<p><strong>ನವದೆಹಲಿ (ಪಿಟಿಐ):</strong> ಬಿಜೆಪಿಯೊಂದಿಗೆ ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ವಿಲೀನಗೊಳ್ಳುವ ಅಥವಾ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ವಿರೋಧಿಸಿದ್ದಾರೆ.<br /> <br /> ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಸುಷ್ಮಾ, ಬಳ್ಳಾರಿಯ ‘ಕಳಂಕಿತ’ ರೆಡ್ಡಿ ಸಹೋದರರು ಬಿಎಸ್ಆರ್ನ ಭಾಗವಾಗಿದ್ದು, ಅಂಥವರು ಪಕ್ಷದೊಂದಿಗೆ ಗುರುತಿಸಿಕೊಳ್ಳಲು ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.<br /> <br /> ಬಿಜೆಪಿ ತೊರೆದ ಎರಡು ವರ್ಷದ ಬಳಿಕ, ಮತ್ತೆ ತಮ್ಮ ಮಾತೃಪಕ್ಷಕ್ಕೆ ಮರಳುವುದಾಗಿ ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ ಶ್ರೀರಾಮುಲು ಬುಧವಾರ ಬಳ್ಳಾರಿಯಲ್ಲಿ ಘೋಷಿಸಿದ್ದರು. <br /> <br /> <strong>ರಾಜ್ಯ ಬಿಜೆಪಿಯಲ್ಲಿ ಗೊಂದಲ (ಬೆಂಗಳೂರು ವರದಿ):</strong> ‘ಬಿ.ಎಸ್.ಆರ್ ಕಾಂಗ್ರೆಸ್ನ ಬಿ. ಶ್ರೀರಾಮುಲು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ’ ಎಂದು ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿರುವುದು ರಾಜ್ಯ ನಾಯಕರಲ್ಲಿ ಗೊಂದಲ ಮೂಡಿಸಿದೆ.<br /> <br /> ಬಿ.ಎಸ್.ಆರ್ ಕಾಂಗ್ರೆಸ್ ಪಕ್ಷವನ್ನು ಶ್ರೀರಾಮುಲು ಅವರು ಇನ್ನೇನು ಬಿಜೆಪಿಯಲ್ಲಿ ವಿಲೀನ ಮಾಡುತ್ತಾರೆ ಎನ್ನುವಾಗ ಈ ರೀತಿಯ ಹೇಳಿಕೆ ಹೊರ ಬಿದ್ದಿರುವುದರಿಂದ ಬಿಜೆಪಿ ನಾಯಕರಿಗೆ ದಿಕ್ಕುತೋಚದಂತೆ ಆಗಿದೆ. ಹೈಕಮಾಂಡ್ ಮನವೊಲಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.<br /> <br /> ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಶನಿವಾರ ದೆಹಲಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಭಾಗವಹಿಸಲು ರಾಜ್ಯದ ಪ್ರಮುಖರು ದೆಹಲಿಗೆ ತೆರಳುತ್ತಿದ್ದು, ಆ ವೇಳೆ ಈ ಕುರಿತು ವರಿಷ್ಠರ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ಗೊತ್ತಾಗಿದೆ.<br /> <br /> ‘ಯಡಿಯೂರಪ್ಪ ಸೇರ್ಪಡೆಗೂ ಬಿಜೆಪಿಯಲ್ಲಿ ಕೆಲವರಿಗೆ ಇಷ್ಟ ಇರಲಿಲ್ಲ. ಅದರ ನಂತರವೂ ಅವರನ್ನು ಸೇರಿಸಿಕೊಳ್ಳಲಾಯಿತು. ಹಾಗೆಯೇ ಶ್ರೀರಾಮುಲು ಪ್ರಕರಣದಲ್ಲೂ ಆಗುತ್ತದೆ’ ಎಂದು ಮುಖಂಡರೊಬ್ಬರು ತಿಳಿಸಿದರು.<br /> <br /> ಪ್ರತಿಕ್ರಿಯೆಗೆ ಸಿಗದ ಶ್ರೀರಾಮುಲು (ಬಳ್ಳಾರಿ): ಬಿಜೆಪಿಯೊಂದಿಗೆ ಬಿಎಸ್ಆರ್ ಕಾಂಗ್ರೆಸ್ ವಿಲೀನಕ್ಕೆ ಸುಷ್ಮಾ ಸ್ವರಾಜ್ ಗುರುವಾರ ತೀವ್ರ ವಿರೋಧ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯೆ ನೀಡಲು ಶಾಸಕ ಬಿ.ಶ್ರೀರಾಮುಲು ಲಭ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಬಿಜೆಪಿಯೊಂದಿಗೆ ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ವಿಲೀನಗೊಳ್ಳುವ ಅಥವಾ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ವಿರೋಧಿಸಿದ್ದಾರೆ.<br /> <br /> ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಸುಷ್ಮಾ, ಬಳ್ಳಾರಿಯ ‘ಕಳಂಕಿತ’ ರೆಡ್ಡಿ ಸಹೋದರರು ಬಿಎಸ್ಆರ್ನ ಭಾಗವಾಗಿದ್ದು, ಅಂಥವರು ಪಕ್ಷದೊಂದಿಗೆ ಗುರುತಿಸಿಕೊಳ್ಳಲು ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.<br /> <br /> ಬಿಜೆಪಿ ತೊರೆದ ಎರಡು ವರ್ಷದ ಬಳಿಕ, ಮತ್ತೆ ತಮ್ಮ ಮಾತೃಪಕ್ಷಕ್ಕೆ ಮರಳುವುದಾಗಿ ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ ಶ್ರೀರಾಮುಲು ಬುಧವಾರ ಬಳ್ಳಾರಿಯಲ್ಲಿ ಘೋಷಿಸಿದ್ದರು. <br /> <br /> <strong>ರಾಜ್ಯ ಬಿಜೆಪಿಯಲ್ಲಿ ಗೊಂದಲ (ಬೆಂಗಳೂರು ವರದಿ):</strong> ‘ಬಿ.ಎಸ್.ಆರ್ ಕಾಂಗ್ರೆಸ್ನ ಬಿ. ಶ್ರೀರಾಮುಲು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ’ ಎಂದು ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿರುವುದು ರಾಜ್ಯ ನಾಯಕರಲ್ಲಿ ಗೊಂದಲ ಮೂಡಿಸಿದೆ.<br /> <br /> ಬಿ.ಎಸ್.ಆರ್ ಕಾಂಗ್ರೆಸ್ ಪಕ್ಷವನ್ನು ಶ್ರೀರಾಮುಲು ಅವರು ಇನ್ನೇನು ಬಿಜೆಪಿಯಲ್ಲಿ ವಿಲೀನ ಮಾಡುತ್ತಾರೆ ಎನ್ನುವಾಗ ಈ ರೀತಿಯ ಹೇಳಿಕೆ ಹೊರ ಬಿದ್ದಿರುವುದರಿಂದ ಬಿಜೆಪಿ ನಾಯಕರಿಗೆ ದಿಕ್ಕುತೋಚದಂತೆ ಆಗಿದೆ. ಹೈಕಮಾಂಡ್ ಮನವೊಲಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.<br /> <br /> ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಶನಿವಾರ ದೆಹಲಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಭಾಗವಹಿಸಲು ರಾಜ್ಯದ ಪ್ರಮುಖರು ದೆಹಲಿಗೆ ತೆರಳುತ್ತಿದ್ದು, ಆ ವೇಳೆ ಈ ಕುರಿತು ವರಿಷ್ಠರ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ಗೊತ್ತಾಗಿದೆ.<br /> <br /> ‘ಯಡಿಯೂರಪ್ಪ ಸೇರ್ಪಡೆಗೂ ಬಿಜೆಪಿಯಲ್ಲಿ ಕೆಲವರಿಗೆ ಇಷ್ಟ ಇರಲಿಲ್ಲ. ಅದರ ನಂತರವೂ ಅವರನ್ನು ಸೇರಿಸಿಕೊಳ್ಳಲಾಯಿತು. ಹಾಗೆಯೇ ಶ್ರೀರಾಮುಲು ಪ್ರಕರಣದಲ್ಲೂ ಆಗುತ್ತದೆ’ ಎಂದು ಮುಖಂಡರೊಬ್ಬರು ತಿಳಿಸಿದರು.<br /> <br /> ಪ್ರತಿಕ್ರಿಯೆಗೆ ಸಿಗದ ಶ್ರೀರಾಮುಲು (ಬಳ್ಳಾರಿ): ಬಿಜೆಪಿಯೊಂದಿಗೆ ಬಿಎಸ್ಆರ್ ಕಾಂಗ್ರೆಸ್ ವಿಲೀನಕ್ಕೆ ಸುಷ್ಮಾ ಸ್ವರಾಜ್ ಗುರುವಾರ ತೀವ್ರ ವಿರೋಧ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯೆ ನೀಡಲು ಶಾಸಕ ಬಿ.ಶ್ರೀರಾಮುಲು ಲಭ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>