<p><strong>ಬೆಂಗಳೂರು:</strong> ಡಿನೋಟಿಫಿಕೇಷನ್ ಹಗರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಗಳವಾರ ಇನ್ನೊಮ್ಮೆ ಬಂಧನದ ಭೀತಿಯಿಂದ ಮುಕ್ತರಾದರು. ಅವರ ಪುತ್ರರು ಷರತ್ತುಗಳ `ಬಂಧನ~ದಿಂದ ಹೊರಕ್ಕೆ ಬಂದಿದ್ದಾರೆ. <br /> <br /> ನಗರದ ನಾಗದೇವನಹಳ್ಳಿ ಬಳಿ ಸ್ವಾಧೀನ ಪಡಿಸಿಕೊಂಡ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಅಕ್ರಮವಾಗಿ ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ನಿರೀಕ್ಷಣಾ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ. <br /> <br /> ಇದೇ ಪ್ರಕರಣದಲ್ಲಿ ಇತರ ಆರೋಪಿಗಳಾಗಿದ್ದ ಸಚಿವ ಸೋಮಣ್ಣ ಹಾಗೂ ಅವರ ಪತ್ನಿ ಶೈಲಜಾ ಅವರಿಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ಆದೇಶಿಸಿದ್ದಾರೆ.<br /> <br /> ಸರ್ವೇ ನಂ.47 ಮತ್ತು 48ರಲ್ಲಿರುವ 3.40 ಎಕರೆ ಜಮೀನಿಗೆ ಸಂಬಂಧಿಸಿದಂತೆ ಇವರು ಅಕ್ರಮ ಎಸಗಿರುವುದಾಗಿ ರವಿಕೃಷ್ಣ ರೆಡ್ಡಿ ಎನ್ನುವವರು ಲೋಕಾಯುಕ್ತ ವಿಶೇಷ ಕೋರ್ಟ್ನಲ್ಲಿ ದೂರು ದಾಖಲು ಮಾಡಿದ್ದರು. ಈ ದೂರಿನ ಅನ್ವಯ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಇವರೆಲ್ಲ ನಿರೀಕ್ಷಣಾ ಜಾಮೀನು ಕೋರಿದ್ದರು. <br /> <br /> <strong>`ನಿಯಮ ಮೀರಿಲ್ಲ~: </strong>`ಇವರ ವಿರುದ್ಧ ದೂರು ದಾಖಲಾಗಿ ಎರಡು ತಿಂಗಳು ಕಳೆಯುತ್ತ ಬಂದಿದೆ. ಆದರೆ ಇದುವರೆಗೆ ಆರೋಪಿಗಳು ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಪ್ರಯತ್ನ ಸೇರಿದಂತೆ ಯಾವುದೇ ರೀತಿಯ ನಿಯಮಗಳನ್ನು ಮೀರಿಲ್ಲ. ಇವರು ಸಮಾಜದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಗಳಾದ ಕಾರಣ ತನಿಖೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. <br /> <br /> ಅದೂ ಅಲ್ಲದೆ, ತನಿಖೆಗೆ ಅಸಹಕಾರ ತೋರುತ್ತಾರೆ ಎಂಬ ಲೋಕಾಯುಕ್ತ ಪರ ವಕೀಲರ ವಾದವನ್ನು ಸದ್ಯದ ಪರಿಸ್ಥಿತಿಯಲ್ಲಿ ಮಾನ್ಯ ಮಾಡಲಾಗದು. ಒಂದು ವೇಳೆ ನಿರೀಕ್ಷಣಾ ಜಾಮೀನು ನೀಡದೆ ಹೋದರೆ ಸಂವಿಧಾನ ಅವರಿಗೆ ನೀಡಿರುವ ಹಕ್ಕನ್ನು ಕಸಿದುಕೊಂಡಂತಾಗುತ್ತದೆ~ ಎಂದು ನ್ಯಾಯಮೂರ್ತಿಗಳು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.<br /> <br /> ಎರಡು ಲಕ್ಷ ರೂಪಾಯಿಗಳ ಬಾಂಡ್, ಅಷ್ಟೇ ಮೊತ್ತದ ಭದ್ರತೆ ನೀಡುವಂತೆ, ಕೋರ್ಟ್ ಅನುಮತಿ ಇಲ್ಲದೆ ಊರು ಬಿಟ್ಟು ಹೋಗದಂತೆ, ಸಾಕ್ಷ್ಯಾಧಾರಗಳನ್ನು ನಾಶಪಡಿಸದಂತೆ ಷರತ್ತು ವಿಧಿಸಲಾಗಿದೆ. ಒಂದು ವೇಳೆ ಇದಾವುದೇ ಷರತ್ತುಗಳನ್ನು ಮೀರಿ ನಡೆದುಕೊಂಡರೆ ಜಾಮೀನು ರದ್ದುಗೊಳ್ಳಲಿದೆ ಎಂದು ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದ್ದಾರೆ.<br /> <br /> ವಕೀಲ ಸಿರಾಜಿನ್ ಬಾಷಾ ಸಲ್ಲಿಸಿರುವ ದೂರಿಗೆ ಸಂಬಂಧಿಸಿದಂತೆಯೂ ಈ ಹಿಂದೆ ಯಡಿಯೂರಪ್ಪನವರಿಗೆ ನಿರೀಕ್ಷಣಾ ಜಾಮೀನು ದೊರಕಿದೆ.<br /> <br /> ಭಾಗಶಃ ಮಾನ್ಯ: ಇನ್ನೊಂದು ಪ್ರಕರಣದಲ್ಲಿ, ತಮಗೆ ಜಾಮೀನು ನೀಡುವಾಗ ವಿಧಿಸಲಾಗಿದ್ದ ಷರತ್ತುಗಳ ಸಡಿಲಿಕೆಗೆ ಕೋರಿ ಯಡಿಯೂರಪ್ಪನವರ ಪುತ್ರರಾದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ವಿಜಯೇಂದ್ರ ಅವರ ಮನವಿಯನ್ನು ಇದೇ ನ್ಯಾಯಮೂರ್ತಿಗಳು ಭಾಗಶಃ ಮಾನ್ಯ ಮಾಡಿದ್ದಾರೆ.<br /> <br /> ಇವರ ಒಡೆತನದ `ಧವಳಗಿರಿ ಪ್ರಾಪರ್ಟೀಸ್~ ಹಾಗೂ `ಭಗತ್ ಹೋಮ್ ಲಿಮಿಟೆಡ್~ ಕಂಪೆನಿಗಳ ಲೆಕ್ಕಪತ್ರಗಳ ದಾಖಲೆ ಮತ್ತು ಇಬ್ಬರ ಬ್ಯಾಂಕ್ ಖಾತೆಗಳ ದಾಖಲೆಗಳನ್ನು ಹಾಜರು ಪಡಿಸುವಂತೆ ಲೋಕಾಯುಕ್ತ ವಿಶೇಷ ಕೋರ್ಟ್ ಷರತ್ತು ವಿಧಿಸಿತ್ತು. ಈ ಷರತ್ತುಗಳನ್ನು ಹೈಕೋರ್ಟ್ ಸಡಿಲಗೊಳಿಸಿದೆ. <br /> <br /> `ತಮ್ಮ ವಾದವನ್ನು ಸಮರ್ಥಿಸಿಕೊಳ್ಳಲು ಆರೋಪಿಗಳಿಗೆ ಈ ದಾಖಲೆಗಳ ಅವಶ್ಯಕತೆ ಇದೆ. ಎಲ್ಲವನ್ನೂ ಅವರೇ ಪೊಲೀಸರ ವಶಕ್ಕೆ ಒಪ್ಪಿಸಿದರೆ, ಸ್ವಂತ ರಕ್ಷಣೆಗೆ ಅವರಿಗೆ ತೊಂದರೆ ಆಗುತ್ತದೆ~ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.<br /> <br /> ಆದರೆ ಪಾಸ್ಪೋರ್ಟ್ ಅನ್ನು ಲೋಕಾಯುಕ್ತ ಪೊಲೀಸರ ವಶಕ್ಕೆ ಒಪ್ಪಿಸುವಂತೆ ವಿಧಿಸಿದ್ದ ಷರತ್ತನ್ನು ಎತ್ತಿಹಿಡಿದ ನ್ಯಾಯಮೂರ್ತಿಗಳು, ಇದರ ಸಡಿಲಿಕೆ ಅಗತ್ಯ ಇಲ್ಲ ಎಂದಿದ್ದಾರೆ.<br /> <br /> ವಿಚಾರಣೆ ಮುಂದಕ್ಕೆ: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತರು ನೀಡಿರುವ ವರದಿ ಆಧಾರದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (ಎಫ್ಐಆರ್) ರದ್ದತಿಗೆ ಕೋರಿ ಯಡಿಯೂರಪ್ಪನವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಡಾ.ಕೆ.ಭಕ್ತವತ್ಸಲ ನೇತೃತ್ವದ ವಿಭಾಗೀಯ ಪೀಠ ಬುಧವಾರಕ್ಕೆ (ಜ.18) ಮುಂದೂಡಿದೆ.<br /> <br /> <strong>ಆನೆ ಕಾರ್ಯಪಡೆ ಕಾಲಾವಕಾಶ</strong><br /> ಆನೆಗಳ ಹಾವಳಿ ತಡೆಗೆ ಕಾರ್ಯಪಡೆ ರಚಿಸಲು ಜ.24ರವರೆಗೆ ಕಾಲಾವಕಾಶ ನೀಡುವಂತೆ ಕೇಂದ್ರ ಸರ್ಕಾರವು ಹೈಕೋರ್ಟನ್ನು ಮಂಗಳವಾರ ಕೋರಿಕೊಂಡಿತು.<br /> <br /> 2009ರಲ್ಲಿ ವಿವಿಧೆಡೆ ನಡೆದ ಆನೆ ಹಾವಳಿಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ಬಂದಿರುವ ವರದಿಗಳ ಆಧಾರದ ಮೇಲೆ ಕೋರ್ಟ್ ಖುದ್ದಾಗಿ ನಡೆಸುತ್ತಿರುವ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಸಮಯ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಡಿನೋಟಿಫಿಕೇಷನ್ ಹಗರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಗಳವಾರ ಇನ್ನೊಮ್ಮೆ ಬಂಧನದ ಭೀತಿಯಿಂದ ಮುಕ್ತರಾದರು. ಅವರ ಪುತ್ರರು ಷರತ್ತುಗಳ `ಬಂಧನ~ದಿಂದ ಹೊರಕ್ಕೆ ಬಂದಿದ್ದಾರೆ. <br /> <br /> ನಗರದ ನಾಗದೇವನಹಳ್ಳಿ ಬಳಿ ಸ್ವಾಧೀನ ಪಡಿಸಿಕೊಂಡ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಅಕ್ರಮವಾಗಿ ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ನಿರೀಕ್ಷಣಾ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ. <br /> <br /> ಇದೇ ಪ್ರಕರಣದಲ್ಲಿ ಇತರ ಆರೋಪಿಗಳಾಗಿದ್ದ ಸಚಿವ ಸೋಮಣ್ಣ ಹಾಗೂ ಅವರ ಪತ್ನಿ ಶೈಲಜಾ ಅವರಿಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ಆದೇಶಿಸಿದ್ದಾರೆ.<br /> <br /> ಸರ್ವೇ ನಂ.47 ಮತ್ತು 48ರಲ್ಲಿರುವ 3.40 ಎಕರೆ ಜಮೀನಿಗೆ ಸಂಬಂಧಿಸಿದಂತೆ ಇವರು ಅಕ್ರಮ ಎಸಗಿರುವುದಾಗಿ ರವಿಕೃಷ್ಣ ರೆಡ್ಡಿ ಎನ್ನುವವರು ಲೋಕಾಯುಕ್ತ ವಿಶೇಷ ಕೋರ್ಟ್ನಲ್ಲಿ ದೂರು ದಾಖಲು ಮಾಡಿದ್ದರು. ಈ ದೂರಿನ ಅನ್ವಯ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಇವರೆಲ್ಲ ನಿರೀಕ್ಷಣಾ ಜಾಮೀನು ಕೋರಿದ್ದರು. <br /> <br /> <strong>`ನಿಯಮ ಮೀರಿಲ್ಲ~: </strong>`ಇವರ ವಿರುದ್ಧ ದೂರು ದಾಖಲಾಗಿ ಎರಡು ತಿಂಗಳು ಕಳೆಯುತ್ತ ಬಂದಿದೆ. ಆದರೆ ಇದುವರೆಗೆ ಆರೋಪಿಗಳು ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಪ್ರಯತ್ನ ಸೇರಿದಂತೆ ಯಾವುದೇ ರೀತಿಯ ನಿಯಮಗಳನ್ನು ಮೀರಿಲ್ಲ. ಇವರು ಸಮಾಜದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಗಳಾದ ಕಾರಣ ತನಿಖೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. <br /> <br /> ಅದೂ ಅಲ್ಲದೆ, ತನಿಖೆಗೆ ಅಸಹಕಾರ ತೋರುತ್ತಾರೆ ಎಂಬ ಲೋಕಾಯುಕ್ತ ಪರ ವಕೀಲರ ವಾದವನ್ನು ಸದ್ಯದ ಪರಿಸ್ಥಿತಿಯಲ್ಲಿ ಮಾನ್ಯ ಮಾಡಲಾಗದು. ಒಂದು ವೇಳೆ ನಿರೀಕ್ಷಣಾ ಜಾಮೀನು ನೀಡದೆ ಹೋದರೆ ಸಂವಿಧಾನ ಅವರಿಗೆ ನೀಡಿರುವ ಹಕ್ಕನ್ನು ಕಸಿದುಕೊಂಡಂತಾಗುತ್ತದೆ~ ಎಂದು ನ್ಯಾಯಮೂರ್ತಿಗಳು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.<br /> <br /> ಎರಡು ಲಕ್ಷ ರೂಪಾಯಿಗಳ ಬಾಂಡ್, ಅಷ್ಟೇ ಮೊತ್ತದ ಭದ್ರತೆ ನೀಡುವಂತೆ, ಕೋರ್ಟ್ ಅನುಮತಿ ಇಲ್ಲದೆ ಊರು ಬಿಟ್ಟು ಹೋಗದಂತೆ, ಸಾಕ್ಷ್ಯಾಧಾರಗಳನ್ನು ನಾಶಪಡಿಸದಂತೆ ಷರತ್ತು ವಿಧಿಸಲಾಗಿದೆ. ಒಂದು ವೇಳೆ ಇದಾವುದೇ ಷರತ್ತುಗಳನ್ನು ಮೀರಿ ನಡೆದುಕೊಂಡರೆ ಜಾಮೀನು ರದ್ದುಗೊಳ್ಳಲಿದೆ ಎಂದು ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದ್ದಾರೆ.<br /> <br /> ವಕೀಲ ಸಿರಾಜಿನ್ ಬಾಷಾ ಸಲ್ಲಿಸಿರುವ ದೂರಿಗೆ ಸಂಬಂಧಿಸಿದಂತೆಯೂ ಈ ಹಿಂದೆ ಯಡಿಯೂರಪ್ಪನವರಿಗೆ ನಿರೀಕ್ಷಣಾ ಜಾಮೀನು ದೊರಕಿದೆ.<br /> <br /> ಭಾಗಶಃ ಮಾನ್ಯ: ಇನ್ನೊಂದು ಪ್ರಕರಣದಲ್ಲಿ, ತಮಗೆ ಜಾಮೀನು ನೀಡುವಾಗ ವಿಧಿಸಲಾಗಿದ್ದ ಷರತ್ತುಗಳ ಸಡಿಲಿಕೆಗೆ ಕೋರಿ ಯಡಿಯೂರಪ್ಪನವರ ಪುತ್ರರಾದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ವಿಜಯೇಂದ್ರ ಅವರ ಮನವಿಯನ್ನು ಇದೇ ನ್ಯಾಯಮೂರ್ತಿಗಳು ಭಾಗಶಃ ಮಾನ್ಯ ಮಾಡಿದ್ದಾರೆ.<br /> <br /> ಇವರ ಒಡೆತನದ `ಧವಳಗಿರಿ ಪ್ರಾಪರ್ಟೀಸ್~ ಹಾಗೂ `ಭಗತ್ ಹೋಮ್ ಲಿಮಿಟೆಡ್~ ಕಂಪೆನಿಗಳ ಲೆಕ್ಕಪತ್ರಗಳ ದಾಖಲೆ ಮತ್ತು ಇಬ್ಬರ ಬ್ಯಾಂಕ್ ಖಾತೆಗಳ ದಾಖಲೆಗಳನ್ನು ಹಾಜರು ಪಡಿಸುವಂತೆ ಲೋಕಾಯುಕ್ತ ವಿಶೇಷ ಕೋರ್ಟ್ ಷರತ್ತು ವಿಧಿಸಿತ್ತು. ಈ ಷರತ್ತುಗಳನ್ನು ಹೈಕೋರ್ಟ್ ಸಡಿಲಗೊಳಿಸಿದೆ. <br /> <br /> `ತಮ್ಮ ವಾದವನ್ನು ಸಮರ್ಥಿಸಿಕೊಳ್ಳಲು ಆರೋಪಿಗಳಿಗೆ ಈ ದಾಖಲೆಗಳ ಅವಶ್ಯಕತೆ ಇದೆ. ಎಲ್ಲವನ್ನೂ ಅವರೇ ಪೊಲೀಸರ ವಶಕ್ಕೆ ಒಪ್ಪಿಸಿದರೆ, ಸ್ವಂತ ರಕ್ಷಣೆಗೆ ಅವರಿಗೆ ತೊಂದರೆ ಆಗುತ್ತದೆ~ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.<br /> <br /> ಆದರೆ ಪಾಸ್ಪೋರ್ಟ್ ಅನ್ನು ಲೋಕಾಯುಕ್ತ ಪೊಲೀಸರ ವಶಕ್ಕೆ ಒಪ್ಪಿಸುವಂತೆ ವಿಧಿಸಿದ್ದ ಷರತ್ತನ್ನು ಎತ್ತಿಹಿಡಿದ ನ್ಯಾಯಮೂರ್ತಿಗಳು, ಇದರ ಸಡಿಲಿಕೆ ಅಗತ್ಯ ಇಲ್ಲ ಎಂದಿದ್ದಾರೆ.<br /> <br /> ವಿಚಾರಣೆ ಮುಂದಕ್ಕೆ: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತರು ನೀಡಿರುವ ವರದಿ ಆಧಾರದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (ಎಫ್ಐಆರ್) ರದ್ದತಿಗೆ ಕೋರಿ ಯಡಿಯೂರಪ್ಪನವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಡಾ.ಕೆ.ಭಕ್ತವತ್ಸಲ ನೇತೃತ್ವದ ವಿಭಾಗೀಯ ಪೀಠ ಬುಧವಾರಕ್ಕೆ (ಜ.18) ಮುಂದೂಡಿದೆ.<br /> <br /> <strong>ಆನೆ ಕಾರ್ಯಪಡೆ ಕಾಲಾವಕಾಶ</strong><br /> ಆನೆಗಳ ಹಾವಳಿ ತಡೆಗೆ ಕಾರ್ಯಪಡೆ ರಚಿಸಲು ಜ.24ರವರೆಗೆ ಕಾಲಾವಕಾಶ ನೀಡುವಂತೆ ಕೇಂದ್ರ ಸರ್ಕಾರವು ಹೈಕೋರ್ಟನ್ನು ಮಂಗಳವಾರ ಕೋರಿಕೊಂಡಿತು.<br /> <br /> 2009ರಲ್ಲಿ ವಿವಿಧೆಡೆ ನಡೆದ ಆನೆ ಹಾವಳಿಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ಬಂದಿರುವ ವರದಿಗಳ ಆಧಾರದ ಮೇಲೆ ಕೋರ್ಟ್ ಖುದ್ದಾಗಿ ನಡೆಸುತ್ತಿರುವ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಸಮಯ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>