<p><strong>ಬೆಂಗಳೂರು:</strong> `ನನ್ನನ್ನು ಅಧಿಕಾರದಿಂದ ಕೆಳಗಿಳಿಸುವ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಆತುರದ ತೀರ್ಮಾನ ತೆಗೆದುಕೊಂಡಿತು~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಮಾಧಾನ ಹೊರ ಹಾಕಿದ್ದಾರೆ.<br /> <br /> ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಪಕ್ಷದ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಹಾಗೂ ಪ್ರಮುಖರ ಸಭೆಯಲ್ಲಿ ಇದೇ ಮೊದಲ ಬಾರಿಗೆ ಪಕ್ಷದ ಹೈಕಮಾಂಡ್ ವಿರುದ್ಧ ಅವರು ಟೀಕೆ ಮಾಡಿದರು ಎಂದು ಗೊತ್ತಾಗಿದೆ.<br /> <br /> `ರಾಜಕೀಯದಲ್ಲಿ ಸಹಜವಾಗಿಯೇ ಬರುವ ಆರೋಪಗಳಿಂದ ಹೈಕಮಾಂಡ್ ಆತುರದ ತೀರ್ಮಾನ ತೆಗೆದುಕೊಂಡಿತು. ಕನಿಷ್ಠ 2-3 ತಿಂಗಳು ಅವಕಾಶ ಕೊಟ್ಟಿದ್ದರೆ, ನನ್ನ ಮೇಲಿನ ಎಲ್ಲ ಆರೋಪಗಳಿಂದ ಮುಕ್ತನಾಗುತ್ತಿದ್ದೆ~ ಎಂದು ಹೇಳಿದರು.<br /> <br /> `ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಚುನಾವಣೆ ನಡೆಸಿ, ಪಕ್ಷದ ಹೈಕಮಾಂಡ್ ರಾಜ್ಯ ಬಿಜೆಪಿಯಲ್ಲಿ ಎರಡು ಬಣಗಳನ್ನು ಸೃಷ್ಟಿಸಿತು. ಸಂಸತ್ನಲ್ಲಿ ಮಾತನಾಡಲು ಸಂಸದರಿಗೆ ಅವಕಾಶ ನೀಡುತ್ತಿಲ್ಲ~ ಎಂದೂ ವರಿಷ್ಠರ ವಿರುದ್ಧ ಹರಿಹಾಯ್ದರು ಎನ್ನಲಾಗಿದೆ.<br /> <br /> `ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದ ರೀತಿ ಸರಿ ಇಲ್ಲ. ಕನಿಷ್ಠ ಗೌರವ ನೀಡಲಿಲ್ಲ. ದೆಹಲಿಯಿಂದ ಬೆಂಗಳೂರಿಗೆ ಬರುವ ವೇಳೆಗೆ ನನ್ನನ್ನು ಕಿತ್ತೊಗೆಯುವ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇದಲ್ಲದೆ, ಒಟ್ಟು ಮೂರು ಬಾರಿ ನನ್ನನ್ನು ಅಧಿಕಾರದಿಂದ ಇಳಿಸುವ ಪ್ರಯತ್ನ ನಡೆಯಿತು. ಇದೆಲ್ಲವೂ ಒಳ್ಳೆಯ ಬೆಳವಣಿಗೆ ಅಲ್ಲ~ ಎಂದು ಆಕ್ಷೇಪಿಸಿದರು.<br /> <br /> `ಇಷ್ಟಾದರೂ ನಾನು ಪಕ್ಷದಲ್ಲೇ ಇದ್ದು, ಪಕ್ಷಕ್ಕಾಗಿ ದುಡಿಯುವೆ. ಕೊಪ್ಪಳ ಉಪಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡುವೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ~ ಎಂದು ಮನವಿ ಮಾಡಿದರು. ಯಡಿಯೂರಪ್ಪ ಮಾತನಾಡಿದಾಗ ಪಕ್ಷದ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಇರಲಿಲ್ಲ.<br /> <br /> ನಂತರ, ಪಕ್ಷದ ವಕ್ತಾರ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಕೊಪ್ಪಳ ಚುನಾವಣೆ ಮತ್ತು ವಿಧಾನ ಪರಿಷತ್ತಿಗೆ ಜೂನ್ನಲ್ಲಿ ನಡೆಯುವ ಪದವೀಧರರ ಕ್ಷೇತ್ರದ ಚುನಾವಣೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಿದರು.<br /> <br /> ಕೊಪ್ಪಳ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಖಚಿತ ಎಂದು ಹೇಳಿದ ಅವರು ಪ್ರಚಾರ ತಂತ್ರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದರು.<br /> <br /> ಈ ಚುನಾವಣೆ ನಂತರ ವಿಭಾಗವಾರು ಸಮಾವೇಶಗಳನ್ನು ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಎಲ್ಲಿ, ಯಾವಾಗ ಸಭೆ ನಡೆಸಬೇಕು ಎಂಬುದರ ವಿವರಗಳನ್ನು ನಂತರದ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು.<br /> <br /> ವಿಧಾನ ಪರಿಷತ್ತಿನ ಪದವೀಧರರ ಕ್ಷೇತ್ರದ ಐದು ಸ್ಥಾನಗಳಿಗೆ ಜೂನ್ನಲ್ಲಿ ಚುನಾವಣೆ ನಡೆಯಲಿದ್ದು, ಅದರ ಪೂರ್ವ ಸಿದ್ಧತೆ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಿದರು.<br /> <br /> ಮಾಜಿ ಸಚಿವ ಬಿ.ಶ್ರೀರಾಮುಲು ಆತುರದ ನಿರ್ಧಾರ ಕೈಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದನ್ನು ಅಂಗೀಕರಿಸಬಾರದು ಎಂದು ಪಕ್ಷ ಹೇಳಿದೆ. ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ವಿರುದ್ಧದ ಆರೋಪಗಳ ಕುರಿತು ಕೇಳಿದ ಪ್ರಶ್ನೆಗೆ `ಅವರ ವಿರುದ್ಧ ಇರುವ ಆರೋಪಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಯಾವ ವರದಿಯೂ ಬಂದಿಲ್ಲ. ಬಂದ ನಂತರ ಆ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ~ ಎಂದರು.<br /> <br /> ಪಕ್ಷದ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರ ರಥಯಾತ್ರೆ ಇನ್ನೂ ದೂರ ಇದ್ದು, ಅದರ ವಿವರ ಬಂದ ನಂತರ ಆ ಕುರಿತು ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಸಚಿವ ಜಗದೀಶ ಶೆಟ್ಟರ್ ಮತ್ತಿತರ ಮುಖಂಡರು ಹಾಜರಿದ್ದರು. <br /> <br /> <strong>ಗದ್ಗದಿತರಾದ ಸಿಎಂ<br /> ಬೆಂಗಳೂರು: </strong>ಮಾಜಿ ಪ್ರಧಾನಿ ಎ.ಬಿ.ವಾಜಪೇಯಿ ಅವರನ್ನು ನೆನಪಿಸಿಕೊಂಡು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಗದ್ಗದಿತರಾದ ಪ್ರಸಂಗ ಬುಧವಾರ ನಡೆಯಿತು.<br /> <br /> ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, `2008ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಾಗ ವಾಜಪೇಯಿ ಅವರು, ನನ್ನನ್ನು ಮತ್ತು ಯಡಿಯೂರಪ್ಪ ಅವರನ್ನು ಕರೆದು ಅಭಿನಂದಿಸಿದ್ದರು. ಬೆನ್ನು ತಟ್ಟಿದ್ದರು. ಆದರೆ, ಇತ್ತೀಚೆಗೆ ಅವರನ್ನು ನೋಡಲು ದೆಹಲಿಗೆ ಹೋದಾಗ ಅವರು ಯಾವ ಮಾತನ್ನೂ ಆಡಲಿಲ್ಲ~ ಎಂದು ಹೇಳಿ ದುಃಖಿತರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ನನ್ನನ್ನು ಅಧಿಕಾರದಿಂದ ಕೆಳಗಿಳಿಸುವ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಆತುರದ ತೀರ್ಮಾನ ತೆಗೆದುಕೊಂಡಿತು~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಮಾಧಾನ ಹೊರ ಹಾಕಿದ್ದಾರೆ.<br /> <br /> ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಪಕ್ಷದ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಹಾಗೂ ಪ್ರಮುಖರ ಸಭೆಯಲ್ಲಿ ಇದೇ ಮೊದಲ ಬಾರಿಗೆ ಪಕ್ಷದ ಹೈಕಮಾಂಡ್ ವಿರುದ್ಧ ಅವರು ಟೀಕೆ ಮಾಡಿದರು ಎಂದು ಗೊತ್ತಾಗಿದೆ.<br /> <br /> `ರಾಜಕೀಯದಲ್ಲಿ ಸಹಜವಾಗಿಯೇ ಬರುವ ಆರೋಪಗಳಿಂದ ಹೈಕಮಾಂಡ್ ಆತುರದ ತೀರ್ಮಾನ ತೆಗೆದುಕೊಂಡಿತು. ಕನಿಷ್ಠ 2-3 ತಿಂಗಳು ಅವಕಾಶ ಕೊಟ್ಟಿದ್ದರೆ, ನನ್ನ ಮೇಲಿನ ಎಲ್ಲ ಆರೋಪಗಳಿಂದ ಮುಕ್ತನಾಗುತ್ತಿದ್ದೆ~ ಎಂದು ಹೇಳಿದರು.<br /> <br /> `ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಚುನಾವಣೆ ನಡೆಸಿ, ಪಕ್ಷದ ಹೈಕಮಾಂಡ್ ರಾಜ್ಯ ಬಿಜೆಪಿಯಲ್ಲಿ ಎರಡು ಬಣಗಳನ್ನು ಸೃಷ್ಟಿಸಿತು. ಸಂಸತ್ನಲ್ಲಿ ಮಾತನಾಡಲು ಸಂಸದರಿಗೆ ಅವಕಾಶ ನೀಡುತ್ತಿಲ್ಲ~ ಎಂದೂ ವರಿಷ್ಠರ ವಿರುದ್ಧ ಹರಿಹಾಯ್ದರು ಎನ್ನಲಾಗಿದೆ.<br /> <br /> `ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದ ರೀತಿ ಸರಿ ಇಲ್ಲ. ಕನಿಷ್ಠ ಗೌರವ ನೀಡಲಿಲ್ಲ. ದೆಹಲಿಯಿಂದ ಬೆಂಗಳೂರಿಗೆ ಬರುವ ವೇಳೆಗೆ ನನ್ನನ್ನು ಕಿತ್ತೊಗೆಯುವ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇದಲ್ಲದೆ, ಒಟ್ಟು ಮೂರು ಬಾರಿ ನನ್ನನ್ನು ಅಧಿಕಾರದಿಂದ ಇಳಿಸುವ ಪ್ರಯತ್ನ ನಡೆಯಿತು. ಇದೆಲ್ಲವೂ ಒಳ್ಳೆಯ ಬೆಳವಣಿಗೆ ಅಲ್ಲ~ ಎಂದು ಆಕ್ಷೇಪಿಸಿದರು.<br /> <br /> `ಇಷ್ಟಾದರೂ ನಾನು ಪಕ್ಷದಲ್ಲೇ ಇದ್ದು, ಪಕ್ಷಕ್ಕಾಗಿ ದುಡಿಯುವೆ. ಕೊಪ್ಪಳ ಉಪಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡುವೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ~ ಎಂದು ಮನವಿ ಮಾಡಿದರು. ಯಡಿಯೂರಪ್ಪ ಮಾತನಾಡಿದಾಗ ಪಕ್ಷದ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಇರಲಿಲ್ಲ.<br /> <br /> ನಂತರ, ಪಕ್ಷದ ವಕ್ತಾರ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಕೊಪ್ಪಳ ಚುನಾವಣೆ ಮತ್ತು ವಿಧಾನ ಪರಿಷತ್ತಿಗೆ ಜೂನ್ನಲ್ಲಿ ನಡೆಯುವ ಪದವೀಧರರ ಕ್ಷೇತ್ರದ ಚುನಾವಣೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಿದರು.<br /> <br /> ಕೊಪ್ಪಳ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಖಚಿತ ಎಂದು ಹೇಳಿದ ಅವರು ಪ್ರಚಾರ ತಂತ್ರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದರು.<br /> <br /> ಈ ಚುನಾವಣೆ ನಂತರ ವಿಭಾಗವಾರು ಸಮಾವೇಶಗಳನ್ನು ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಎಲ್ಲಿ, ಯಾವಾಗ ಸಭೆ ನಡೆಸಬೇಕು ಎಂಬುದರ ವಿವರಗಳನ್ನು ನಂತರದ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು.<br /> <br /> ವಿಧಾನ ಪರಿಷತ್ತಿನ ಪದವೀಧರರ ಕ್ಷೇತ್ರದ ಐದು ಸ್ಥಾನಗಳಿಗೆ ಜೂನ್ನಲ್ಲಿ ಚುನಾವಣೆ ನಡೆಯಲಿದ್ದು, ಅದರ ಪೂರ್ವ ಸಿದ್ಧತೆ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಿದರು.<br /> <br /> ಮಾಜಿ ಸಚಿವ ಬಿ.ಶ್ರೀರಾಮುಲು ಆತುರದ ನಿರ್ಧಾರ ಕೈಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದನ್ನು ಅಂಗೀಕರಿಸಬಾರದು ಎಂದು ಪಕ್ಷ ಹೇಳಿದೆ. ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ವಿರುದ್ಧದ ಆರೋಪಗಳ ಕುರಿತು ಕೇಳಿದ ಪ್ರಶ್ನೆಗೆ `ಅವರ ವಿರುದ್ಧ ಇರುವ ಆರೋಪಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಯಾವ ವರದಿಯೂ ಬಂದಿಲ್ಲ. ಬಂದ ನಂತರ ಆ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ~ ಎಂದರು.<br /> <br /> ಪಕ್ಷದ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರ ರಥಯಾತ್ರೆ ಇನ್ನೂ ದೂರ ಇದ್ದು, ಅದರ ವಿವರ ಬಂದ ನಂತರ ಆ ಕುರಿತು ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಸಚಿವ ಜಗದೀಶ ಶೆಟ್ಟರ್ ಮತ್ತಿತರ ಮುಖಂಡರು ಹಾಜರಿದ್ದರು. <br /> <br /> <strong>ಗದ್ಗದಿತರಾದ ಸಿಎಂ<br /> ಬೆಂಗಳೂರು: </strong>ಮಾಜಿ ಪ್ರಧಾನಿ ಎ.ಬಿ.ವಾಜಪೇಯಿ ಅವರನ್ನು ನೆನಪಿಸಿಕೊಂಡು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಗದ್ಗದಿತರಾದ ಪ್ರಸಂಗ ಬುಧವಾರ ನಡೆಯಿತು.<br /> <br /> ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, `2008ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಾಗ ವಾಜಪೇಯಿ ಅವರು, ನನ್ನನ್ನು ಮತ್ತು ಯಡಿಯೂರಪ್ಪ ಅವರನ್ನು ಕರೆದು ಅಭಿನಂದಿಸಿದ್ದರು. ಬೆನ್ನು ತಟ್ಟಿದ್ದರು. ಆದರೆ, ಇತ್ತೀಚೆಗೆ ಅವರನ್ನು ನೋಡಲು ದೆಹಲಿಗೆ ಹೋದಾಗ ಅವರು ಯಾವ ಮಾತನ್ನೂ ಆಡಲಿಲ್ಲ~ ಎಂದು ಹೇಳಿ ದುಃಖಿತರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>