<p>ಬೀದರ್: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಾರಿಗೆ ತಂದ ಜನಪರ ಯೋಜನೆಗಳನ್ನು ಸದ್ಯ ಆಡಳಿತದ ಹೊಣೆ ಹೊತ್ತವರು ನಿರ್ಲಕ್ಷಿಸುತ್ತಿದ್ದಾರೆ ಎಂದು ಸಹಕಾರ ಸಚಿವ ಬಿ.ಜೆ. ಪುಟ್ಟಸ್ವಾಮಿ ಆರೋಪಿಸಿದರು.<br /> <br /> ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ ಮತ್ತಿತರ ಯೋಜನೆಗಳಿಗೆ ನಿಧಾನಗತಿ ನೀಡಲಾಗಿದೆ. <br /> <br /> ಜನಸಾಮಾನ್ಯರು, ರೈತರು ಹಾಗೂ ವಿವಿಧ ವರ್ಗಗಳ ಅಭಿವೃದ್ಧಿಗೆ ಅವಕಾಶ ಕಲ್ಪಿಸಲಿದ್ದ ಯೋಜನೆಗಳು ಇದೀಗ ಮೂಲೆಗುಂಪಾಗುವಂತಾಗಿದೆ ಎಂದು ಭಾನುವಾರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ಅಸಮಾಧಾನ ವ್ಯಕ್ತಪಡಿಸಿದರು. `ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡುವ ಯತ್ನದಲ್ಲಿ ಬಿಜೆಪಿಗೆ ಹಾನಿಯಾಗಿದೆಯೇ ಹೊರತು ಯಡಿಯೂರಪ್ಪ ಅವರಿಗೆ ಅಲ್ಲ~. <br /> <br /> ಯಡಿಯೂರಪ್ಪ ಅವರಿಗೆ ಸಾಕಷ್ಟು ತೊಂದರೆ ನೀಡಲಾಗಿದೆ. ಇದರಿಂದ ಬೇಸತ್ತು ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ ಎಂದು ಹೇಳಿದರು.<br /> <br /> ಲೋಕಾಯುಕ್ತ ಸಂತೋಷ್ ಹೆಗ್ಡೆ ಏಕಪಕ್ಷೀಯ ವರದಿ ನೀಡಿದ್ದರು. ಅದರ ಪರಿಣಾಮವಾಗಿ ಯಡಿಯೂರಪ್ಪನವರ ವಿರುದ್ಧ ಪ್ರಕರಣ ದಾಖಲಾಯಿತು. ಆದರೆ, ಆಗಿನ ಸಂದರ್ಭದಲ್ಲಿ ಹೈಕಮಾಂಡ್ ಇದನ್ನು ಪರಿಶೀಲಿಸಲು ಸಮಯಾವಕಾಶ ನೀಡಲಿಲ್ಲ. <br /> <br /> ಇದರಿಂದಾಗಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕಾಯಿತು ಎಂದು ತಿಳಿಸಿದರು.<br /> ಒಬ್ಬ ಶಾಸಕರ ಬೆಂಬಲವೂ ಇಲ್ಲದ ಸದಾನಂದಗೌಡರನ್ನು ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆ ಮೇಲೆ ಕೂರಿಸಿದರು. ಆದರೆ, ಸದಾನಂದಗೌಡರು, ಯಡಿಯೂರಪ್ಪ ಅವರ ಪ್ರಕರಣದಲ್ಲಿ ಕೇಂದ್ರ ಸರ್ಕಾರ ವರದಿ ಕೇಳಿದ 24 ಗಂಟೆಗಳಲ್ಲಿಯೇ ನೀಡಿದರು ಎಂದು ಹೇಳಿದರು.<br /> <br /> ಕಿಡ್ನಿ ಡಯಾಲಿಸಿಸ್ಗೆ ಅವಕಾಶ: ಯಶಸ್ವಿನಿ ಯೋಜನೆಯಡಿ ನೋಂದಣಿ ಮಾಡಿಸಿದ ಸದಸ್ಯರಿಗೆ ಪ್ರಸಕ್ತ ಸಾಲಿನಿಂದಲೇ ಕಿಡ್ನಿ ಡಯಾಲಿಸಿಸ್ ಸೌಲಭ್ಯ ಜಾರಿಗೊಳಿಸಲಾಗಿದೆ ಎಂದು ಹೇಳಿದರು. ಯೋಜನೆಯ ಸೌಲಭ್ಯ ಅರಿತು ಏಪ್ರಿಲ್ನಿಂದ ಈವರೆಗೆ ಸುಮಾರು 30 ಲಕ್ಷ ಜನ ಹೆಸರು ನೋಂದಣಿ ಮಾಡಿಸಿದ್ದಾರೆ ಎಂದರು. <br /> <br /> ಸ್ವಸಹಾಯ ಸಂಘಗಳ ಮಹಿಳೆಯರಿಗೆ ಹಾಲು ಮಂಡಳಿಯಿಂದ ಹಸು ಹಾಗೂ ಎಮ್ಮೆ ಖರೀದಿಸಲು 35 ಸಾವಿರ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತಿದೆ. ಈ ಪೈಕಿ ವಿಧವೆಯರಿಗೆ ಶೇ 60 ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ 75 ರಷ್ಟು ರಿಯಾಯಿತಿ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.<br /> <br /> ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಗುರುಪಾದಪ್ಪ ನಾಗಮಾರಪಳ್ಳಿ, ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ಅಧ್ಯಕ್ಷ ಶಕುಂತಲಾ ಬೆಲ್ದಾಳೆ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ್ ಕಲ್ಲೂರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಾರಿಗೆ ತಂದ ಜನಪರ ಯೋಜನೆಗಳನ್ನು ಸದ್ಯ ಆಡಳಿತದ ಹೊಣೆ ಹೊತ್ತವರು ನಿರ್ಲಕ್ಷಿಸುತ್ತಿದ್ದಾರೆ ಎಂದು ಸಹಕಾರ ಸಚಿವ ಬಿ.ಜೆ. ಪುಟ್ಟಸ್ವಾಮಿ ಆರೋಪಿಸಿದರು.<br /> <br /> ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ ಮತ್ತಿತರ ಯೋಜನೆಗಳಿಗೆ ನಿಧಾನಗತಿ ನೀಡಲಾಗಿದೆ. <br /> <br /> ಜನಸಾಮಾನ್ಯರು, ರೈತರು ಹಾಗೂ ವಿವಿಧ ವರ್ಗಗಳ ಅಭಿವೃದ್ಧಿಗೆ ಅವಕಾಶ ಕಲ್ಪಿಸಲಿದ್ದ ಯೋಜನೆಗಳು ಇದೀಗ ಮೂಲೆಗುಂಪಾಗುವಂತಾಗಿದೆ ಎಂದು ಭಾನುವಾರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ಅಸಮಾಧಾನ ವ್ಯಕ್ತಪಡಿಸಿದರು. `ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡುವ ಯತ್ನದಲ್ಲಿ ಬಿಜೆಪಿಗೆ ಹಾನಿಯಾಗಿದೆಯೇ ಹೊರತು ಯಡಿಯೂರಪ್ಪ ಅವರಿಗೆ ಅಲ್ಲ~. <br /> <br /> ಯಡಿಯೂರಪ್ಪ ಅವರಿಗೆ ಸಾಕಷ್ಟು ತೊಂದರೆ ನೀಡಲಾಗಿದೆ. ಇದರಿಂದ ಬೇಸತ್ತು ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ ಎಂದು ಹೇಳಿದರು.<br /> <br /> ಲೋಕಾಯುಕ್ತ ಸಂತೋಷ್ ಹೆಗ್ಡೆ ಏಕಪಕ್ಷೀಯ ವರದಿ ನೀಡಿದ್ದರು. ಅದರ ಪರಿಣಾಮವಾಗಿ ಯಡಿಯೂರಪ್ಪನವರ ವಿರುದ್ಧ ಪ್ರಕರಣ ದಾಖಲಾಯಿತು. ಆದರೆ, ಆಗಿನ ಸಂದರ್ಭದಲ್ಲಿ ಹೈಕಮಾಂಡ್ ಇದನ್ನು ಪರಿಶೀಲಿಸಲು ಸಮಯಾವಕಾಶ ನೀಡಲಿಲ್ಲ. <br /> <br /> ಇದರಿಂದಾಗಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕಾಯಿತು ಎಂದು ತಿಳಿಸಿದರು.<br /> ಒಬ್ಬ ಶಾಸಕರ ಬೆಂಬಲವೂ ಇಲ್ಲದ ಸದಾನಂದಗೌಡರನ್ನು ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆ ಮೇಲೆ ಕೂರಿಸಿದರು. ಆದರೆ, ಸದಾನಂದಗೌಡರು, ಯಡಿಯೂರಪ್ಪ ಅವರ ಪ್ರಕರಣದಲ್ಲಿ ಕೇಂದ್ರ ಸರ್ಕಾರ ವರದಿ ಕೇಳಿದ 24 ಗಂಟೆಗಳಲ್ಲಿಯೇ ನೀಡಿದರು ಎಂದು ಹೇಳಿದರು.<br /> <br /> ಕಿಡ್ನಿ ಡಯಾಲಿಸಿಸ್ಗೆ ಅವಕಾಶ: ಯಶಸ್ವಿನಿ ಯೋಜನೆಯಡಿ ನೋಂದಣಿ ಮಾಡಿಸಿದ ಸದಸ್ಯರಿಗೆ ಪ್ರಸಕ್ತ ಸಾಲಿನಿಂದಲೇ ಕಿಡ್ನಿ ಡಯಾಲಿಸಿಸ್ ಸೌಲಭ್ಯ ಜಾರಿಗೊಳಿಸಲಾಗಿದೆ ಎಂದು ಹೇಳಿದರು. ಯೋಜನೆಯ ಸೌಲಭ್ಯ ಅರಿತು ಏಪ್ರಿಲ್ನಿಂದ ಈವರೆಗೆ ಸುಮಾರು 30 ಲಕ್ಷ ಜನ ಹೆಸರು ನೋಂದಣಿ ಮಾಡಿಸಿದ್ದಾರೆ ಎಂದರು. <br /> <br /> ಸ್ವಸಹಾಯ ಸಂಘಗಳ ಮಹಿಳೆಯರಿಗೆ ಹಾಲು ಮಂಡಳಿಯಿಂದ ಹಸು ಹಾಗೂ ಎಮ್ಮೆ ಖರೀದಿಸಲು 35 ಸಾವಿರ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತಿದೆ. ಈ ಪೈಕಿ ವಿಧವೆಯರಿಗೆ ಶೇ 60 ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ 75 ರಷ್ಟು ರಿಯಾಯಿತಿ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.<br /> <br /> ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಗುರುಪಾದಪ್ಪ ನಾಗಮಾರಪಳ್ಳಿ, ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ಅಧ್ಯಕ್ಷ ಶಕುಂತಲಾ ಬೆಲ್ದಾಳೆ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ್ ಕಲ್ಲೂರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>