<p><strong>ಕಾರವಾರ:</strong> ಚಂಡಮಾರುತ ವಿಪತ್ತು ನಿರ್ವಹಣಾ ಅಣಕು ಪ್ರದರ್ಶನ ಶುಕ್ರವಾರ ತಾಲ್ಲೂಕಿನ ಬಾವಳ ಗ್ರಾಮದ ಕಡಲತೀರದಲ್ಲಿ ನಡೆಯಿತು. ಸರಿಯಾಗಿ 11ಕ್ಕೆ ಜಿಲ್ಲಾಧಿಕಾರಿ ಇಂಕೋಂಗ್ಲಾ ಜಮೀರ್ ಅವರು ತುರ್ತುಸ್ಥಿತಿಯನ್ನು ಘೋಷಣೆ ಮಾಡಿದರು.<br /> <br /> ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ, ಪೊಲೀಸರು, ಆರೋಗ್ಯ ಇಲಾಖೆ, ಕಡಲ್ಗಾವಲು ಪಡೆ, ಕರಾವಳಿ ಕಾವಲು ಪಡೆ ಸಿಬ್ಬಂದಿ ಕಡಲದಂಡೆಯಲ್ಲಿರುವ ನಾಗರಿಕರ ರಕ್ಷಣೆಗೆ ಆಗಮಿಸಿದರು.<br /> <br /> ಕಡಲ ಕಿನಾರೆಯಲ್ಲಿದ್ದ ಮೀನುಗಾರರು ಮತ್ತು ಮನೆಯಲ್ಲಿದ್ದವರನ್ನು ಹೊರತಂದು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು. ಗಾಯಾಳುಗಳನ್ನು ಸಮೀಪದ ಯೂನಿಟ್ ಹೈಸ್ಕೂಲ್ನಲ್ಲಿ ಆರಂಭಿಸಿದ ಆರೋಗ್ಯ ಕೇಂದ್ರಕ್ಕೆ ತಂದು ಚಿಕಿತ್ಸೆ ನೀಡಲಾಯಿತು.<br /> <br /> ಕಡಲತೀರದಲ್ಲಿ ಪತ್ತೆಯಾದ ಎರಡು ಮೃತದೇಹಗಳನ್ನು ಆರೋಗ್ಯ ಕೇಂದ್ರದ ಸಿಬ್ಬಂದಿ ಅಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಸಾಗಿಸಿದರು. <br /> <br /> ಕಾರ್ಯಾಚರಣೆ ಪ್ರಾರಂಭವಾದ ಕೆಲವೇ ಹೊತ್ತಿನಲ್ಲಿ ಸುರಿದ ಮಳೆ ಅಣಕು ಕಾರ್ಯಚರಣೆಗೆ ಅಡ್ಡಿಯನ್ನುಂಟು ಮಾಡಿತು. ಮಳೆಯಲ್ಲೇ ನೆನೆಯುತ್ತಲೇ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು. <br /> <br /> ಅಣಕು ಪ್ರದರ್ಶನದ ವೇಳೆ ಸಾರ್ವಜನಿಕರು ಭಯಪಡದಂತೆ ಧ್ವನಿ ವರ್ಧಕದ ಮೂಲಕ ಸೂಚನೆ ನೀಡಲಾಗುತ್ತಿತ್ತು. <br /> <br /> ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಭಾಷ ಗುಡಿಮನಿ, ಉಪವಿಭಾಗಾಧಿಕಾರಿ ಪುಷ್ಪಲತಾ, ತಹಶೀಲ್ದಾರ ಸಾಜಿದ್ ಮುಲ್ಲಾ, ನಗರಸಭೆ ಆಯುಕ್ತ ಉದಯಕುಮಾರ ಶೆಟ್ಟಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಚಂಡಮಾರುತ ವಿಪತ್ತು ನಿರ್ವಹಣಾ ಅಣಕು ಪ್ರದರ್ಶನ ಶುಕ್ರವಾರ ತಾಲ್ಲೂಕಿನ ಬಾವಳ ಗ್ರಾಮದ ಕಡಲತೀರದಲ್ಲಿ ನಡೆಯಿತು. ಸರಿಯಾಗಿ 11ಕ್ಕೆ ಜಿಲ್ಲಾಧಿಕಾರಿ ಇಂಕೋಂಗ್ಲಾ ಜಮೀರ್ ಅವರು ತುರ್ತುಸ್ಥಿತಿಯನ್ನು ಘೋಷಣೆ ಮಾಡಿದರು.<br /> <br /> ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ, ಪೊಲೀಸರು, ಆರೋಗ್ಯ ಇಲಾಖೆ, ಕಡಲ್ಗಾವಲು ಪಡೆ, ಕರಾವಳಿ ಕಾವಲು ಪಡೆ ಸಿಬ್ಬಂದಿ ಕಡಲದಂಡೆಯಲ್ಲಿರುವ ನಾಗರಿಕರ ರಕ್ಷಣೆಗೆ ಆಗಮಿಸಿದರು.<br /> <br /> ಕಡಲ ಕಿನಾರೆಯಲ್ಲಿದ್ದ ಮೀನುಗಾರರು ಮತ್ತು ಮನೆಯಲ್ಲಿದ್ದವರನ್ನು ಹೊರತಂದು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು. ಗಾಯಾಳುಗಳನ್ನು ಸಮೀಪದ ಯೂನಿಟ್ ಹೈಸ್ಕೂಲ್ನಲ್ಲಿ ಆರಂಭಿಸಿದ ಆರೋಗ್ಯ ಕೇಂದ್ರಕ್ಕೆ ತಂದು ಚಿಕಿತ್ಸೆ ನೀಡಲಾಯಿತು.<br /> <br /> ಕಡಲತೀರದಲ್ಲಿ ಪತ್ತೆಯಾದ ಎರಡು ಮೃತದೇಹಗಳನ್ನು ಆರೋಗ್ಯ ಕೇಂದ್ರದ ಸಿಬ್ಬಂದಿ ಅಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಸಾಗಿಸಿದರು. <br /> <br /> ಕಾರ್ಯಾಚರಣೆ ಪ್ರಾರಂಭವಾದ ಕೆಲವೇ ಹೊತ್ತಿನಲ್ಲಿ ಸುರಿದ ಮಳೆ ಅಣಕು ಕಾರ್ಯಚರಣೆಗೆ ಅಡ್ಡಿಯನ್ನುಂಟು ಮಾಡಿತು. ಮಳೆಯಲ್ಲೇ ನೆನೆಯುತ್ತಲೇ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು. <br /> <br /> ಅಣಕು ಪ್ರದರ್ಶನದ ವೇಳೆ ಸಾರ್ವಜನಿಕರು ಭಯಪಡದಂತೆ ಧ್ವನಿ ವರ್ಧಕದ ಮೂಲಕ ಸೂಚನೆ ನೀಡಲಾಗುತ್ತಿತ್ತು. <br /> <br /> ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಭಾಷ ಗುಡಿಮನಿ, ಉಪವಿಭಾಗಾಧಿಕಾರಿ ಪುಷ್ಪಲತಾ, ತಹಶೀಲ್ದಾರ ಸಾಜಿದ್ ಮುಲ್ಲಾ, ನಗರಸಭೆ ಆಯುಕ್ತ ಉದಯಕುಮಾರ ಶೆಟ್ಟಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>