<p><strong>ಬೆಂಗಳೂರು: </strong>ಮೆಜೆಸ್ಟಿಕ್ ನಿಲ್ದಾಣದ ಪ್ಲಾಟ್ಫಾರಂ 21ರಲ್ಲಿ ನಿಂತಿದ್ದ ಬಿಎಂಟಿಸಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಮಂಗಳವಾರ ಮಧ್ಯಾಹ್ನ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.<br /> <br /> ದೀಪಾಂಜಲಿನಗರ ಡಿಪೊಗೆ ಸೇರಿದ ಬಸ್ (ಕೆಎ 01 6868), ಮಧ್ಯಾಹ್ನ 12.10ಕ್ಕೆ ಮೆಜೆಸ್ಟಿಕ್ ನಿಲ್ದಾಣದಿಂದ ಪೀಣ್ಯಕ್ಕೆ ಹೊರಡುವ ತಯಾರಿಯಲ್ಲಿತ್ತು. ಈ ವೇಳೆ ಎಂಜಿನ್ನಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಹೊಗೆ ಬರಲಾರಂಭಿಸಿದೆ. ಕೂಡಲೇ ಚಾಲಕ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರನ್ನು ಕೆಳಗಿಳಿಸಿ, ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ (101) ಕರೆ ಮಾಡಿದ್ದಾರೆ.<br /> <br /> ಸ್ವಲ್ಪ ಸಮಯದಲ್ಲೇ ಬಸ್ನ ಮುಂಭಾಗ ಹೊತ್ತಿ ಉರಿದಿದೆ. ಒಂದು ವಾಹನದಲ್ಲಿ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ, 15 ನಿಮಿಷ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.<br /> <br /> ‘ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ಸನ್ನು ಡಿಪೊಗೆ ಕಳುಹಿಸಲಾಗಿದೆ. ಘಟನೆಗೆ ನಿರ್ದಿಷ್ಟ ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ವರದಿ ಕೊಡುವಂತೆ ಬಿಎಂಟಿಸಿ ತಾಂತ್ರಿಕ ವಿಭಾಗಕ್ಕೆ ಸೂಚಿಸಿದ್ದೇವೆ’ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮೆಜೆಸ್ಟಿಕ್ ನಿಲ್ದಾಣದ ಪ್ಲಾಟ್ಫಾರಂ 21ರಲ್ಲಿ ನಿಂತಿದ್ದ ಬಿಎಂಟಿಸಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಮಂಗಳವಾರ ಮಧ್ಯಾಹ್ನ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.<br /> <br /> ದೀಪಾಂಜಲಿನಗರ ಡಿಪೊಗೆ ಸೇರಿದ ಬಸ್ (ಕೆಎ 01 6868), ಮಧ್ಯಾಹ್ನ 12.10ಕ್ಕೆ ಮೆಜೆಸ್ಟಿಕ್ ನಿಲ್ದಾಣದಿಂದ ಪೀಣ್ಯಕ್ಕೆ ಹೊರಡುವ ತಯಾರಿಯಲ್ಲಿತ್ತು. ಈ ವೇಳೆ ಎಂಜಿನ್ನಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಹೊಗೆ ಬರಲಾರಂಭಿಸಿದೆ. ಕೂಡಲೇ ಚಾಲಕ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರನ್ನು ಕೆಳಗಿಳಿಸಿ, ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ (101) ಕರೆ ಮಾಡಿದ್ದಾರೆ.<br /> <br /> ಸ್ವಲ್ಪ ಸಮಯದಲ್ಲೇ ಬಸ್ನ ಮುಂಭಾಗ ಹೊತ್ತಿ ಉರಿದಿದೆ. ಒಂದು ವಾಹನದಲ್ಲಿ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ, 15 ನಿಮಿಷ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.<br /> <br /> ‘ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ಸನ್ನು ಡಿಪೊಗೆ ಕಳುಹಿಸಲಾಗಿದೆ. ಘಟನೆಗೆ ನಿರ್ದಿಷ್ಟ ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ವರದಿ ಕೊಡುವಂತೆ ಬಿಎಂಟಿಸಿ ತಾಂತ್ರಿಕ ವಿಭಾಗಕ್ಕೆ ಸೂಚಿಸಿದ್ದೇವೆ’ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>