಶೋಷಣೆಯ ಪ್ರತಿರೂಪವಾಗಿದೆ ಎಂದು ತಹಶೀಲ್ದಾರ್ ಸಾಜಿದ್ ಅಹ್ಮದ್ ಮುಲ್ಲಾ ಹೇಳಿದರು.<br /> <br /> ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೋಮವಾರ ಏರ್ಪಡಿಸಿದ್ದ ಬಾಲ್ಯ ವಿವಾಹ ನಿಷೇಧ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಬಾಲ್ಯ ವಿವಾಹದಿಂದ ಹೆಚ್ಚಿನ ತೊಂದರೆಗೆ ಒಳಗಾಗುವವರು ಮಹಿಳೆಯರೆ ಎಂಬ ಅರಿವು ಎಲ್ಲರಲ್ಲಿ ಮೂಡಬೇಕಿದೆ ಎಂದರು.<br /> <br /> ಕಾನೂನಿನ ಪ್ರಕಾರ 18 ವರ್ಷ ತುಂಬದ ಯುವತಿ ಹಾಗೂ 21 ವರ್ಷ ತುಂಬದ ಪುರುಷ ಮದುವೆಯಾದರೆ ಅದಕ್ಕೆ ಮಾನ್ಯತೆಯೆ ಇಲ್ಲ. ಈ ಬಗ್ಗೆ ಕಾಯ್ದೆ ಜಾರಿಯಲ್ಲಿದ್ದರೂ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಬಾಲ್ಯ ವಿವಾಹ ನಡೆಯುತ್ತಿವೆ. ಇದನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜನಜಾಗೃತಿ ನಡೆಸಬೇಕಿದೆ ಎಂದು ಹೇಳಿದರು.<br /> <br /> ಯಾವುದೆ ವ್ಯಕ್ತಿ ವಿವಾಹವಾಗುವ ಮುನ್ನ ದೈಹಿಕ ಬೆಳವಣಿಗೆಯ ಜೊತೆಗೆ ಮಾನಸಿಕವಾಗಿಯೂ ಬೆಳವಣಿಗೆ ಹೊಂದಿರಬೇಕು. ಮುಂದಿನ ಜೀವನದ ಆಗು ಹೋಗುಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ವಿವೇಕ ಇದ್ದಾಗ ಮಾತ್ರ ವೈವಾಹಿಕ ಜೀವನ ಸುಗಮವಾಗಿ ಸಾಗಲು ಸಾಧ್ಯ ಎಂದರು.<br /> <br /> ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ.ಜಿ.ಜೋಯಪ್ಪ ಮಾತನಾಡಿ ಮೂರು ತಿಂಗಳಿಗೊಮ್ಮೆ ಪ್ರತಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.<br /> <br /> ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೆ.ಪಿ.ಅಚ್ಚುತ್, ವನಮಾಲ, ಅಕ್ಷತಾ, ರಘುನಾಥ್ ಹಾಜರಿದ್ದರು. ವಿದ್ಯಾ .ಎಸ್.ಹೆಗಡೆ ಪ್ರಾರ್ಥಿಸಿದರು. ಮಲ್ಲಿಕಾರ್ಜುನ್ ಸ್ವಾಗತಿಸಿದರು. ಲಲಿತ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>