<p><strong>ಯಳಂದೂರು:</strong> ಅಕ್ರಮವಾಗಿ ಮಾರಾಟವಾಗುವ ಮದ್ಯ, ಪವಿತ್ರವಾದ ರಥಬೀದಿಯಲ್ಲಿ ಬಿದ್ದ ಮದ್ಯದ ಬಾಟಲಿಗಳು. ಎಲ್ಲೆಂದರಲ್ಲಿ ಹರಡಿರುವ ಪ್ಲಾಸ್ಟಿಕ್ ತ್ಯಾಜ್ಯ. ಬೀದಿ ಬದಿಯ ಚರಂಡಿಯಲ್ಲಿ ತುಂಬಿರುವ ಹೂಳು. ಕೆಟ್ಟು ನಿಂತಿರುವ ಕೈಪಂಪುಗಳು...<br /> <br /> ಇದು ತಾಲ್ಲೂಕಿನ ಪುರಾಣಪ್ರಸಿದ್ಧ ಕ್ಷೇತ್ರ ಬಿಳಿಗಿರಿರಂಗನಬೆಟ್ಟದ ರಥದ ಬೀದಿಯಲ್ಲಿನ ನಿತ್ಯ ನರಕ ದರ್ಶನ. ಹುಲಿ ಸಂರಕ್ಷಿತಾರಣ್ಯಕ್ಕೆ ಸೇರಿರುವ ಬಿ.ಆರ್. ಹಿಲ್ಸ್ನಲ್ಲಿ ಈಚೆಗೆ ಮದ್ಯಪಾನ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಬಳಕೆಯೂ ನಿರ್ಬಂಧಿತ. ಆದರೆ ಇದೆಲ್ಲಾ ಕೇವಲ ಘೋಷಣೆಗಳಿಗೆ ಸೀಮಿತವಾಗಿವೆ. <br /> <br /> `ಬೀದಿ ಬದಿಯಲ್ಲಿರುವ ಮಂಟಪಗಳನ್ನು ರಥೋತ್ಸವದ ಸಮಯದಲ್ಲಿ ಅರವಟಿಗೆಗಳನ್ನಾಗಿ ಮಾಡಿಕೊಂಡು, ವಿವಿಧ ಗ್ರಾಮದ ಜನರು ಬಳಸುತ್ತಾರೆ. ಆದರೆ ನಂತರದ ದಿನಗಳಲ್ಲಿ ಇಲ್ಲಿಗೆ ಅಗಮಿಸುವ ಕೆಲವು ಕಿಡಿಗೇಡಿಗಳು ಇವನ್ನು ಕುಡಿಯುವ ತಾಣಗಳನ್ನಾಗಿ ಪರಿವರ್ತಿಸಿ, ರಾತ್ರಿ ವೇಳೆ ಗದ್ದಲ ಮಾಡುತ್ತಾರೆ. ಇದರಿಂದ ದೇವಸ್ಥಾನದ ಪಾವಿತ್ರ್ಯಕ್ಕೂ ಧಕ್ಕೆಯಾಗಿದೆ~ ಎಂದು ವಾಲ್ಮೀಕಿ ನಾಯಕರ ಸಂಘದ ಪದಾಧಿಕಾರಿಗಳು ದೂರುತ್ತಾರೆ. <br /> <br /> ಇಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಹೀಗಾಗಿ ಈ ತ್ಯಾಜ್ಯ ವಿಲೇವಾರಿಯಾಗದೆ, ರಸ್ತೆಯ ಅಕ್ಕಪಕ್ಕದ ಚರಂಡಿಗಳನ್ನು ಆವರಿಸಿಕೊಳ್ಳುತ್ತಿದೆ. ಮಳೆಗಾಲ ಆರಂಭವಾದರೆ ಈ ತ್ಯಾಜ್ಯ ಕಾಡು ಸೇರಿ ವನ್ಯಜೀವಿಗಳ ಹೊಟ್ಟೆ ಸೇರುವ ಅಪಾಯವಿದೆ.<br /> <br /> ಕೆಲವು ಕಡೆ ಕೈಪಂಪುಗಳು ದುರಸ್ತಿ ಕಾಣದೆ ನಿಂತಿವೆ. ಇದರಿಂದ ಜನರು ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಂಗಡಿ ನಾಗೇಂದ್ರ ದೂರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು:</strong> ಅಕ್ರಮವಾಗಿ ಮಾರಾಟವಾಗುವ ಮದ್ಯ, ಪವಿತ್ರವಾದ ರಥಬೀದಿಯಲ್ಲಿ ಬಿದ್ದ ಮದ್ಯದ ಬಾಟಲಿಗಳು. ಎಲ್ಲೆಂದರಲ್ಲಿ ಹರಡಿರುವ ಪ್ಲಾಸ್ಟಿಕ್ ತ್ಯಾಜ್ಯ. ಬೀದಿ ಬದಿಯ ಚರಂಡಿಯಲ್ಲಿ ತುಂಬಿರುವ ಹೂಳು. ಕೆಟ್ಟು ನಿಂತಿರುವ ಕೈಪಂಪುಗಳು...<br /> <br /> ಇದು ತಾಲ್ಲೂಕಿನ ಪುರಾಣಪ್ರಸಿದ್ಧ ಕ್ಷೇತ್ರ ಬಿಳಿಗಿರಿರಂಗನಬೆಟ್ಟದ ರಥದ ಬೀದಿಯಲ್ಲಿನ ನಿತ್ಯ ನರಕ ದರ್ಶನ. ಹುಲಿ ಸಂರಕ್ಷಿತಾರಣ್ಯಕ್ಕೆ ಸೇರಿರುವ ಬಿ.ಆರ್. ಹಿಲ್ಸ್ನಲ್ಲಿ ಈಚೆಗೆ ಮದ್ಯಪಾನ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಬಳಕೆಯೂ ನಿರ್ಬಂಧಿತ. ಆದರೆ ಇದೆಲ್ಲಾ ಕೇವಲ ಘೋಷಣೆಗಳಿಗೆ ಸೀಮಿತವಾಗಿವೆ. <br /> <br /> `ಬೀದಿ ಬದಿಯಲ್ಲಿರುವ ಮಂಟಪಗಳನ್ನು ರಥೋತ್ಸವದ ಸಮಯದಲ್ಲಿ ಅರವಟಿಗೆಗಳನ್ನಾಗಿ ಮಾಡಿಕೊಂಡು, ವಿವಿಧ ಗ್ರಾಮದ ಜನರು ಬಳಸುತ್ತಾರೆ. ಆದರೆ ನಂತರದ ದಿನಗಳಲ್ಲಿ ಇಲ್ಲಿಗೆ ಅಗಮಿಸುವ ಕೆಲವು ಕಿಡಿಗೇಡಿಗಳು ಇವನ್ನು ಕುಡಿಯುವ ತಾಣಗಳನ್ನಾಗಿ ಪರಿವರ್ತಿಸಿ, ರಾತ್ರಿ ವೇಳೆ ಗದ್ದಲ ಮಾಡುತ್ತಾರೆ. ಇದರಿಂದ ದೇವಸ್ಥಾನದ ಪಾವಿತ್ರ್ಯಕ್ಕೂ ಧಕ್ಕೆಯಾಗಿದೆ~ ಎಂದು ವಾಲ್ಮೀಕಿ ನಾಯಕರ ಸಂಘದ ಪದಾಧಿಕಾರಿಗಳು ದೂರುತ್ತಾರೆ. <br /> <br /> ಇಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಹೀಗಾಗಿ ಈ ತ್ಯಾಜ್ಯ ವಿಲೇವಾರಿಯಾಗದೆ, ರಸ್ತೆಯ ಅಕ್ಕಪಕ್ಕದ ಚರಂಡಿಗಳನ್ನು ಆವರಿಸಿಕೊಳ್ಳುತ್ತಿದೆ. ಮಳೆಗಾಲ ಆರಂಭವಾದರೆ ಈ ತ್ಯಾಜ್ಯ ಕಾಡು ಸೇರಿ ವನ್ಯಜೀವಿಗಳ ಹೊಟ್ಟೆ ಸೇರುವ ಅಪಾಯವಿದೆ.<br /> <br /> ಕೆಲವು ಕಡೆ ಕೈಪಂಪುಗಳು ದುರಸ್ತಿ ಕಾಣದೆ ನಿಂತಿವೆ. ಇದರಿಂದ ಜನರು ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಂಗಡಿ ನಾಗೇಂದ್ರ ದೂರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>