<p><strong>ನವದೆಹಲಿ (ಪಿಟಿಐ):</strong> ಸಲಹಾ ಸಂಸ್ಥೆ ಆಯ್ಕೆ ಮಾಡುವ ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡವು ಗುರುವಾರ ಬಿಇಎಂಎಲ್ ಅಧ್ಯಕ್ಷ ವಿ.ಆರ್. ಎಸ್. ನಟರಾಜನ್ ಅವರ ನಿವಾಸ ಸೇರಿದಂತೆ ವಿವಿಧೆಡೆಯಲ್ಲಿ ತಪಾಸಣೆಯನ್ನು ನಡೆಸಿತು.</p>.<p>ಗುರುವಾರ ಬೆಳಿಗ್ಗೆ ನಟರಾಜನ್ ಅವರ ಮನೆಯಲ್ಲಿ ಶೋಧನಾ ಕಾರ್ಯಾಚರಣೆಯನ್ನು ಕೈಗೊಂಡ ಸಿಬಿಐ ಅಧಿಕಾರಿಗಳ ತಂಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿತು.<br /> <br /> ಬೆಂಗಳೂರು ಮತ್ತು ಕೊಯಂಬತ್ತೂರಿನ ವಿವಿಧ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳ ತಂಡವು ಶೋಧನೆಯನ್ನು ನಡೆಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. </p>.<p>ಸಲಹಾ ಸಂಸ್ಥೆ ಆಯ್ಕೆ ಮಾಡುವ ಟೆಂಡರ್ ಪ್ರಕ್ರಿಯೆಯಲ್ಲಿ ಹೆಚ್ಚು ಅಕ್ರಮ ನಡೆದಿದ್ದು, ಇದರಲ್ಲಿ ನಟರಾಜನ್ ಅವರು ಭಾಗಿಯಾಗಿದ್ದಾರೆ ಎನ್ನುವ ಆರೋಪದ ಅಡಿಯಲ್ಲಿ ಸಿಬಿಐ ಅಧಿಕಾರಿಗಳ ತಂಡವು ಈ ತಪಾಸಣೆಯನ್ನು ನಡೆಸಿದೆ ಎಂದು ಮೂಲಗಳು ತಿಳಿಸಿವೆ. <br /> <br /> ಸೇನೆಗೆ ಟಟ್ರಾ ಟ್ರಕ್ ಪೂರೈಸುವಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಈಗಾಗಲೇ ನಟರಾಜನ್ ಅವರನ್ನು ಈ ಹಿಂದೆ ವಿಚಾರಣೆಗೆ ಒಳಪಡಿಸಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಸಲಹಾ ಸಂಸ್ಥೆ ಆಯ್ಕೆ ಮಾಡುವ ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡವು ಗುರುವಾರ ಬಿಇಎಂಎಲ್ ಅಧ್ಯಕ್ಷ ವಿ.ಆರ್. ಎಸ್. ನಟರಾಜನ್ ಅವರ ನಿವಾಸ ಸೇರಿದಂತೆ ವಿವಿಧೆಡೆಯಲ್ಲಿ ತಪಾಸಣೆಯನ್ನು ನಡೆಸಿತು.</p>.<p>ಗುರುವಾರ ಬೆಳಿಗ್ಗೆ ನಟರಾಜನ್ ಅವರ ಮನೆಯಲ್ಲಿ ಶೋಧನಾ ಕಾರ್ಯಾಚರಣೆಯನ್ನು ಕೈಗೊಂಡ ಸಿಬಿಐ ಅಧಿಕಾರಿಗಳ ತಂಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿತು.<br /> <br /> ಬೆಂಗಳೂರು ಮತ್ತು ಕೊಯಂಬತ್ತೂರಿನ ವಿವಿಧ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳ ತಂಡವು ಶೋಧನೆಯನ್ನು ನಡೆಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. </p>.<p>ಸಲಹಾ ಸಂಸ್ಥೆ ಆಯ್ಕೆ ಮಾಡುವ ಟೆಂಡರ್ ಪ್ರಕ್ರಿಯೆಯಲ್ಲಿ ಹೆಚ್ಚು ಅಕ್ರಮ ನಡೆದಿದ್ದು, ಇದರಲ್ಲಿ ನಟರಾಜನ್ ಅವರು ಭಾಗಿಯಾಗಿದ್ದಾರೆ ಎನ್ನುವ ಆರೋಪದ ಅಡಿಯಲ್ಲಿ ಸಿಬಿಐ ಅಧಿಕಾರಿಗಳ ತಂಡವು ಈ ತಪಾಸಣೆಯನ್ನು ನಡೆಸಿದೆ ಎಂದು ಮೂಲಗಳು ತಿಳಿಸಿವೆ. <br /> <br /> ಸೇನೆಗೆ ಟಟ್ರಾ ಟ್ರಕ್ ಪೂರೈಸುವಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಈಗಾಗಲೇ ನಟರಾಜನ್ ಅವರನ್ನು ಈ ಹಿಂದೆ ವಿಚಾರಣೆಗೆ ಒಳಪಡಿಸಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>