<p>ಬೀದರ್: ಔರಾದ್ ತಾಲ್ಲೂಕಿನ ಚಿಕ್ಲಿ(ಯು) ಗ್ರಾಮದಲ್ಲಿ ಜಲ ನಿರ್ಮಲ ಯೋಜನೆಯಡಿ ತೋಡಲಾಗಿರುವ ಬಾವಿಯಲ್ಲಿ ನೀರಿಲ್ಲದಿದ್ದರೂ ಪೈಪ್ಲೈನ್ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಗ್ರಾಮದ ಸಮಾಜ ಸೇವಕ ಎಂ.ಡಿ. ಗುಲಾಂ ದಸ್ತಗೀರ್ ಆಪಾದಿಸಿದ್ದಾರೆ.<br /> <br /> ಗ್ರಾಮದಲ್ಲಿ ಕುಡಿಯುವ ನೀರಿನ ಶಾಶ್ವತ ವ್ಯವಸ್ಥೆ ಕಲ್ಪಿಸಲು ಯೋಜನೆಯಡಿ 1 ಕೋಟಿ 9 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಸದ್ಯ ತೋಡಲಾಗಿರುವ ಬಾವಿಯಲ್ಲಿ ನೀರೇ ಇಲ್ಲ. ಆದರೂ ಸಾಕಷ್ಟು ನೀರಿದೆ ಎಂಬ ಕಾರಣ ನೀಡಿ ಪೈಪ್ಲೈನ್ ಹಾಕಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ದೂರಿದ್ದಾರೆ.<br /> <br /> ಜೆಸಿಬಿ ಬಳಸಿ ಪೈಪ್ಲೈನ್ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದರಿಂದಾಗಿ ಗ್ರಾಮದಲ್ಲಿನ ಸಿಸಿ ರಸ್ತೆಗಳು ಹಾಳಾಗುತ್ತಿವೆ ಎಂದು ಆರೋಪಿಸಿದ್ದಾರೆ. ಯೋಜನೆಯಡಿ ತೊಡಲಾಗಿರುವ ಬಾವಿ ವಿಫಲವಾಗಿರುವುದು ಸಾಬೀತಾಗಿದೆ. ಇದೇ ಕಾರಣಕ್ಕಾಗಿ ಎರಡನೇ ಬಾರಿ ಮತ್ತೆ ಐದು ಮೀಟರ್ ಕಾಮಗಾರಿ ಕೈಗೊಳ್ಳಲಾಗಿದೆ. <br /> <br /> ಬಾವಿಯ ಪಕ್ಕದಲ್ಲಿ ಬೋರ್ವೆಲ್ ಹಾಕಿದರೂ 2 ಇಂಚ್ ನೀರು ಸಹ ದೊರೆತಿಲ್ಲ ಎಂದು ಆಪಾದಿಸಿದ್ದಾರೆ. <br /> ಮುಂದಿನ ವರ್ಷದ ಜೂನ್ವರೆಗೆ ಬಾವಿ ಬಗ್ಗೆ ಪರಿಶೀಲನೆ ನಡೆಸಬೇಕು. ಅನಂತರವೇ ಪೈಪ್ಲೈನ್ ಕಾಮಗಾರಿ ಮುಂದುವರೆಸಬೇಕು. ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಔರಾದ್ ತಾಲ್ಲೂಕಿನ ಚಿಕ್ಲಿ(ಯು) ಗ್ರಾಮದಲ್ಲಿ ಜಲ ನಿರ್ಮಲ ಯೋಜನೆಯಡಿ ತೋಡಲಾಗಿರುವ ಬಾವಿಯಲ್ಲಿ ನೀರಿಲ್ಲದಿದ್ದರೂ ಪೈಪ್ಲೈನ್ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಗ್ರಾಮದ ಸಮಾಜ ಸೇವಕ ಎಂ.ಡಿ. ಗುಲಾಂ ದಸ್ತಗೀರ್ ಆಪಾದಿಸಿದ್ದಾರೆ.<br /> <br /> ಗ್ರಾಮದಲ್ಲಿ ಕುಡಿಯುವ ನೀರಿನ ಶಾಶ್ವತ ವ್ಯವಸ್ಥೆ ಕಲ್ಪಿಸಲು ಯೋಜನೆಯಡಿ 1 ಕೋಟಿ 9 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಸದ್ಯ ತೋಡಲಾಗಿರುವ ಬಾವಿಯಲ್ಲಿ ನೀರೇ ಇಲ್ಲ. ಆದರೂ ಸಾಕಷ್ಟು ನೀರಿದೆ ಎಂಬ ಕಾರಣ ನೀಡಿ ಪೈಪ್ಲೈನ್ ಹಾಕಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ದೂರಿದ್ದಾರೆ.<br /> <br /> ಜೆಸಿಬಿ ಬಳಸಿ ಪೈಪ್ಲೈನ್ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದರಿಂದಾಗಿ ಗ್ರಾಮದಲ್ಲಿನ ಸಿಸಿ ರಸ್ತೆಗಳು ಹಾಳಾಗುತ್ತಿವೆ ಎಂದು ಆರೋಪಿಸಿದ್ದಾರೆ. ಯೋಜನೆಯಡಿ ತೊಡಲಾಗಿರುವ ಬಾವಿ ವಿಫಲವಾಗಿರುವುದು ಸಾಬೀತಾಗಿದೆ. ಇದೇ ಕಾರಣಕ್ಕಾಗಿ ಎರಡನೇ ಬಾರಿ ಮತ್ತೆ ಐದು ಮೀಟರ್ ಕಾಮಗಾರಿ ಕೈಗೊಳ್ಳಲಾಗಿದೆ. <br /> <br /> ಬಾವಿಯ ಪಕ್ಕದಲ್ಲಿ ಬೋರ್ವೆಲ್ ಹಾಕಿದರೂ 2 ಇಂಚ್ ನೀರು ಸಹ ದೊರೆತಿಲ್ಲ ಎಂದು ಆಪಾದಿಸಿದ್ದಾರೆ. <br /> ಮುಂದಿನ ವರ್ಷದ ಜೂನ್ವರೆಗೆ ಬಾವಿ ಬಗ್ಗೆ ಪರಿಶೀಲನೆ ನಡೆಸಬೇಕು. ಅನಂತರವೇ ಪೈಪ್ಲೈನ್ ಕಾಮಗಾರಿ ಮುಂದುವರೆಸಬೇಕು. ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>