<p>ಬೆಂಗಳೂರು: ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಇಲಾಖೆ ಸಹಯೋಗದಲ್ಲಿ ಮುಂಬೈಯಲ್ಲಿ ಶುಕ್ರವಾರ ನಡೆದ `ಭಾರತ ರಸ್ತೆ ಸಾರಿಗೆ ಪ್ರಶಸ್ತಿ 2012~ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಾಹನ ಸಾರಿಗೆಯಲ್ಲಿ ಉತ್ಕೃಷ್ಟತೆ ಕಾರ್ಯಾಚರಣೆ ವಿಭಾಗದ ದಕ್ಷಿಣ ವಲಯ ಪ್ರಶಸ್ತಿಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಪ್ರದಾನ ಮಾಡಲಾಯಿತು. <br /> <br /> ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಕೆ.ಆರ್.ಶ್ರೀನಿವಾಸ್ ಹಾಗೂ ಮುಖ್ಯ ವ್ಯವಸ್ಥಾಪಕ ಡಾ.ಕೆ.ಎನ್.ಇಂಗಳಗಿ ಪ್ರಶಸ್ತಿ ಸ್ವೀಕರಿಸಿದರು. ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವ ಜಿತಿನ್ ಪ್ರಸಾದ್, ಉಪಾಧ್ಯಕ್ಷ ಪ್ರವೀಣ್, ಸಾರಿಗೆ ಇಲಾಖೆಯ ಹಣಕಾಸು ವಿಭಾಗದ ಅಧಿಕಾರಿ ಶ್ರೀರಾಮ್, ಪಿ.ಕೆ. ಚೌಧರಿ ಉಪಸ್ಥಿತರಿದ್ದರು. <br /> <br /> ಉತ್ಕೃಷ್ಟತೆ ಕಾರ್ಯಾಚರಣೆ, ಪರಿಸರ ರಕ್ಷಣೆ, ಪ್ರಯಾಣಿಕರ ಇಚ್ಛೆ, ಸ್ವ- ಆಡಳಿತ ಸೇರಿದಂತೆ ಆರು ವಿಭಾಗಗಳಲ್ಲಿ ರಸ್ತೆ ಸಾರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ನವೀನ ಆವಿಷ್ಕಾರ ಅಳವಡಿಕೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಇಲಾಖೆ ಸಹಯೋಗದಲ್ಲಿ ಮುಂಬೈಯಲ್ಲಿ ಶುಕ್ರವಾರ ನಡೆದ `ಭಾರತ ರಸ್ತೆ ಸಾರಿಗೆ ಪ್ರಶಸ್ತಿ 2012~ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಾಹನ ಸಾರಿಗೆಯಲ್ಲಿ ಉತ್ಕೃಷ್ಟತೆ ಕಾರ್ಯಾಚರಣೆ ವಿಭಾಗದ ದಕ್ಷಿಣ ವಲಯ ಪ್ರಶಸ್ತಿಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಪ್ರದಾನ ಮಾಡಲಾಯಿತು. <br /> <br /> ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಕೆ.ಆರ್.ಶ್ರೀನಿವಾಸ್ ಹಾಗೂ ಮುಖ್ಯ ವ್ಯವಸ್ಥಾಪಕ ಡಾ.ಕೆ.ಎನ್.ಇಂಗಳಗಿ ಪ್ರಶಸ್ತಿ ಸ್ವೀಕರಿಸಿದರು. ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವ ಜಿತಿನ್ ಪ್ರಸಾದ್, ಉಪಾಧ್ಯಕ್ಷ ಪ್ರವೀಣ್, ಸಾರಿಗೆ ಇಲಾಖೆಯ ಹಣಕಾಸು ವಿಭಾಗದ ಅಧಿಕಾರಿ ಶ್ರೀರಾಮ್, ಪಿ.ಕೆ. ಚೌಧರಿ ಉಪಸ್ಥಿತರಿದ್ದರು. <br /> <br /> ಉತ್ಕೃಷ್ಟತೆ ಕಾರ್ಯಾಚರಣೆ, ಪರಿಸರ ರಕ್ಷಣೆ, ಪ್ರಯಾಣಿಕರ ಇಚ್ಛೆ, ಸ್ವ- ಆಡಳಿತ ಸೇರಿದಂತೆ ಆರು ವಿಭಾಗಗಳಲ್ಲಿ ರಸ್ತೆ ಸಾರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ನವೀನ ಆವಿಷ್ಕಾರ ಅಳವಡಿಕೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>