<p><strong>ಬೆಂಗಳೂರು:</strong> ರಾಜ್ಯ ಮತ್ತು ಪಕ್ಷದ ಹಿತವನ್ನು ನೋಡಿಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಕುರಿತು ಪಕ್ಷದ ಸಂಸದೀಯ ಮಂಡಳಿ ಸಭೆ ನಿರ್ಧರಿಸುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬುಧವಾರ ಇಲ್ಲಿ ತಿಳಿಸಿದರು.<br /> <br /> ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸಿರುವ ನ್ಯಾಯಾಲಯದ ತೀರ್ಪನ್ನು ಬಿಜೆಪಿ ಸ್ವಾಗತಿಸುತ್ತದೆ. ಯಡಿಯೂರಪ್ಪ ನಿರ್ದೋಷಿಯಾಗಿ ಹೊರ ಬಂದಿದ್ದಾರೆ. ಅವರ ಮೇಲಿನ ಆರೋಪಗಳನ್ನೇ ಆಧಾರವಾಗಿಟ್ಟುಕೊಂಡು ಟೀಕೆ ಮಾಡುತ್ತಿದ್ದ ಪ್ರತಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಆಗ್ರಹಿಸಿದರು.<br /> <br /> ಅಭಿವೃದ್ಧಿ, ವೈಚಾರಿಕ ಬದ್ಧತೆ ಮತ್ತು ಕಾರ್ಯಕರ್ತರ ತಂಡ...ಈ ಅಂಶಗಳ ಆಧಾರದ ಮೇಲೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸುನಿಲ್ ಕುಮಾರ್ ಜಯ ಗಳಿಸಲಿದ್ದಾರೆ. ಮೊದಲಿನಿಂದಲೂ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಬಾರಿಯೂ ಗೆಲುವು ಖಚಿತ ಎಂದರು. ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಬಿಜೆಪಿಗೆ ಸಮಾಧಾನ ತಂದಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಿದೆ. ಅಲ್ಪಸಂಖ್ಯಾತರನ್ನು ಸೆಳೆಯುವ ಕಾಂಗ್ರೆಸ್ ಯತ್ನ ವಿಫಲವಾಗಿದೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಮತ್ತು ಪಕ್ಷದ ಹಿತವನ್ನು ನೋಡಿಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಕುರಿತು ಪಕ್ಷದ ಸಂಸದೀಯ ಮಂಡಳಿ ಸಭೆ ನಿರ್ಧರಿಸುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬುಧವಾರ ಇಲ್ಲಿ ತಿಳಿಸಿದರು.<br /> <br /> ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸಿರುವ ನ್ಯಾಯಾಲಯದ ತೀರ್ಪನ್ನು ಬಿಜೆಪಿ ಸ್ವಾಗತಿಸುತ್ತದೆ. ಯಡಿಯೂರಪ್ಪ ನಿರ್ದೋಷಿಯಾಗಿ ಹೊರ ಬಂದಿದ್ದಾರೆ. ಅವರ ಮೇಲಿನ ಆರೋಪಗಳನ್ನೇ ಆಧಾರವಾಗಿಟ್ಟುಕೊಂಡು ಟೀಕೆ ಮಾಡುತ್ತಿದ್ದ ಪ್ರತಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಆಗ್ರಹಿಸಿದರು.<br /> <br /> ಅಭಿವೃದ್ಧಿ, ವೈಚಾರಿಕ ಬದ್ಧತೆ ಮತ್ತು ಕಾರ್ಯಕರ್ತರ ತಂಡ...ಈ ಅಂಶಗಳ ಆಧಾರದ ಮೇಲೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸುನಿಲ್ ಕುಮಾರ್ ಜಯ ಗಳಿಸಲಿದ್ದಾರೆ. ಮೊದಲಿನಿಂದಲೂ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಬಾರಿಯೂ ಗೆಲುವು ಖಚಿತ ಎಂದರು. ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಬಿಜೆಪಿಗೆ ಸಮಾಧಾನ ತಂದಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಿದೆ. ಅಲ್ಪಸಂಖ್ಯಾತರನ್ನು ಸೆಳೆಯುವ ಕಾಂಗ್ರೆಸ್ ಯತ್ನ ವಿಫಲವಾಗಿದೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>