<p><strong>ಬೆಂಗಳೂರು:</strong> ಜಿಂದಾಲ್ ಸಮೂಹದಿಂದ ಲಂಚ ಪಡೆದ ಆರೋಪದ ಮೇಲೆ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರರು ಮತ್ತು ಅಳಿಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.<br /> <br /> ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಡಿ.ಆರ್.ವೆಂಕಟಸುದರ್ಶನ್ ಅವರು ಶನಿವಾರ ಅರ್ಜಿಯ ವಿಚಾರಣೆ ನಡೆಸಿದರು. ಈ ಸಂದರ್ಭದಲ್ಲಿ ಸಿಬಿಐ ಪರ ಹಿರಿಯ ವಕೀಲ ಅಶೋಕ್ ಭಾನ್ ವಾದ ಮಂಡನೆಗೆ ಮುಂದಾದರು. ಯಡಿಯೂರಪ್ಪ ಅವರ ಪುತ್ರರಾದ ಬಿ.ವೈ.ರಾಘವೇಂದ್ರ ಮತ್ತು ಬಿ.ವೈ.ವಿಜಯೇಂದ್ರ ಪರ ವಕೀಲ ಸಿ.ವಿ.ನಾಗೇಶ್ ಅವರು ಭಾನ್ ಅವರ ವಾದ ಮಂಡನೆಗೆ ಆಕ್ಷೇಪ ಎತ್ತಿದರು.<br /> <br /> `ಭಾನ್ ಅವರು ಈ ನ್ಯಾಯಾಲಯದ ಅಧಿಕೃತ ಪಬ್ಲಿಕ್ ಪ್ರಾಸಿಕ್ಯೂಟರ್ ಅಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ಅವರಿಗೆ ವಾದ ಮಂಡಿಸಲು ಅವಕಾಶವಿಲ್ಲ~ ಎಂದು ನಾಗೇಶ್ ವಾದಿಸಿದರು. ಆದರೆ, ನಾಗೇಶ್ ವಾದವನ್ನು ಮಾನ್ಯ ಮಾಡದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ ಭಾನ್, `ಈ ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿದೆ. ಈಗ ನನಗೆ ವಾದಿಸುವ ಅವಕಾಶವಿದೆ. ವಿಚಾರಣೆಯ ಹಂತದಲ್ಲಿ ಮಾತ್ರ ಅಂತಹ ನಿಯಮ ಅನ್ವಯವಾಗುತ್ತದೆ~ ಎಂದರು.<br /> <br /> ಪ್ರಕರಣದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ನ್ಯಾಯಾಧೀಶರು, ಸಿಬಿಐ ಪರ ಯಾರು ವಾದ ಮಂಡಿಸಬೇಕು ಎಂಬುದರ ಕುರಿತು ಅದೇ ದಿನ ಆದೇಶ ನೀಡುವುದಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಿಂದಾಲ್ ಸಮೂಹದಿಂದ ಲಂಚ ಪಡೆದ ಆರೋಪದ ಮೇಲೆ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರರು ಮತ್ತು ಅಳಿಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.<br /> <br /> ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಡಿ.ಆರ್.ವೆಂಕಟಸುದರ್ಶನ್ ಅವರು ಶನಿವಾರ ಅರ್ಜಿಯ ವಿಚಾರಣೆ ನಡೆಸಿದರು. ಈ ಸಂದರ್ಭದಲ್ಲಿ ಸಿಬಿಐ ಪರ ಹಿರಿಯ ವಕೀಲ ಅಶೋಕ್ ಭಾನ್ ವಾದ ಮಂಡನೆಗೆ ಮುಂದಾದರು. ಯಡಿಯೂರಪ್ಪ ಅವರ ಪುತ್ರರಾದ ಬಿ.ವೈ.ರಾಘವೇಂದ್ರ ಮತ್ತು ಬಿ.ವೈ.ವಿಜಯೇಂದ್ರ ಪರ ವಕೀಲ ಸಿ.ವಿ.ನಾಗೇಶ್ ಅವರು ಭಾನ್ ಅವರ ವಾದ ಮಂಡನೆಗೆ ಆಕ್ಷೇಪ ಎತ್ತಿದರು.<br /> <br /> `ಭಾನ್ ಅವರು ಈ ನ್ಯಾಯಾಲಯದ ಅಧಿಕೃತ ಪಬ್ಲಿಕ್ ಪ್ರಾಸಿಕ್ಯೂಟರ್ ಅಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ಅವರಿಗೆ ವಾದ ಮಂಡಿಸಲು ಅವಕಾಶವಿಲ್ಲ~ ಎಂದು ನಾಗೇಶ್ ವಾದಿಸಿದರು. ಆದರೆ, ನಾಗೇಶ್ ವಾದವನ್ನು ಮಾನ್ಯ ಮಾಡದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ ಭಾನ್, `ಈ ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿದೆ. ಈಗ ನನಗೆ ವಾದಿಸುವ ಅವಕಾಶವಿದೆ. ವಿಚಾರಣೆಯ ಹಂತದಲ್ಲಿ ಮಾತ್ರ ಅಂತಹ ನಿಯಮ ಅನ್ವಯವಾಗುತ್ತದೆ~ ಎಂದರು.<br /> <br /> ಪ್ರಕರಣದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ನ್ಯಾಯಾಧೀಶರು, ಸಿಬಿಐ ಪರ ಯಾರು ವಾದ ಮಂಡಿಸಬೇಕು ಎಂಬುದರ ಕುರಿತು ಅದೇ ದಿನ ಆದೇಶ ನೀಡುವುದಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>