<p><strong>ನವದೆಹಲಿ: </strong>ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಥಮ ಮಾಹಿತಿ ವರದಿಯನ್ನು ರದ್ದು ಮಾಡಿರುವ ಹೈಕೋರ್ಟ್ ತೀರ್ಪು ಪ್ರಶ್ನಿಸಿರುವ ವಿಶೇಷ ಮೇಲ್ಮನವಿ ವಿಚಾರಣೆ ನಂತರ ಸಿಇಸಿ ವರದಿಯ ಶಿಫಾರಸುಗಳ ಬಗ್ಗೆ ಗಮನಹರಿಸುವ ಇಂಗಿತವನ್ನು ಸುಪ್ರೀಂಕೋರ್ಟ್ನ ಅರಣ್ಯ ಪೀಠ ವ್ಯಕ್ತಪಡಿಸಿದೆ.<br /> <br /> ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯಾ, ನ್ಯಾಯಮೂರ್ತಿಗಳಾದ ಅಫ್ತಾಬ್ ಆಲಂ ಮತ್ತು ಸ್ವತಂತ್ರಕುಮಾರ್ ಅವರಿದ್ದ ಅರಣ್ಯ ಪೀಠಕ್ಕೆ ಸಿಇಸಿ ವರದಿ ಸಲ್ಲಿಸಿತು. ಈ ವರದಿ ಆಧರಿಸಿ ಯಡಿಯೂರಪ್ಪ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸುವಂತೆ ಹಿರೇಮಠ ಅವರ ಪರ ವಕೀಲ ಪ್ರಶಾಂತ್ ಭೂಷಣ್ ನ್ಯಾಯಾಲಯಕ್ಕೆ ಮನವಿ ಮಾಡಿದರು.<br /> <br /> ಆದರೆ, ಭೂಷಣ್ ಅವರ ಮನವಿಯಂತೆ ತಕ್ಷಣ ಆದೇಶ ಹೊರಡಿಸಲು ನಿರಾಕರಿಸಿದ ನ್ಯಾಯಪೀಠ, `ಹೈಕೋರ್ಟ್ ತೀರ್ಪು ಪ್ರಶ್ನಿಸಿರುವ ವಿಶೇಷ ಮೇಲ್ಮನವಿ ಸೋಮವಾರ ವಿಚಾರಣೆಗೆ ಬರಲಿದೆ~ ಎಂದಷ್ಟೇ ತಿಳಿಸಿತು. <br /> <br /> ಅರಣ್ಯ ಪೀಠವು ಗಣಿಗಾರಿಕೆ ಪ್ರದೇಶದ ಪರಿಹಾರ ಮತ್ತು ಪುನರ್ವಸತಿ ವಿಷಯಗಳನ್ನು ಆದ್ಯತೆ ಮೇರೆಗೆ ವಿಚಾರಣೆಗೆ ಕೈಗೆತ್ತಿಕೊಳ್ಳುತ್ತದೆ ಎಂಬ ನೋಟಿಸ್ ಸುಪ್ರೀಂಕೋರ್ಟ್ ರಿಜಿಸ್ಟ್ರಿಯಿಂದ ಶುಕ್ರವಾರ ಪ್ರಕಟವಾಗಿತ್ತು. ಶುಕ್ರವಾರ ಪರಿಹಾರ ಮತ್ತು ಪುನರ್ವಸತಿಗೆ ಸಂಬಂಧಿಸಿದ ವಿಷಯಗಳ ವಿಚಾರಣೆಯನ್ನು ಮಾತ್ರ ನಡೆಸಲಾಗುತ್ತದೆ ಎಂಬ ಉಲ್ಲೇಖ ಈ ನೋಟಿಸ್ನಲ್ಲಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಥಮ ಮಾಹಿತಿ ವರದಿಯನ್ನು ರದ್ದು ಮಾಡಿರುವ ಹೈಕೋರ್ಟ್ ತೀರ್ಪು ಪ್ರಶ್ನಿಸಿರುವ ವಿಶೇಷ ಮೇಲ್ಮನವಿ ವಿಚಾರಣೆ ನಂತರ ಸಿಇಸಿ ವರದಿಯ ಶಿಫಾರಸುಗಳ ಬಗ್ಗೆ ಗಮನಹರಿಸುವ ಇಂಗಿತವನ್ನು ಸುಪ್ರೀಂಕೋರ್ಟ್ನ ಅರಣ್ಯ ಪೀಠ ವ್ಯಕ್ತಪಡಿಸಿದೆ.<br /> <br /> ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯಾ, ನ್ಯಾಯಮೂರ್ತಿಗಳಾದ ಅಫ್ತಾಬ್ ಆಲಂ ಮತ್ತು ಸ್ವತಂತ್ರಕುಮಾರ್ ಅವರಿದ್ದ ಅರಣ್ಯ ಪೀಠಕ್ಕೆ ಸಿಇಸಿ ವರದಿ ಸಲ್ಲಿಸಿತು. ಈ ವರದಿ ಆಧರಿಸಿ ಯಡಿಯೂರಪ್ಪ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸುವಂತೆ ಹಿರೇಮಠ ಅವರ ಪರ ವಕೀಲ ಪ್ರಶಾಂತ್ ಭೂಷಣ್ ನ್ಯಾಯಾಲಯಕ್ಕೆ ಮನವಿ ಮಾಡಿದರು.<br /> <br /> ಆದರೆ, ಭೂಷಣ್ ಅವರ ಮನವಿಯಂತೆ ತಕ್ಷಣ ಆದೇಶ ಹೊರಡಿಸಲು ನಿರಾಕರಿಸಿದ ನ್ಯಾಯಪೀಠ, `ಹೈಕೋರ್ಟ್ ತೀರ್ಪು ಪ್ರಶ್ನಿಸಿರುವ ವಿಶೇಷ ಮೇಲ್ಮನವಿ ಸೋಮವಾರ ವಿಚಾರಣೆಗೆ ಬರಲಿದೆ~ ಎಂದಷ್ಟೇ ತಿಳಿಸಿತು. <br /> <br /> ಅರಣ್ಯ ಪೀಠವು ಗಣಿಗಾರಿಕೆ ಪ್ರದೇಶದ ಪರಿಹಾರ ಮತ್ತು ಪುನರ್ವಸತಿ ವಿಷಯಗಳನ್ನು ಆದ್ಯತೆ ಮೇರೆಗೆ ವಿಚಾರಣೆಗೆ ಕೈಗೆತ್ತಿಕೊಳ್ಳುತ್ತದೆ ಎಂಬ ನೋಟಿಸ್ ಸುಪ್ರೀಂಕೋರ್ಟ್ ರಿಜಿಸ್ಟ್ರಿಯಿಂದ ಶುಕ್ರವಾರ ಪ್ರಕಟವಾಗಿತ್ತು. ಶುಕ್ರವಾರ ಪರಿಹಾರ ಮತ್ತು ಪುನರ್ವಸತಿಗೆ ಸಂಬಂಧಿಸಿದ ವಿಷಯಗಳ ವಿಚಾರಣೆಯನ್ನು ಮಾತ್ರ ನಡೆಸಲಾಗುತ್ತದೆ ಎಂಬ ಉಲ್ಲೇಖ ಈ ನೋಟಿಸ್ನಲ್ಲಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>