<p>ಚಿಕ್ಕಮಗಳೂರು: ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬಿಎಸ್ಎನ್ಎಲ್ ನೌಕರರು ಬುಧವಾರ ದೂರಸಂಪರ್ಕ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದರು.<br /> <br /> ದೂರಸಂಪರ್ಕ ಇಲಾಖೆ ಸೇರಿದಂತೆ ಸಾರ್ವಜನಿಕ ಉದ್ದಿಮೆಗಳಲ್ಲಿ ಕೆಲಸ ನಿರ್ವಹಿಸು ತ್ತಿರುವವರಿಗೆ ತುಟ್ಟಿಭತ್ಯೆ ನೀಡುವಂತೆ ಕೇಂದ್ರ ಸರ್ಕಾರ ಆದೇಶ ನೀಡಿದೆ. ಆದರೂ ದೂರ ಸಂಪರ್ಕ ಇಲಾಖೆ ಅನುಸರಿಸುತ್ತಿರುವ ಮಲತಾಯಿ ಧೋರಣೆಯಿಂದ ನೌಕರರಿಗೆ ಮಧ್ಯಂತರ ತುಟ್ಟಿಭತ್ಯೆ ಹೆಚ್ಚಿಸಿಲ್ಲ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.<br /> <br /> ಕೇಂದ್ರ ಸರ್ಕಾರದ ಅನುಮತಿ ಪಡೆದು ಬೇಡಿಕೆ ಈಡೇರಿಸುವ ಭರವಸೆಯನ್ನು ಈ ಹಿಂದೆ ನೀಡಲಾಗಿತ್ತು. ವರ್ಷ ಕಳೆದರೂ ನೀಡಿದ್ದ ಭರವಸೆ ಈಡೇರಿಸಲು ಮುಂದಾಗದಿರುವುದನ್ನು ವಿರೋಧಿಸಿ ಇಲಾಖೆಯ ಹಿರಿಯ ಅಧಿಕಾರಿಗಳ ಗಮನ ಸೆಳೆಯಲು ಸಾಂಕೇತಿಕ ಪ್ರತಿಭಟನೆ ನಡೆಸುತ್ತಿರುವುದಾಗಿ ಪ್ರತಿಭಟನಾನಿರತ ನೌಕರರು ತಿಳಿಸಿದರು.<br /> <br /> ಬೇಡಿಕೆ ಈಡೇರಿಸಲು ಮುಂದಾಗದಿದ್ದರೆ ಇದೇ 12ರಿಂದ ಜಿಲ್ಲೆಯಲ್ಲಿ ಕಾರ್ಯನಿರ್ವ ಹಿಸುತ್ತಿರುವ 450ಕ್ಕೂ ಹೆಚ್ಚು ಬಿಎಸ್ಎನ್ಎಲ್ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಇಲಾಖೆಯ ವಿವಿಧ ಸಂಘಟನೆಗಳ ಮುಖಂಡರು ಹೆಳಿದರು.<br /> ಪ್ರತಿಭಟನಾಕಾರರನ್ನು ಉದ್ದೇಶಿಸಿ ದಿವಾಕರ ಭಟ್ ಮಾತನಾಡಿದರು. ನೌಕರರ ಯೂನಿಯನ್ ವೇದಿಕೆ ಅಧ್ಯಕ್ಷ ಹಿರಿಯಣ್ಣ, ನೌಕರರ ವಿವಿಧ ಸಂಘಟನೆ ಮುಖಂಡ ರಾದ ಮಂಜೇಗೌಡ, ಸುಂದರೇಶ್, ಗೋಪಾಲಕೃಷ್ಣ, ಚಂದ್ರಶೇಖರ ಭಟ್ ಧರಣಿ ಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬಿಎಸ್ಎನ್ಎಲ್ ನೌಕರರು ಬುಧವಾರ ದೂರಸಂಪರ್ಕ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದರು.<br /> <br /> ದೂರಸಂಪರ್ಕ ಇಲಾಖೆ ಸೇರಿದಂತೆ ಸಾರ್ವಜನಿಕ ಉದ್ದಿಮೆಗಳಲ್ಲಿ ಕೆಲಸ ನಿರ್ವಹಿಸು ತ್ತಿರುವವರಿಗೆ ತುಟ್ಟಿಭತ್ಯೆ ನೀಡುವಂತೆ ಕೇಂದ್ರ ಸರ್ಕಾರ ಆದೇಶ ನೀಡಿದೆ. ಆದರೂ ದೂರ ಸಂಪರ್ಕ ಇಲಾಖೆ ಅನುಸರಿಸುತ್ತಿರುವ ಮಲತಾಯಿ ಧೋರಣೆಯಿಂದ ನೌಕರರಿಗೆ ಮಧ್ಯಂತರ ತುಟ್ಟಿಭತ್ಯೆ ಹೆಚ್ಚಿಸಿಲ್ಲ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.<br /> <br /> ಕೇಂದ್ರ ಸರ್ಕಾರದ ಅನುಮತಿ ಪಡೆದು ಬೇಡಿಕೆ ಈಡೇರಿಸುವ ಭರವಸೆಯನ್ನು ಈ ಹಿಂದೆ ನೀಡಲಾಗಿತ್ತು. ವರ್ಷ ಕಳೆದರೂ ನೀಡಿದ್ದ ಭರವಸೆ ಈಡೇರಿಸಲು ಮುಂದಾಗದಿರುವುದನ್ನು ವಿರೋಧಿಸಿ ಇಲಾಖೆಯ ಹಿರಿಯ ಅಧಿಕಾರಿಗಳ ಗಮನ ಸೆಳೆಯಲು ಸಾಂಕೇತಿಕ ಪ್ರತಿಭಟನೆ ನಡೆಸುತ್ತಿರುವುದಾಗಿ ಪ್ರತಿಭಟನಾನಿರತ ನೌಕರರು ತಿಳಿಸಿದರು.<br /> <br /> ಬೇಡಿಕೆ ಈಡೇರಿಸಲು ಮುಂದಾಗದಿದ್ದರೆ ಇದೇ 12ರಿಂದ ಜಿಲ್ಲೆಯಲ್ಲಿ ಕಾರ್ಯನಿರ್ವ ಹಿಸುತ್ತಿರುವ 450ಕ್ಕೂ ಹೆಚ್ಚು ಬಿಎಸ್ಎನ್ಎಲ್ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಇಲಾಖೆಯ ವಿವಿಧ ಸಂಘಟನೆಗಳ ಮುಖಂಡರು ಹೆಳಿದರು.<br /> ಪ್ರತಿಭಟನಾಕಾರರನ್ನು ಉದ್ದೇಶಿಸಿ ದಿವಾಕರ ಭಟ್ ಮಾತನಾಡಿದರು. ನೌಕರರ ಯೂನಿಯನ್ ವೇದಿಕೆ ಅಧ್ಯಕ್ಷ ಹಿರಿಯಣ್ಣ, ನೌಕರರ ವಿವಿಧ ಸಂಘಟನೆ ಮುಖಂಡ ರಾದ ಮಂಜೇಗೌಡ, ಸುಂದರೇಶ್, ಗೋಪಾಲಕೃಷ್ಣ, ಚಂದ್ರಶೇಖರ ಭಟ್ ಧರಣಿ ಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>