<p><strong>ಬೆಂಗಳೂರು: </strong>ಉದ್ಯಮಿಯೊಬ್ಬರಿಗೆ ದೇವನಹಳ್ಳಿ ಕೈಗಾರಿಕೆ ಪ್ರದೇಶದಲ್ಲಿನ 26 ಎಕರೆ ಭೂಮಿ ಹಂಚಿಕೆಯ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ನಿರೀಕ್ಷಣಾ ಜಾಮೀನಿನ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ ಲೋಕಾಯುಕ್ತಕ್ಕೆ ನೋಟಿಸ್ ನೀಡಿದೆ.<br /> <br /> ಉದ್ಯಮಿ ಆಲಂ ಪಾಷಾ ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಬಿ.ಎಸ್. ಯಡಿಯೂರಪ್ಪ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಯಡಿಯೂರಪ್ಪ ಅವರ ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರು ಲೋಕಾಯುಕ್ತ ಹಾಗೂ ಇತರರಿಗೆ ನೋಟಿಸ್ ನೀಡಲು ಆದೇಶಿಸಿದರು.<br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ತಮ್ಮ ಕಂಪೆನಿಗೆ ನೀಡಿದ್ದ ಯೋಜನೆಯನ್ನು ವಾಪಸ್ ಪಡೆದಿದ್ದರು ಎಂದು ಆಲಂ ಪಾಷಾ ದೂರು ಸಲ್ಲಿಸಿದ್ದರು.<br /> <br /> ಸರ್ಕಾರ ಮಧ್ಯಮ ಮತ್ತು ಕೆಳ ವರ್ಗದ ಜನರಿಗೆ ಉತ್ತಮ ಮನೆಗಳನ್ನು ನಿರ್ಮಿಸಲು ಅಂದಾಜು 600 ಕೋಟಿ ಮೊತ್ತದ ಯೋಜನೆಯನ್ನು `ಪಾಷ್ ಸ್ಪೇಸ್ ಇಂಟರ್ನ್ಯಾಷನಲ್' ಕಂಪೆನಿಗೆ ವಹಿಸಿತ್ತು. ಈ ಯೋಜನೆಗೆ 26 ಎಕರೆ ಭೂಮಿಯನ್ನು ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನೀಡುವಂತೆ 2010ರ ಜುಲೈನಲ್ಲಿ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಗೆ (ಕೆಐಎಡಿಬಿ) ಸರ್ಕಾರ ನಿರ್ದೇಶನ ನೀಡಿತ್ತು.</p>.<p>ಈ ಯೋಜನೆಗೆ ಅನುಮೋದನೆ ನೀಡಿದ ಸಮಿತಿಯಲ್ಲಿ ಬಿ.ಎಸ್. ಯಡಿಯೂರಪ್ಪ, ಮುರುಗೇಶ್ ನಿರಾಣಿ, ವಿ.ಪಿ. ಬಳಿಗಾರ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು. ಆದರೆ, ಈ ಯೋಜನೆಯನ್ನು ವಾಪಸ್ ಪಡೆಯಲಾಗಿದೆ ಮತ್ತು ಈ ಯೋಜನೆಯನ್ನು ಮತ್ತೊಂದು ಕಂಪೆನಿಗೆ ನೀಡಲಾಗಿದೆ ಎಂದು 2011ರ ಮಾರ್ಚ್ 11ರಂದು ಸರ್ಕಾರ ದಿಢೀರ್ ಆದೇಶ ಹೊರಡಿಸಿತು. <br /> <br /> ನಂತರ ಬಿ.ಎಸ್. ಯಡಿಯೂರಪ್ಪ, ಇತರರು ಸೇರಿಕೊಂಡು ತಮ್ಮ ಕಂಪೆನಿಯ ನಕಲಿ ದಾಖಲೆಗಳನ್ನು ಸೃಷ್ಟಿಸಿ ತಮಗೆ ವಂಚನೆ ಮಾಡಿದ್ದಾರೆ ಎಂದು ಪಾಷಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು.<br /> <br /> ತಮ್ಮ ಕಂಪೆನಿ ಈ ಯೋಜನೆ ಆರಂಭಿಸಲು ಆಸಕ್ತಿ ವಹಿಸಿಲ್ಲ ಎಂದು ಈ ನಕಲಿ ದಾಖಲೆಯಲ್ಲಿ ತಿಳಿಸಲಾಗಿತ್ತು. ಈ ಯೋಜನೆಯನ್ನು ರದ್ದುಪಡಿಸುವ ಕುರಿತು 2011 ಜನವರಿ 24ರಂದೇ ಸಭೆ ನಡೆದಿತ್ತು. ಆದರೆ, ತಮ್ಮ ಕಂಪೆನಿ ಗೃಹ ನಿರ್ಮಾಣದ ಯೋಜನೆ ಆರಂಭಿಸಲು ಆಸಕ್ತಿ ವಹಿಸಿಲ್ಲ ಎಂದು ಬರೆದ ಪತ್ರವನ್ನು 2011 ಫೆ.1ರಂದು ಸ್ವೀಕರಿಸಲಾಯಿತು.</p>.<p>ಮೊದಲು ಯೋಜನೆಯನ್ನು ರದ್ದುಪಡಿಸಿದ ನಂತರವೇ ತಮ್ಮ ಕಂಪೆನಿ ಆಸಕ್ತಿ ವಹಿಸಿಲ್ಲ ಎಂದು ಸುಳ್ಳು ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದೆ. ಲೋಕಾಯುಕ್ತಕ್ಕೆ ಈ ಬಗ್ಗೆ ದೂರು ಸಲ್ಲಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಉದ್ಯಮಿಯೊಬ್ಬರಿಗೆ ದೇವನಹಳ್ಳಿ ಕೈಗಾರಿಕೆ ಪ್ರದೇಶದಲ್ಲಿನ 26 ಎಕರೆ ಭೂಮಿ ಹಂಚಿಕೆಯ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ನಿರೀಕ್ಷಣಾ ಜಾಮೀನಿನ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ ಲೋಕಾಯುಕ್ತಕ್ಕೆ ನೋಟಿಸ್ ನೀಡಿದೆ.<br /> <br /> ಉದ್ಯಮಿ ಆಲಂ ಪಾಷಾ ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಬಿ.ಎಸ್. ಯಡಿಯೂರಪ್ಪ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಯಡಿಯೂರಪ್ಪ ಅವರ ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರು ಲೋಕಾಯುಕ್ತ ಹಾಗೂ ಇತರರಿಗೆ ನೋಟಿಸ್ ನೀಡಲು ಆದೇಶಿಸಿದರು.<br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ತಮ್ಮ ಕಂಪೆನಿಗೆ ನೀಡಿದ್ದ ಯೋಜನೆಯನ್ನು ವಾಪಸ್ ಪಡೆದಿದ್ದರು ಎಂದು ಆಲಂ ಪಾಷಾ ದೂರು ಸಲ್ಲಿಸಿದ್ದರು.<br /> <br /> ಸರ್ಕಾರ ಮಧ್ಯಮ ಮತ್ತು ಕೆಳ ವರ್ಗದ ಜನರಿಗೆ ಉತ್ತಮ ಮನೆಗಳನ್ನು ನಿರ್ಮಿಸಲು ಅಂದಾಜು 600 ಕೋಟಿ ಮೊತ್ತದ ಯೋಜನೆಯನ್ನು `ಪಾಷ್ ಸ್ಪೇಸ್ ಇಂಟರ್ನ್ಯಾಷನಲ್' ಕಂಪೆನಿಗೆ ವಹಿಸಿತ್ತು. ಈ ಯೋಜನೆಗೆ 26 ಎಕರೆ ಭೂಮಿಯನ್ನು ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನೀಡುವಂತೆ 2010ರ ಜುಲೈನಲ್ಲಿ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಗೆ (ಕೆಐಎಡಿಬಿ) ಸರ್ಕಾರ ನಿರ್ದೇಶನ ನೀಡಿತ್ತು.</p>.<p>ಈ ಯೋಜನೆಗೆ ಅನುಮೋದನೆ ನೀಡಿದ ಸಮಿತಿಯಲ್ಲಿ ಬಿ.ಎಸ್. ಯಡಿಯೂರಪ್ಪ, ಮುರುಗೇಶ್ ನಿರಾಣಿ, ವಿ.ಪಿ. ಬಳಿಗಾರ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು. ಆದರೆ, ಈ ಯೋಜನೆಯನ್ನು ವಾಪಸ್ ಪಡೆಯಲಾಗಿದೆ ಮತ್ತು ಈ ಯೋಜನೆಯನ್ನು ಮತ್ತೊಂದು ಕಂಪೆನಿಗೆ ನೀಡಲಾಗಿದೆ ಎಂದು 2011ರ ಮಾರ್ಚ್ 11ರಂದು ಸರ್ಕಾರ ದಿಢೀರ್ ಆದೇಶ ಹೊರಡಿಸಿತು. <br /> <br /> ನಂತರ ಬಿ.ಎಸ್. ಯಡಿಯೂರಪ್ಪ, ಇತರರು ಸೇರಿಕೊಂಡು ತಮ್ಮ ಕಂಪೆನಿಯ ನಕಲಿ ದಾಖಲೆಗಳನ್ನು ಸೃಷ್ಟಿಸಿ ತಮಗೆ ವಂಚನೆ ಮಾಡಿದ್ದಾರೆ ಎಂದು ಪಾಷಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು.<br /> <br /> ತಮ್ಮ ಕಂಪೆನಿ ಈ ಯೋಜನೆ ಆರಂಭಿಸಲು ಆಸಕ್ತಿ ವಹಿಸಿಲ್ಲ ಎಂದು ಈ ನಕಲಿ ದಾಖಲೆಯಲ್ಲಿ ತಿಳಿಸಲಾಗಿತ್ತು. ಈ ಯೋಜನೆಯನ್ನು ರದ್ದುಪಡಿಸುವ ಕುರಿತು 2011 ಜನವರಿ 24ರಂದೇ ಸಭೆ ನಡೆದಿತ್ತು. ಆದರೆ, ತಮ್ಮ ಕಂಪೆನಿ ಗೃಹ ನಿರ್ಮಾಣದ ಯೋಜನೆ ಆರಂಭಿಸಲು ಆಸಕ್ತಿ ವಹಿಸಿಲ್ಲ ಎಂದು ಬರೆದ ಪತ್ರವನ್ನು 2011 ಫೆ.1ರಂದು ಸ್ವೀಕರಿಸಲಾಯಿತು.</p>.<p>ಮೊದಲು ಯೋಜನೆಯನ್ನು ರದ್ದುಪಡಿಸಿದ ನಂತರವೇ ತಮ್ಮ ಕಂಪೆನಿ ಆಸಕ್ತಿ ವಹಿಸಿಲ್ಲ ಎಂದು ಸುಳ್ಳು ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದೆ. ಲೋಕಾಯುಕ್ತಕ್ಕೆ ಈ ಬಗ್ಗೆ ದೂರು ಸಲ್ಲಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>