<p><strong>ಬೆಂಗಳೂರು: </strong>ಪಕ್ಷದ ರಾಷ್ಟ್ರೀಯ ನಾಯಕರು ಹೇಳುವವರೆಗೂ ಮುಖ್ಯಮಂತ್ರಿ ಸ್ಥಾನ ಇಲ್ಲ. ಅಲ್ಲಿಯವರೆಗೂ ದಯವಿಟ್ಟು ಪಕ್ಷ ಮತ್ತು ಸರ್ಕಾರದ ಜತೆ ಸಹಕರಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಮುಖಂಡರು ಕೋರಿದ್ದಾರೆ.<br /> <br /> ಮುಖ್ಯಮಂತ್ರಿಯವರ ಗೃಹ ಕಚೇರಿ `ಕೃಷ್ಣಾ~ದಲ್ಲಿ ಶುಕ್ರವಾರ ತಡರಾತ್ರಿವರೆಗೂ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದೆ. ಮುಖ್ಯಂಮತ್ರಿ ಡಿ.ವಿ.ಸದಾನಂದ ಗೌಡ, ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಮುಖಂಡರಾದ ಸಂತೋಷ್, ಸತೀಶ್ ಸಭೆಯಲ್ಲಿ ಭಾಗವಹಿಸಿದ್ದರು. <br /> <br /> ಸಭೆಯಲ್ಲಿ ಯಡಿಯೂರಪ್ಪ ಮಾತನಾಡಿ, ತಮ್ಮ ವಿರುದ್ಧ ಗಂಭೀರವಾದ ಆರೋಪಗಳಿಲ್ಲ. ಹೀಗಾಗಿ ಮತ್ತೆ ಮುಖ್ಯಮಂತ್ರಿ ಮಾಡಬೇಕು ಎನ್ನುವ ಪ್ರಸ್ತಾಪ ಇಟ್ಟರು ಎನ್ನಲಾಗಿದೆ.<br /> <br /> ಇದಕ್ಕೆ ಪಕ್ಷದ ಮುಖಂಡರು `ನೀವು ಮತ್ತೆ ಸಿ.ಎಂ ಆಗುವುದಕ್ಕೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಅದನ್ನು ಪಕ್ಷದ ವರಿಷ್ಠರು ಹೇಳಲಿ~ ಎಂದಿದ್ದಾರೆ. <br /> <br /> ಇದಕ್ಕೆ ಯಡಿಯೂರಪ್ಪ ಅವರು, `ವರಿಷ್ಠರನ್ನು ಮನವೊಲಿಸುವ ಕೆಲಸವನ್ನೂ ನೀವೇ ಮಾಡಬೇಕು~ ಎಂದು ಸೂಚಿಸಿದ್ದಾರೆ. <br /> <br /> ಆದರೆ ಪಕ್ಷದ ಮುಖಂಡರು, `ರಾಜ್ಯದ ಪರಿಸ್ಥಿತಿ ಬಗ್ಗೆ ಅವರಿಗೇ ಎಲ್ಲವೂ ಗೊತ್ತಿದೆ. ಅವರಿಗೆ ವಿವರಿಸುವುದು ಏನಿದೆ~ ಎಂದು ಕೇಳಿದ್ದಾರೆ.<br /> <br /> ನಂತರ ಸದಾನಂದ ಗೌಡ ಅವರ ವಿರುದ್ಧ ಪ್ರತಿನಿತ್ಯ ಕೆಲ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆಯೂ ಚರ್ಚಿಸಲಾಗಿದೆ. <br /> <br /> ಬೀಳಗಿ ಕಾರ್ಯಕ್ರಮದಲ್ಲಿ ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರು ತಮಗೆ ಅವಮಾನ ಮಾಡಿದರು ಎಂದು ಮುಖ್ಯಮಂತ್ರಿ ಅವರೇ ಸಭೆಯಲ್ಲಿ ಪ್ರಸ್ತಾಪಿಸಿದರು.<br /> <br /> ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಯಡಿಯೂರಪ್ಪ, `ವಿಷಯ ತಿಳಿದ ತಕ್ಷಣವೇ ನಿರಾಣಿ ಅವರಿಗೆ ಬೈಯ್ದೆ~ ಎಂದು ಸಮಜಾಯಿಷಿ ನೀಡಿದ್ದಾರೆ. ಇದಕ್ಕೆ ಪಕ್ಷದ ಮುಖಂಡರು `ನೀವು ಬೈಯ್ದಿದ್ದು ಅವರಿಗೆ ಮಾತ್ರ ಗೊತ್ತಾಗಿದೆ. ಆದರೆ ನಿರಾಣಿ ಅವರು ಮುಖ್ಯಮಂತ್ರಿಯವರಿಗೆ ಅವಮಾನ ಮಾಡಿದ್ದು ಇಡೀ ರಾಜ್ಯಕ್ಕೆ ಗೊತ್ತಾಯಿತು~ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುವುದಾಗಿ ಯಡಿಯೂರಪ್ಪ ಭರವಸೆ ನೀಡಿದರು. <br /> ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳುವ ಪ್ರವಾಸದಲ್ಲಿ ಎಲ್ಲರೂ ಒಟ್ಟಿಗೆ ಭಾಗವಹಿಸಬೇಕು ಎಂಬ ತೀರ್ಮಾನಕ್ಕೆ ಮುಖಂಡರು ಬಂದರು ಎಂಬುದಾಗಿ ಗೊತ್ತಾಗಿದೆ.<br /> <br /> ವಿಧಾನಮಂಡಲ ಅಧಿವೇಶನದ ಬಳಿಕ ಅಂದರೆ, ಫೆಬ್ರುವರಿ 13 ಮತ್ತು 14ರಂದು ಎಲ್ಲ ಶಾಸಕರು, ಸಂಸದರಿಗೆ ತರಬೇತಿ ಕಾರ್ಯಕ್ರಮವನ್ನು ಕೂಡ ಆಯೋಜಿಸಲು ನಿರ್ಧರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪಕ್ಷದ ರಾಷ್ಟ್ರೀಯ ನಾಯಕರು ಹೇಳುವವರೆಗೂ ಮುಖ್ಯಮಂತ್ರಿ ಸ್ಥಾನ ಇಲ್ಲ. ಅಲ್ಲಿಯವರೆಗೂ ದಯವಿಟ್ಟು ಪಕ್ಷ ಮತ್ತು ಸರ್ಕಾರದ ಜತೆ ಸಹಕರಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಮುಖಂಡರು ಕೋರಿದ್ದಾರೆ.<br /> <br /> ಮುಖ್ಯಮಂತ್ರಿಯವರ ಗೃಹ ಕಚೇರಿ `ಕೃಷ್ಣಾ~ದಲ್ಲಿ ಶುಕ್ರವಾರ ತಡರಾತ್ರಿವರೆಗೂ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದೆ. ಮುಖ್ಯಂಮತ್ರಿ ಡಿ.ವಿ.ಸದಾನಂದ ಗೌಡ, ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಮುಖಂಡರಾದ ಸಂತೋಷ್, ಸತೀಶ್ ಸಭೆಯಲ್ಲಿ ಭಾಗವಹಿಸಿದ್ದರು. <br /> <br /> ಸಭೆಯಲ್ಲಿ ಯಡಿಯೂರಪ್ಪ ಮಾತನಾಡಿ, ತಮ್ಮ ವಿರುದ್ಧ ಗಂಭೀರವಾದ ಆರೋಪಗಳಿಲ್ಲ. ಹೀಗಾಗಿ ಮತ್ತೆ ಮುಖ್ಯಮಂತ್ರಿ ಮಾಡಬೇಕು ಎನ್ನುವ ಪ್ರಸ್ತಾಪ ಇಟ್ಟರು ಎನ್ನಲಾಗಿದೆ.<br /> <br /> ಇದಕ್ಕೆ ಪಕ್ಷದ ಮುಖಂಡರು `ನೀವು ಮತ್ತೆ ಸಿ.ಎಂ ಆಗುವುದಕ್ಕೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಅದನ್ನು ಪಕ್ಷದ ವರಿಷ್ಠರು ಹೇಳಲಿ~ ಎಂದಿದ್ದಾರೆ. <br /> <br /> ಇದಕ್ಕೆ ಯಡಿಯೂರಪ್ಪ ಅವರು, `ವರಿಷ್ಠರನ್ನು ಮನವೊಲಿಸುವ ಕೆಲಸವನ್ನೂ ನೀವೇ ಮಾಡಬೇಕು~ ಎಂದು ಸೂಚಿಸಿದ್ದಾರೆ. <br /> <br /> ಆದರೆ ಪಕ್ಷದ ಮುಖಂಡರು, `ರಾಜ್ಯದ ಪರಿಸ್ಥಿತಿ ಬಗ್ಗೆ ಅವರಿಗೇ ಎಲ್ಲವೂ ಗೊತ್ತಿದೆ. ಅವರಿಗೆ ವಿವರಿಸುವುದು ಏನಿದೆ~ ಎಂದು ಕೇಳಿದ್ದಾರೆ.<br /> <br /> ನಂತರ ಸದಾನಂದ ಗೌಡ ಅವರ ವಿರುದ್ಧ ಪ್ರತಿನಿತ್ಯ ಕೆಲ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆಯೂ ಚರ್ಚಿಸಲಾಗಿದೆ. <br /> <br /> ಬೀಳಗಿ ಕಾರ್ಯಕ್ರಮದಲ್ಲಿ ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರು ತಮಗೆ ಅವಮಾನ ಮಾಡಿದರು ಎಂದು ಮುಖ್ಯಮಂತ್ರಿ ಅವರೇ ಸಭೆಯಲ್ಲಿ ಪ್ರಸ್ತಾಪಿಸಿದರು.<br /> <br /> ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಯಡಿಯೂರಪ್ಪ, `ವಿಷಯ ತಿಳಿದ ತಕ್ಷಣವೇ ನಿರಾಣಿ ಅವರಿಗೆ ಬೈಯ್ದೆ~ ಎಂದು ಸಮಜಾಯಿಷಿ ನೀಡಿದ್ದಾರೆ. ಇದಕ್ಕೆ ಪಕ್ಷದ ಮುಖಂಡರು `ನೀವು ಬೈಯ್ದಿದ್ದು ಅವರಿಗೆ ಮಾತ್ರ ಗೊತ್ತಾಗಿದೆ. ಆದರೆ ನಿರಾಣಿ ಅವರು ಮುಖ್ಯಮಂತ್ರಿಯವರಿಗೆ ಅವಮಾನ ಮಾಡಿದ್ದು ಇಡೀ ರಾಜ್ಯಕ್ಕೆ ಗೊತ್ತಾಯಿತು~ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುವುದಾಗಿ ಯಡಿಯೂರಪ್ಪ ಭರವಸೆ ನೀಡಿದರು. <br /> ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳುವ ಪ್ರವಾಸದಲ್ಲಿ ಎಲ್ಲರೂ ಒಟ್ಟಿಗೆ ಭಾಗವಹಿಸಬೇಕು ಎಂಬ ತೀರ್ಮಾನಕ್ಕೆ ಮುಖಂಡರು ಬಂದರು ಎಂಬುದಾಗಿ ಗೊತ್ತಾಗಿದೆ.<br /> <br /> ವಿಧಾನಮಂಡಲ ಅಧಿವೇಶನದ ಬಳಿಕ ಅಂದರೆ, ಫೆಬ್ರುವರಿ 13 ಮತ್ತು 14ರಂದು ಎಲ್ಲ ಶಾಸಕರು, ಸಂಸದರಿಗೆ ತರಬೇತಿ ಕಾರ್ಯಕ್ರಮವನ್ನು ಕೂಡ ಆಯೋಜಿಸಲು ನಿರ್ಧರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>